ಸದ್ಯದಲ್ಲೇ ಇವರ ಡಿವೋರ್ಸ್ ಆಗುತ್ತದೆ- ಪರಮೇಶ್ವರ್ ಹೀಗೆ ಹೇಳಿದ್ದು ಯಾರಿಗೆ..?
ಬೆಂಗಳೂರು, ಆಗಸ್ಟ್ 03: ಮೈಸೂರು ಅಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಮೂಲಕ ಹೋರಾಟವನ್ನು ತೀವ್ರಗೊಳಿಸಿದೆ. ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ಕಾರ್ಯಕ್ರಮದಲ್ಲಿಮಾತನಾಡಿದ ಜಿ. ಪರಮೇಶ್ವರ್, ರಾಜ್ಯದಲ್ಲಿ ನಮಗೆ ಇನ್ನು ಮೇಲೆ ಸ್ಥಾನ ಇಲ್ಲ ಎಂದು ಭಾರತೀಯ ಜನತಾ ಪಾರ್ಟಿ ಮತ್ತು ಜನತಾ ದಳಕ್ಕೆ ಗೊತ್ತಾಗಿದೆ. ಇಲ್ಲ ಸಲ್ಲದ ಆಪಾದನೆಗಳನ್ನು ಕೂಡಿ ಹಾಕಿಕೊಂಡು ಜೆಡಿಎಸ್ ಹಾಗೂ ಬಿಜೆಪಿ ನಮ್ಮ ಮೇಲೆ ಆಪಾದನೆ ಮಾಡಲು ಹೊರಟಿದ್ದಾರೆ ಎಂದರು.

ಜನತಾದಳದವರಿಗೆ ಲಾಟರಿ ಹೊಡೆಯಿತು. ಮಾನ್ಯ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿ ಬಿಟ್ಟಿತು. ಅವರು ಬಿಜೆಪಿಯವರ ಜೊತೆ ಸೇರಿಕೊಂಡಿದ್ದಾರೆ. ಮೊದಲು ನಮ್ಮ ಜೊತೆಗೂ ಸೇರಿಕೊಂಡಿದ್ದರು. ನಮ್ಮ ಜೊತೆ ಸೇರಿಕೊಂಡ ಕೇವಲ ಹದಿನಾಲ್ಕು ತಿಂಗಳಲ್ಲಿ ಅವರೇ ಮಾಡಿಕೊಂಡ ತಪ್ಪಿಗೆ ಅಧಿಕಾರ ಬಿಟ್ಟು ಹೋದರು ಎಂದು ಹೇಳಿದರು.
ಭಾರತೀಯ ಜನತಾ ಪಾರ್ಟಿಗೆ ಬಹಳ ಶೀಘ್ರವಾಗಿ ಗೊತ್ತಾಗುತ್ತದೆ ಕುಮಾರಸ್ವಾಮಿ ಹಾಗೂ ಜನತಾದಳ ಏನು ಎಂದು. ಈಗಾಗಲೇ ಗೊತ್ತಾಗಿದೆ. ನಿನ್ನೆ ದಿವಸ ನಡೆದ ಬೆಳವಣಿಗೆಯೇ ಸಾಕು ಅದಕ್ಕೆ ಉದಾಹರಣೆ ಎಂದು ಕುಮಾರಸ್ವಾಮಿ ಬಿಜೆಪಿಯ ಕೆಲ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವುದನ್ನು ನೆನಪಿಸಿಕೊಂಡರು.

ಮಾತು ಮುಂದುವರಿಸಿದ ಗೃಹ ಸಚಿವರು, ಈಗ ನಾನು ದಾರಿಯಲ್ಲಿ ಬರುವಾಗ ನೋಡಿದೆ. ಒಂದೇ ಒಂದು ಜನತಾದಳದ ಬಾವುಟ ಇಲ್ಲ. ಎಲ್ಲಾ ಬರೀ ಬಿಜೆಪಿ ಬಾವುಟ ಇದೆ. ಅಂದರೆ ಅರ್ಥ ನೀವೇನು ಮದುವೆ ಮಾಡಿಕೊಂಡಿದ್ದರಲ್ಲಾ. ಅದು ಹೆಚ್ಚು ದಿನ ನಡೆಯಲ್ಲಾ..ಡಿವೋರ್ಸ್ ಬಹಳ ಬೇಗ ಆಗುತ್ತದೆ. ಬಹಳ ಅಂದರೆ ಬಹಳ ಬೇಗ ಆಗುತ್ತದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ವ್ಯಂಗ್ಯವಾಡಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications