Holidays: ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ನವೆಂಬರ್ 13ರಿಂದ ರಜೆ-ಎಲ್ಲಿಯವರೆಗೂ ಹಾಗೂ ಕಾರಣ ಏನು?
School-College Holidays: ಈಗಾಗಲೇ ರಾಜ್ಯದಲ್ಲಿ ಶಾಲಾ-ಕಾಜೇಜು ವಿದ್ಯಾರ್ಥಿಗಳಿಗೆ ದಸರಾ ಹಾಗೂ ದೀಪಾವಳಿ ರಜೆಯಂತೂ ಸಿಕ್ಕಿದೆ. ಇದೀಗ ಮತ್ತೆ 6 ದಿನಗಳ ಕಾಲ ರಜೆಯನ್ನು ನೀಡಲಾಗಿದೆ. ಹಾಗಾದರೆ ಎಲ್ಲಿಂದ ಎಲ್ಲಿಯವರೆಗೂ ಹಾಗೂ ಕಾರಣ ವಿಶೇಷ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈಗಾಗಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ದಸರಾ ರಜೆಯನ್ನು ಮುಗಿಸಿ, ಜೊತೆಗೆ ದೀಪಾವಳಿ ರಜೆಯನ್ನು ಕೂಡ ಸಂಭ್ರಮಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ 6 ದಿನಗಳ ಕಾಲ ರಜೆ ಇರಲಿದ್ದು, ಇದರಿಂದ ಅವರಿಗೆ ಮತ್ತೆ ರಜೆಯ ರಸದೌತಣ ಸಿಕ್ಕಂತಾಗಿದೆ.

ದಸರಾ ರಜೆ ಎಂದು ಅಕ್ಟೋಬರ್ನಲ್ಲಿ 20 ದಿನಗಳ ಕಾಲ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ದೀಪಾವಳಿ ಹಬ್ಬದ ರಜೆ ಮುಗಿಸಿ ವಿದ್ಯಾರ್ಥಿಗಳು ಮತ್ತೆ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಇದೇ ನವೆಂಬರ್ 13ರಿಂದ ಸಾಲು ರಜೆಗಳು ಸಿಗಲಿವೆ.
ರಜೆ ದಿನಗಳ ಪಟ್ಟಿ: ನವೆಂಬರ್ 13ರಿಂದ 18ರ ವರೆಗೆ ಒಟ್ಟು 6 ದಿನಗಳ ಕಾಲ ರಜೆ ಇರಲಿದೆ. ಈ ವರ್ಷದ ಕ್ಯಾಲೆಂಡರ್ ಪ್ರಕಾರ, ನವೆಂಬರ್ 13ರಂದು ತುಳಸಿ ಪೂಜೆ, ನವೆಂಬರ್ 14ರಂದು ಮಕ್ಕಳ ದಿನಾಚರಣೆ, ನವೆಂಬರ್ 15ರಂದು ಗುರುನಾನಕ್ ಜಯಂತಿ, ನವೆಂಬರ್ 16ರಂದು ಶನಿವಾರ ಕೇವಲ ಅರ್ಧ ದಿನ ಮಾತ್ರ ಶಾಲೆ, ಇನ್ನು ನವೆಂಬರ್ 17ರಂದು ರವಿವಾರ ಆದ್ದರಿಂದ ರಜೆ ಸಿಗಲಿದೆ.
ನವೆಂಬರ್ 18ರಂದು ಕನಕದಾಸ ಜಯಂತಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ರಾಜ್ಯದ ಹಲವು ಶಾಲೆಗಳಲ್ಲಿ ಈ ದಿನಂದು ರಜೆ ಇರಲಿದೆ. ಈ ಮೂಲಕ ಒಟ್ಟಾರೆಯಾಗಿ ನವೆಂಬರ್ 13ರಿಂದ ನವೆಂಬರ್ 18ರ ವರೆಗೆ ಒಟ್ಟು 6 ದಿನಗಳ ಕಾಲ ರಜೆ ಸಿಗಲಿದೆ. ಆದರೆ, ಈ ರಜೆ ನೀಡುವುದು ಶಿಕ್ಷಣ ಸಂಸ್ಥೆಗಳ ಪರಿಗಣನೆಗೆ ಬಿಟ್ಟಿದ್ದಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications