ಎಚ್ಎಂಪಿವಿ ವೈರಸ್: ಮತ್ತೆ ಬರಲಿದೆಯೇ ಕಡ್ಡಾಯ ಮಾಸ್ಕ್ ನೀತಿ ?
ಕೋವಿಡ್ ಭಯಾನಕ ವೈರಸ್ ಸೃಷ್ಟಿ ಮಾಡಿದ ಅವಾಂತರ, ಸಾವು - ನೋವಿನ ಸಂಕಷ್ಟಗಳಿಂದ ಈಗಷ್ಟೇ ಜಗತ್ತು ಚೇತರಿಸಿಕೊಂಡಿದೆ. 2019 ಎನ್ನುವ ವರ್ಷವನ್ನು ನೆನಪಿಸಿಕೊಂಡರೆ ಇಂದಿಗೂ ಜನ ಬೆಚ್ಚಿ ಬೀಳುವುದಿದೆ. ಕೋವಿಡ್ ತಂದ ಸಂಕಷ್ಟಗಳಿಂದ ಜಗತ್ತು ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. 2019ರ ನಂತರ 2021ರ ವರೆಗೆ ಕೋವಿಡ್ ಆತಂಕದಲ್ಲೇ ಜಗತ್ತು ಕಾಲ ದೂಡಿತ್ತು. ಈಗ ಎಚ್ಎಂಪಿವಿ ವೈರಸ್ ಸೋಂಕಿನ ಆತಂಕ ಎದುರಾಗಿದೆ. ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಈ ಸೋಂಕು ದೃಢಪಟ್ಟಿದ್ದು. ಕೋವಿಡ್ ಕಾಲದಲ್ಲಿ ಇದ್ದ ಕಡ್ಡಾಯ ಮಾಸ್ಕ್ನಂತಹ ನೀತಿಗಳು ಮರು ಜಾರಿಯಾಗುವ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ಆರೋಗ್ಯ ಇಲಾಖೆ ಈ ಬಗ್ಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ದೇಶದಲ್ಲಿ ಕೋವಿಡ್ ಸಮಯದಲ್ಲಿ ಹಲವು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗಿತ್ತು. ಅದರಲ್ಲಿ ಕಡ್ಡಾಯ ಮಾಸ್ಕ್ ನೀತಿ ಸಹ ಪ್ರಮುಖವಾಗಿದೆ. ದೇಶದಲ್ಲಿ ಇದೀಗ ಮತ್ತೆ ಎಚ್ಎಂಪಿವಿ ವೈರಸ್ ರೂಪದಲ್ಲಿ ಕೋವಿಡ್ ಮಹಾಮಾರಿ ಬರಲಿದೆಯೇ ಎನ್ನುವ ಆತಂಕ ಜನರಲ್ಲಿ ಶುರುವಾಗುತ್ತಿದೆ. ಚೀನಾದಲ್ಲಿ ಈ ವೈರಸ್ ಪ್ರಭಾವ ತೀವ್ರವಾಗಿದೆ ಎನ್ನುವ ಸುದ್ದಿಗಳು ಬಂದಿದ್ದವು.ಇದಾದ ಮೇಲೆ ಭಾರತ ಸರ್ಕಾರ ಸಹ ಈ ನಿಟ್ಟಿನಲ್ಲಿ ಮಹತ್ವದ ಆದೇಶ ಹೊರಡಿಸಿತ್ತು. ದೇಶದಲ್ಲಿ ಕಟ್ಟೆಚ್ಚರ ಹಾಗೂ ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿತ್ತು.

ಸಾಮಾನ್ಯವಾಗಿ ಕೋವಿಡ್ ಸಮಯದಲ್ಲಿ ಕೋವಿಡ್ ವೈರಸ್ ರೂಪಾಂತರ ಆಗುವುದಿದೆ. ವಿಶ್ವದಲ್ಲಿ ಕೋವಿಡ್ ಸೋಂಕು ವರದಿಯಾದ ಮೇಲೆ ಕೋವಿಡ್ ಹಲವು ರೂಪಾಂತರ ಪಡೆದುಕೊಂಡಿದೆ. ಈಗ ಬಂದಿರುವುದು ಎಚ್ಎಂಪಿವಿ ವೈರಸ್ ಅಥವಾ ಚೀನಾದ ತಳಿಯಾ ಎನ್ನುವುದು ಇನ್ನಷ್ಟೇ ದೃಢಪಡಬೇಕಿದೆ. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು, ಜನ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಮತ್ತೆ ಬರಲಿದೆ ಮಾಸ್ಕ್: ಕೋವಿಡ್ ಸಮಯದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಕಡ್ಡಾಯ ಮಾಸ್ಕ್ ನೀತಿ ಜಾರಿ ಮಾಡಲಾಗಿತ್ತು. ಕೋವಿಡ್ ಹಾಗೂ ಮಾಸ್ಕ್ ಎರಡನ್ನೂ ನೆನಪಿಸಿಕೊಂಡರೆ ಜಗತ್ತು ಈಗಲೂ ಬೆಚ್ಚಿ ಬೀಳುತ್ತೆ. ಆದರೆ, ಕೋವಿಡ್ನಂತಹ ಪ್ರಭಾವವನ್ನು ಈಗ ಬಂದಿರುವ ಎಚ್ಎಂಪಿವಿ ವೈರಸ್ ಬೀರುವುದಿಲ್ಲ ಎಂದೇ ಹೇಳಲಾಗುತ್ತಿದೆ.
ಇನ್ನು ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢಪಟ್ಟಿರುವುದರಿಂದ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಅಗತ್ಯ ಮುಂಜಾಗ್ರಾತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದೀಗ ಕೆಮ್ಮು, ಜ್ವರ ಹಾಗೂ ಕಫ ಇರುವವರು ಸಾರ್ವಜನಿಕ ಪ್ರದೇಶದಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸಬೇಕು ಎಂದು ಔಪಚಾರಿಕವಾಗಿ ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಒಂದೊಮ್ಮೆ ಸೋಂಕು ಹೆಚ್ಚಳವಾದರೆ. ಮಾಸ್ಕ್ ಧರಿಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮದಿಂದ ಸಾರ್ವಜನಿಕ ಸಮೂಹ ಸಾರಿಗೆಗಳಾದ ಬಸ್, ಟ್ರೈನ್ ಹಾಗೂ ಜನನಿಬಿಡಿ ಪ್ರದೇಶಗಳಲ್ಲಿ ಓಡಾಡುವಾಗ ಮಾಸ್ಕ್ ಧರಿಸುವುದು ಉತ್ತಮವಾಗಿದೆ.
ಈ ಸೋಂಕು ನಿಯಂತ್ರಣ ಅಥವಾ ಬಂದರೆ ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ನಿಟ್ಟಿನಲ್ಲಿ ಹಲವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications