ಕರ್ನಾಟಕಾದ್ಯಂತ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ
Recommended Video

ಬೆಂಗಳೂರು, ಜನವರಿ 21: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ(111) ಸೋಮವಾರ ಶಿವೈಕ್ಯರಾಗಿದ್ದಾರೆ.
ಹೀಗಾಗಿ ಕರ್ನಾಟಕಾದ್ಯಂತ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಂಗಳವಾರ(ಜನವರಿ22)ರಂದು ಶಾಲಾ ಕಾಳೇಜುಗಳಿಗೆ ರಜೆ ಘೋಷಿಸಲಾಗಿದೆ. ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಶಿವಕುಮಾರ ಸ್ವಾಮೀಜಿಗಳು ಸೋಮವಾರ ಬೆಳಗ್ಗೆ 11.44ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಅವರ ಅಂತ್ಯ ಸಂಸ್ಕಾರ ಜನವರಿ 22 ರಂದು ಮಂಗಳವಾರ ಸಂಜೆ 4.30ಕ್ಕೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಶಿವಕುಮಾರ ಸ್ವಾಮಿಜಿಗಳಿಗೆ 111 ವರ್ಷ ವಯಸ್ಸಾಗಿತ್ತು, 11 ಹೃದಯಕ್ಕೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಯೂ ಕೂಡ ನಡೆದಿತ್ತು. ಅಂತಿಮ ದರ್ಶನಕ್ಕೆ ಆಗಮಿಸುವವರಿಗೆ ತುಮಕೂರಿನ ವಿವಿಧ ಭಾಗಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.
ಈ ಹಿಂದೆ ಸಿದ್ದಗಂಗಾ ಮಠದ ಸುತ್ತಮುತ್ತ ಪಪಲೀಸ್ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಭಾರಿ ಸಂಖ್ಯೆಯಲ್ಲಿ ಬ್ಯಾರಿಕೇಡ್ ಗಳನ್ನೂ ಅಳವಡಿಸಲಾಗಿದೆ. ತುಮಕೂರು ನಗರಾದ್ಯಂತ 20 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.
ನಾಳೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಕುಸ್ಮಾ ಸಂಘಟನಾ ಕಾರ್ಯದರ್ಶಿ ಕೆ ಮರಿಯಪ್ಪ ತಿಳಿಸಿದ್ದಾರೆ, ಚಿತ್ರೋದ್ಯಮವನ್ನು ಕೂಡ ಸ್ಥಗಿತಗೊಳಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications