ಪಿಎಸ್ಐ ಪರೀಕ್ಷೆ ಮುಂದೂಡಿಕೆ: ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 10: ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು.
ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗದಿಂದ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎ ಅವರಿಗೆ ವಹಿಸಲಾಗಿದೆ. ಸೆಪ್ಟೆಂಬರ್ 22ರಂದು ಪರೀಕ್ಷೆ ನಡೆಸಲು ನಿಗಧಿ ಮಾಡಿದ್ದಾರೆ.

ಪಿಎಸ್ಐ ಪರೀಕ್ಷೆ ಬರೆಯಬೇಕಾದ ನೂರಕ್ಕು ಹೆಚ್ಚು ಆಕಾಂಕ್ಷಿಗಳು, ಯುಪಿಎಸ್ಸಿ ಮುಖ್ಯಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ ಮುಂದೂಡುವ ಕುರಿತ ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದರು.
ನಮಗೆ ಯುಪಿಎಸ್ಸಿ ಮುಖ್ಯವಲ್ಲ. ಇಲಾಖೆಯಲ್ಲಿ ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ನಿಯಮ 32 ಅಡಿ ಎಎಸ್ಐಗಳಿಗೆ ಪಿಎಸ್ಐ ಹುದ್ದೆಗೆ ಬಡ್ತಿ ನೀಡಲಾಗಿದೆ. ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸಬೇಕಾದ ಪಿಎಸ್ಐ ಇಲ್ಲವಾದರೆ, ಇಲಾಖೆ ಮುನ್ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.
ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವಾದ ಬಳಿಕ ನೇಮಕಾತಿ ನಡೆದಿಲ್ಲ. ಎಲ್ಲ ಗೊಂದಲದ ನಡುವೆಯೂ ಕೋರ್ಟ್ನಿಂದ ಅನುಮತಿ ಪಡೆದು ಮರುಪರೀಕ್ಷೆ ನಡೆಸಲಾಗಿದೆ. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಈ ನಡುವೆಯೇ ಮತ್ತೆ ಕೆಲವರು ಕೋರ್ಟ್ಗೆ ಹೋಗಿದ್ದು, ಅಂತಿಮಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿದೆ ಎಂದು ತಿಳಿಸಿದರು.
ಕಳೆದ ನಾಲ್ಕು ವರ್ಷಗಳಿಂದ ಪಿಎಸ್ಐ ನೇಮಕಾತಿ ನಡೆದಿಲ್ಲ. ಸಿಂಧುತ್ವ, ದಾಖಲಾತಿ ಪರಿಶೀಲನೆ, ತರಬೇತಿ ಪಡೆದು ಇಲಾಖೆಗೆ ಸೇರಲುಒಂದು ವರ್ಷ ಬೇಕಾಗುತ್ತದೆ. ಎರಡು ವರ್ಷ ಪ್ರೊಬೆಷನರಿ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, 402 ಪಿಎಸ್ಐ ಹುದ್ದೆಗಳಿಗೆ ಆದಾಷ್ಟು ಬೇಗ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಇದಾದ ನಂತರ 600 ಪಿಎಸ್ಐ ಹುದ್ದೆಗಳಿಗು ನೇಮಕಾತಿಗು ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
ಕೆಲ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದು, ಕೆಇಎ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಈಗ ಪರೀಕ್ಷೆ ಮುಂದೂಡಿದರೆ, ಮುಂದಿನ ಆರು ತಿಂಗಳವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ಕೆಇಎ ಅವರು ತಿಳಿಸಿದ್ದಾರೆ. ಪಿಎಸ್ಐ ಪರೀಕ್ಷೆ ಮುಂದೂಡುವಂತೆ ತಿಳಿಸಿದರೆ ಮುಂದೂಡುತ್ತಾರೆ. ಆದರೆ, ಪರೀಕ್ಷೆ ನಡೆಸಲು 6 ತಿಂಗಳು ಬೇಕಾಗುತ್ತದೆ ಎಂದು ತಿಳಿಸಿದರು.
ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ಪರಿಶೀಲಿಸುತ್ತಿದ್ದೇವೆ. ಸರ್ಕಾರಕ್ಕೆ ಯಾರ ಮೇಲೂ ಸಾಫ್ಟ್ಕಾರ್ನರ್ ಇಲ್ಲ. ದ್ವೇಷದ ರಾಜಕಾರಣ ಮಾಡಬಾರದು ಎಂಬುದು ನಮ್ಮ ಉದ್ದೇಶ. ಬಿಜೆಪಿಯವರು ದ್ವೇಷದ ರಾಜಕಾರಣ ಮುಂದುವರಿಸಿದರೆ, ನಾವು ಅದನ್ನೇ ಮಾಡಬೇಕಾಗುತ್ತದೆ ಎಂದು ಹೇಳಿದರು.
ಭಾಸ್ಕರ್ ರಾವ್ಗೆ ತಿರುಗೇಟು
ಭಾಸ್ಕರ್ ರಾವ್ ಹೇಳಿಕೆಗೆ ಪ್ರತಿಕ್ರಿಯಿಸುವುದು ಅಷ್ಟು ಸಮಂಜಸವಲ್ಲ. ಅವರು ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದವರು. ಆಗ ಸಿಸಿಬಿ ಇತ್ತಲ್ಲವೇ. ಆಗ ಭಾಸ್ಕರ್ ರಾವ್ ವಸೂಲಿ ಮಾಡಲು ಇಟ್ಟಿಕೊಂಡಿದ್ದರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ದೊಡ್ಡ ಮಟ್ಟದ ಪ್ರಕರಣಗಳನ್ನು ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಂಡಿದ್ದೇವೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯಲ್ಲಿ ರಾಜ್ಯ ಪೊಲೀಸರು ಪ್ರಮುಖ ಪಾತ್ರ ವಹಿಸಿದ್ದಾರೆ. ಆರೋಪಿಯ ಸುಳಿವು ಪತ್ತೆಹಚ್ಚಿದ್ದು ರಾಜ್ಯ ಪೊಲೀಸರು. ನಂತರ ತನಿಖೆಗೆ ಎನ್ಐಎ ಬಂದಿದೆ. ಅವರಿಗೆ ಪ್ರಾಥಮಿಕ ಮಾಹಿತಿಯನ್ನು ನೀಡಿದ್ದು ರಾಜ್ಯ ಪೊಲೀಸರು. ಮಾವು ನೀಡಿದ ಮಾಹಿತಿ ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲು ಎನ್ಐಎಗೆ ಸಹಾಯವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿಯೂ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಸುಮ್ಮನೇ ಅಸರೋಪಿಸಿದರೆ ಅವರ ಕತೆ ತೆಗೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.
-
ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ-ಅಘನಾಶಿನಿ ನದಿ ಜೋಡಣೆ ಯೋಜನೆ ಕೈಬಿಡಲು ಒತ್ತಾಯಿಸಿ ಡಿಕೆ ಶಿವಕುಮಾರ್ಗೆ ಮನವಿ -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್












Click it and Unblock the Notifications