ಕೋಲಾರ : ಮರ್ಯಾದಾ ಹತ್ಯೆ, ತಂದೆಯಿಂದ ಮಗಳ ಕೊಲೆ
ಕೋಲಾರ, ಮೇ 23 : ಕೋಲಾರದಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳ ಹತ್ಯೆ ಮಾಡಿದ್ದಾನೆ. ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಿಯಾ ರೆಡ್ಡಿ (17) ತಂದೆಯಿಂದಲೇ ಕೊಲೆಯಾದವಳು. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಮಟಂಪಲ್ಲಿ ಗ್ರಾಮದ ಬೈರಾ ರೆಡ್ಡಿ ಭಾನುವಾರ ರಾತ್ರಿ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. [ಮಂಡ್ಯ : ಮೋನಿಕಾಳದ್ದು ಮರ್ಯಾದಾ ಹತ್ಯೆ]

ಪ್ರಿಯಾ ರೆಡ್ಡಿ ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಮನೆಯವರು ಆಕೆಗೆ ಬುದ್ಧಿವಾದ ಹೇಳಲು ಪ್ರಯತ್ನಿಸಿದ್ದರು. ಆದರೆ, ಆಕೆ ಕೇಳಿರಲಿಲ್ಲ. ಇದೇ ವಿಚಾರಕ್ಕೆ ಮನೆಯಲ್ಲಿ ಗಲಾಟೆ ನಡೆದಿತ್ತು. ಗಲಾಟೆ ಬಳಿಕ ಬೈರಾ ರೆಡ್ಡಿ ಮಗಳನ್ನು ಕೊಲೆ ಮಾಡಿದ್ದಾನೆ. [ಕರ್ನಾಟಕವನ್ನು ತಲ್ಲಣಿಸುವಂತೆ ಮಾಡಿರುವ ಮರ್ಯಾದಾ ಹತ್ಯೆಗಳು]
ಗ್ರಾಮದ ವೆಂಕಟರಾಮ ರೆಡ್ಡಿ ಎಂಬುವವರು ಗೌನಿಪಲ್ಲಿ ಪೊಲೀಸ್ ಠಾಣೆಗೆ ಮರ್ಯಾದಾ ಹತ್ಯೆ ಕುರಿತು ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಬೈರಾ ರೆಡ್ಡಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. [ರಾಮನಗರದಲ್ಲಿ ಮರ್ಯಾದಾ ಹತ್ಯೆ, ಪೋಷಕರ ಬಂಧನ]
ಬಡ ಕುಟುಂಬ : ಪ್ರಿಯಾ ರೆಡ್ಡಿಯ ತಂದೆ ಕೂಲಿ ಮಾಡಿ ಜೀವನ ನಡೆಸುತ್ತಿದ್ದಾರೆ. ತಾಯಿ ಟೀ ಅಂಗಡಿ ಇಟ್ಟುಕೊಂಡಿದ್ದಾರೆ. ಪ್ರಿಯಾ ರೆಡ್ಡಿ ಎಸ್ಎಸ್ಎಲ್ಸಿ ಓದುವಾಗಲೇ ಬೋವಿ ಜನಾಂಗದ ಹುಡುಗನ ಪರಿಚಯವಾಗಿತ್ತು. ವಿಜಯಾದ್ರಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪಾಸಾಗಿದ್ದ ಅವಳು ಈ ಬಾರಿ ದ್ವಿತೀಯ ಪಿಯುಸಿಗೆ ಹೋಗಬೇಕಿತ್ತು.
ಪ್ರಿಯಾ ರೆಡ್ಡಿ ಬೋವಿ ಜನಾಂಗದ ಹುಡುಗನನ್ನು ಪ್ರೀತಿಸುತ್ತಿದ್ದ ವಿಷಯ ಆಕೆಯ ಅಣ್ಣ ಶೇಖರ ರೆಡ್ಡಿಗೆ ತಿಳಿದಿತ್ತು. ಆತ ಈ ಕುರಿತು ಬುದ್ಧಿವಾದ ಹೇಳಿದ್ದ. ಆದರೆ, ಆಕೆ ಅದನ್ನು ಕೇಳಿರಲಿಲ್ಲ. ಶೇಖರ ರೆಡ್ಡಿ ಈ ಕುರಿತು ತಾಯಿಗೂ ಮಾಹಿತಿ ನೀಡಿದ್ದ. ನಂತರ ಕುಟುಂಬವರಿಗೆ ವಿಷಯ ತಿಳಿದಿತ್ತು.
ತಂದೆ-ತಾಯಿಯೂ ಈ ಕುರಿತು ಬುದ್ಧಿವಾದ ಹೇಳಿದ್ದರು. ಸಮಾಜದಲ್ಲಿ ಗೌರವದಿಂದ ಬದುಕುತ್ತಿದ್ದೇವೆ. ಪ್ರೀತಿ ಪ್ರೇಮ ಬಿಡು ಸಂಪ್ರದಾಯದಂತೆ ಮದುವೆ ಮಾಡುತ್ತೇವೆ ಎಂದು ಹೇಳಿದ್ದರು. ಆದರೂ ಪ್ರಿಯಾ ಕೇಳಿರಲಿಲ್ಲ. ಭಾನುವಾರವೂ ಮನೆಯಲ್ಲಿ ಇದೇ ವಿಚಾರಕ್ಕೆ ಜಗಳ ನಡೆದಿತ್ತು. ನಂತರ ಆಕೆಯ ಹತ್ಯೆ ನಡೆದಿದೆ.
-
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications