ಬಿಜೆಪಿಯಿಂದ ಶರತ್ ಬಚ್ಚೇಗೌಡ ಉಚ್ಛಾಟನೆ: ಯಡಿಯೂರಪ್ಪ
ಬೆಂಗಳೂರು, ನವೆಂಬರ್ 19: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪುತ್ರ ಹೊಸಕೋಟೆ ಬಿಜೆಪಿ ಮುಖಂಡ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಯಡಿಯೂರಪ್ಪ ಅವರು ಈ ಬಗ್ಗೆ ಮೌಖಿಕ ಆದೇಶ ಹೊರಡಿಸಿದ್ದು, ಅಧಿಕೃತ ಆದೇಶ ಇನ್ನಷ್ಟೆ ಹೊರಬೀಳಬೇಕಿದೆ. ಶರತ್ ಬಚ್ಚೇಗೌಡ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಉಚ್ಛಾಟಿಸಲಾಗಿದೆ.
ಎಂಟಿಬಿ ಗೆದ್ದರೆ 24 ಗಂಟೆಯಲ್ಲೇ ಸಚಿವ: ಯಡಿಯೂರಪ್ಪ
ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಅಧಿಕಾರ ಪಕ್ಷದ ರಾಜ್ಯಾಧ್ಯಕ್ಷ ನಳಿಕ ಕಟೀಲ್ ಅವರಿಗಿದ್ದು, ಅವರು ಈ ವರೆಗೆ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ, ಅಥವಾ ಅಧಿಕೃತ ಆದೇಶ ಹೊರಡಿಸಿಲ್ಲ.
ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ, ಈ ಬಾರಿ ಪಕ್ಷೇತರರಾಗಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜು ವಿರುದ್ಧ ಕಣಕ್ಕೆ ಇಳಿದಿರುವ ಕಾರಣ, ಶರತ್ ವಿರುದ್ಧ ಯಡಿಯೂರಪ್ಪ ತೀವ್ರ ಅಸಮಾಧಾನಗೊಂಡಿದ್ದು, ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಹೊಸಕೋಟೆ ಉಪ ಚುನಾವಣೆ; ಶರತ್ ಬಚ್ಚೇಗೌಡ ಸ್ಫೋಟಕ ಹೇಳಿಕೆ
ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸಿದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎನ್.ಬಚ್ಚೇಗೌಡ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಯಡಿಯೂರಪ್ಪ ಅವರು ಶರತ್ ಅವರನ್ನು ಉಚ್ಛಾಟನೆ ಮಾಡಿದ್ದಾರೆ.
ಶರತ್ ಗೆ ಪಕ್ಷದಿಂದ ಗೇಟ್ ಪಾಸ್: ಆರ್. ಅಶೋಕ್ ಫೈನಲ್ ವಾರ್ನಿಂಗ್
ಶರತ್ ಬಚ್ಚೇಗೌಡ ಹಾಗೂ ಅವರ ತಂದೆ ಸಂಸದ ಬಿ.ಎನ್.ಬಚ್ಚೇಗೌಡ ಅವರ ಬಹುಕಾಲದ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜು ಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ. ಹಾಗಾಗಿ ಶರತ್ ಬಚ್ಚೇಗೌಡ ಅವರು ಪಕ್ಷೇತರರಾಗಿ ಹೊಸಕೋಟೆಯಿಂದ ಉಪಚುನಾವಣೆ ಕಣಕ್ಕೆ ಇಳಿದಿದ್ದಾರೆ.