ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್
ಶಿವಮೊಗ್ಗ, ಜುಲೈ 20: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಇರುವಕ್ಕಿ ಕೆಳದಿ ಶಿವಪ್ಪ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.
ಇರುವಕ್ಕಿ ಕೆಳದಿ ಶಿವಪ್ಪ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಆವರಣದಲ್ಲಿ ಶುಕ್ರವಾರ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪಾಲ್ಗೊಳ್ಳಲಿದ್ದು, ಈ ಸಮಯದಲ್ಲಿ ಬಿಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಜಗದೀಶ್ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಸುದೀರ್ಘ ರಾಜಕೀಯ ಅನುಭವವಿರುವ ರಾಜ್ಯ ಹಿರಿಯ ಮತ್ಸದ್ಧಿ ಬಿಎಸ್ ಯಡಿಯೂರಪ್ಪ ಅವರು ಈಗ ಗೌರವ ಡಾಕ್ಟರೇಟ್ಗೆ ಭಾಜನರಾಗಿದ್ದಾರೆ. ಯಡಿಯೂರಪ್ಪ ಅವರು ಈಗಾಗಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಸಕ್ರಿಯ ರಾಜಕೀಯದಲ್ಲಿ ಇದ್ದು, ರಾಜ್ಯದಲ್ಲಿ ಬಿಜೆಪಿ ಪಡೆಗೆ ಬೆನ್ನೆಲುಭಾಗಿ ನಿಲ್ಲುವುದಾಗಿ ತಿಳಿಸಿದ್ದಾರೆ.
ಅವರು ಮುಖ್ಯಮಂತ್ರಿಯಾಗಿದ್ದಾಗಲೆ ಅವರು 2023ರ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದರು, ಅವರು ನಿವೃತ್ತಿ ಘೋಷಿಸಿದ ಬಳಿಕ ರಾಜ್ಯದಲ್ಲಿ ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಸಿಎಂ ಹುದ್ದೆಗೆ ಬಸವರಾಜ ಬೊಮ್ಮಾಯಿ ಅವರನ್ನು ಸೂಚಿಸಿದ್ದೇ ಯಡಿಯೂರಪ್ಪ ಅವರಾಗಿದ್ದಾರೆ ಎಂದು ವರದಿಗಳು ತಿಳಿಸಿದ್ದವು.
ಸುದೀರ್ಘ ರಾಜಕೀಯ ಅನುಭವವಿರುವ ಹಿರಿಯ ಮುತ್ಸದ್ಧಿ, ಧೀಮಂತ ನಾಯಕ, ರೈತಬಂಧುಗೆ ಡಾಕ್ಟರೇಟ್ ಗೌರವ!
— BJP Karnataka (@BJP4Karnataka) July 20, 2023
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಗೌರವಕ್ಕೆ ಪಾತ್ರರಾದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರಿಗೆ ಅಭಿನಂದನೆಗಳು. pic.twitter.com/Xt3720PyCs
ಕರ್ನಾಟಕದಲ್ಲಿ ಲಿಂಗಾಯತ ನಾಯುಕರಾಗಿಯೂ ಗುರುತಿಸಿಕೊಂಡಿದ್ದ ಅವರು ಸಿಎಂ ಹುದ್ದೆಯಿಂದ ಕೆಳಗಿಳಿದಾಗ ಹಲವಾರು ಲಿಂಗಾಯತ ಮಠಗಳ ಸ್ವಾಮೀಜಿಗಳು ಆಕ್ರೋಶಗೊಂಡಿದ್ದರು, ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡಿಸಿದ್ದ ಬಿಎಸ್ ಯಡಿಯೂರಪ್ಪ ಅವರು ಸದಾ ರೈತಪರ ಕಾಳಜಿ ವಹಿಸುವ ತಮ್ಮ ರಾಜಕೀಯ ಜೀವನ ಹಲವಾರು ರಾಜಕೀಯ ಮುಖಂಡರಿಗೆ ಪ್ರೇರಣಾದಾಯಕವಾಗಿದೆ.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್ಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಸಚಿವ ಸಿಎನ್ ಅಶ್ವತ್ಥ್ ನಾರಾಯಣ ಟ್ವೀಟ್ ಮಾಡಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications