ಹಾಸನ: ಅನಸ್ತೇಶಿಯಾ ಓವರ್ ಡೋಸ್ ಬಾಣಂತಿ ಸಾವು
ಹಾಸನ, ಮೇ 19: ಅತಿಯಾದ ಅರವಳಿಕೆ ಚುಚ್ಚುಮದ್ದಿನ ಪರಿಣಾಮ 4 ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಣಂತಿಯೊಬ್ಬರು ಹಾಸನದಲ್ಲಿ ಮೃತಪಟ್ಟಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆರೋಪಿಸಿ ಮೃತ ಮಹಿಳೆಯ ನವಜಾತ ಹೆಣ್ಣು ಮಗುವನ್ನು ಬಿಸಿಲಿನಲ್ಲಿ ಇರಿಸಿ ಹಾಸನ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು.
ಹೊಳೆನರಸೀಪುರದ ತಾಲೂಕಿನ ನ್ಯಾಮನಹಳ್ಳಿ ಗ್ರಾಮದ ರೂಪಾ (25) ಮೃತಪಟ್ಟ ಬಾಣಂತಿ. ಹೆರಿಗೆಗಾಗಿ ಕಳೆದ 4 ದಿನಗಳ ಹಿಂದೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೂಪಾ ಅವರಿಗೆ ವೈದ್ಯ ಡಾ.ರಘುಪತಿ ಅವರು ಶಸ್ತ್ರ ಚಿಕಿತ್ಸೆ ನಡೆಸಿ ಹೆರಿಗೆ ನಡೆಸಿದ್ದರು.[ಹೆಚ್ಚಿನ ಅರವಳಿಕೆ ಚುಚ್ಚುಮದ್ದಿಗೆ ಮತ್ತೊಂದು ಸಾವು]

ವೈದ್ಯೆ ಡಾ.ಶೃತಿ ಅವರು ಅರವಳಿಕೆ ನೀಡಿದ್ದು, ಅತಿಯಾದ ಅರವಳಿಕೆ ಚುಚ್ಚುಮದ್ದಿನಿಂದ ರೂಪಾ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾರೆ. ಕಳೆದ 4 ದಿನದಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಇರುವುದನ್ನು ಕಂಡು ವೈದ್ಯರಲ್ಲಿ ಪ್ರಶ್ನಿಸಿದಾಗ ಮೈಸೂರಿನಿಂದ ನುರಿತ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿ ಗುಣಮುಖರನ್ನಾಗಿ ಮಾಡುವುದಾಗಿ ಸಂಬಂಧಿಕರಿಗೆ ಹಾರಿಕೆ ಉತ್ತರ ನೀಡಿದ್ದರು .
ಆದರೆ ಮೇ.19 ಸೋಮವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ರೂಪಾ ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು, ವಿಷಯ ತಿಳಿದ ಗ್ರಾಮಸ್ಥರು ಆಸ್ಪತ್ರೆ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು.[ಬೆಂಗಳೂರು : ವೈದ್ಯನ ನಿರ್ಲಕ್ಷ್ಯದಿಂದ ಮಗು ಸಾವು]
ರೂಪಾ ಅವರ ಸಾವಿಗೆ ಅರವಳಿಕೆ ಓವರ್ ಡೋಸ್ ಕಾರಣ ಎಂದು ಸಂಬಂಧಿಕರು ಆರೋಪಿಸುತ್ತಿದ್ದರೂ, ಮರಣೋತ್ತರ ಪರೀಕ್ಷೆಯ ನಂತರವೇ ಸ್ಪಷ್ಟ ಮಾಹಿತಿ ತಿಳಿಯಬೇಕಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications