HMPV Virus: ಕರ್ನಾಟಕದಲ್ಲಿ ಹೊಸ ವೈರಸ್: ಇದು ಯಾರ್ಯಾರಿಗೆ ಹೆಚ್ಚು ಅಪಾಯಕಾರಿ?
ಬೆಂಗಳೂರು, ಜನವರಿ 06: ಚೀನಾ ವರ್ಷದಿಂದ ವರ್ಷಕ್ಕೆ ಇತರ ದೇಶಗಳಿಗೆ ಬಹಳ ಅಪಾಯಕಾರಿ ವೈರಸ್ಗಳನ್ನು ಕೊಡುಗೆಯಾಗಿ ನೀಡುತ್ತಿದೆ. ವಿಶ್ವಕ್ಕೆ ಕೊರೊನಾದಂತಹ ಮಹಾಮಾರಿಯನ್ನು ಕೊಡುಗೆಯಾಗಿ ನೀಡಿದ್ದ ಚೀನಾದಲ್ಲಿ ಇದೀಗ ಮತ್ತೊಂದು ವೈರಸ್ ಅಟ್ಟಹಾಸ ಜೋರಾಗಿದೆ. ಚೀನಾದಲ್ಲಿ ವೈರಸ್ ಬಂದರೆ ನಮಗೇನು ಅಂತಾ ನಿರ್ಲಕ್ಷಿಸುವ ಮುನ್ನ ಈ ಸ್ಟೋರಿ ಸಂಪೂರ್ಣವಾಗಿ ಓದಿ. ಯಾಕೆಂದರೆ ಇದೇ ವೈರಸ್ ಈಗ ನಮ್ಮ ಮನೆ ಬಾಗಿಲಿಗೆ ಬಂದು ನಿಂತಿದೆ.
ಹೌದು ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಅಂದರೆ ಹ್ಯೂಮನ್ ಮೆಟಾನ್ಯುಮೊವೈರಸ್ ಭಾರತಕ್ಕೆ ಅದರಲ್ಲೂ ನಮ್ಮ ಕರ್ನಾಟಕದ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಕರ್ನಾಟಕದಲ್ಲಿ ಹ್ಯೂಮನ್ ಮೆಟಾನ್ಯುಮೊವೈರಸ್ನ ಮೊದಲ ಕೇಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ. ಬೆಂಗಳೂರಿನ 8 ತಿಂಗಳ ಮಗುವಿಗೆ ಹ್ಯೂಮನ್ ಮೆಟಾನ್ಯುಮೊವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹ್ಯೂಮನ್ ಮೆಟಾನ್ಯುಮೊವೈರಸ್ ಲಕ್ಷಣಗಳೇನು?
ಹ್ಯೂಮನ್ ಮೆಟಾನ್ಯುಮೊವೈರಸ್ ರೋಗದ ಲಕ್ಷಣ ಸಾಮಾನ್ಯ ಜ್ವರದಂತೆ ಇರುತ್ತದೆ. ಜ್ವರ, ಮೂಗು ಸೋರುವುದು, ಗಂಟಲು ಕೆರತ ಅಥವಾ ನೋವು, ಅತಿಯಾದ ಕೆಮ್ಮು, ಉಸಿರುಗಟ್ಟುವುದು, ಇತರ ಉಸಿರಾಟದ ತೊಂದರೆಗಳ ಜೊತೆ ದೇಹದಲ್ಲಿ ದದ್ದುಗಳು ಏಕಾಏಕಿ ಕಾಣಿಸಿಕೊಳ್ಳುತ್ತದೆ.
ಹ್ಯೂಮನ್ ಮೆಟಾನ್ಯುಮೊವೈರಸ್ ಯಾರಿಗೆ ಹೆಚ್ಚು ಅಪಾಯಕಾರಿ?
ಈ ಹೊಸ ವೈರಸ್ ಆಗಿರುವ ಹ್ಯೂಮನ್ ಮೆಟಾನ್ಯುಮೊವೈರಸ್ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ಈ ಕೆಳಗಿನ ವಯಸ್ಸಿನವರು ಈ ಬಗ್ಗೆ ಹೆಚ್ಚು ಮುಂಜಾಗ್ರತಾ ಕ್ರಮ ವಹಿಸಬೇಕು.
*ನವ ಶಿಶುಗಳು
*ಚಿಕ್ಕ ಮಕ್ಕಳು
*ಹಿರಿಯ ವಯಸ್ಕರು
*ಉಸಿರಾಟ ಸಮಸ್ಯೆ ಹೊಂದಿರುವವರು
*ಹೃದಯ ಸಮಸ್ಯೆ ಹೊಂದಿರುವವರು
*ರೋಗನಿರೋಧಕ ಶಕ್ತಿ ಸಮಸ್ಯೆ ಹೊಂದಿರುವವರು ಈ ಬಗ್ಗೆ ಎಚ್ಚರ ವಹಿಸಬೇಕು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications