ಕಟುಕರ ಪಾಲಾಗುವ ಗೋವುಗಳಿಗೆ ರಕ್ಷೆ, ಆ 11ರಿಂದ ಅಭಯ ಜಾತ್ರೆ
ಭಾರತೀಯ ಗೋಸಂಪತ್ತನ್ನು ಸಂರಕ್ಷಿಸುವ ಉದ್ದೇಶದ 'ಅಭಯ ಜಾತ್ರೆ' ಇದೇ ತಿಂಗಳ 11ರಿಂದ 13ರವರೆಗೆ ಹನೂರು ತಾಲೂಕು ಕೆಂಪಯ್ಯನಹಟ್ಟಿಯಲ್ಲಿ ನಡೆಯಲಿದೆ. ರಾಮಚಂದ್ರಾಪುರ ಮಠ ಅಭಯ ಜಾತ್ರೆಯನ್ನು ಆಯೋಜಿಸುತ್ತಿದೆ.
ಬೆಂಗಳೂರು, ಆ 9: ಭಾರತೀಯ ಗೋಸಂಪತ್ತನ್ನು ಸಂರಕ್ಷಿಸುವ ಉದ್ದೇಶದ 'ಅಭಯ ಜಾತ್ರೆ' ಇದೇ ತಿಂಗಳ 11ರಿಂದ 13ರವರೆಗೆ ಚಾಮರಾಜನಗರ ಜಿಲ್ಲೆ ಹನೂರಿನ ಕೆಂಪಯ್ಯನಹಟ್ಟಿಯಲ್ಲಿ ನಡೆಯಲಿದೆ.
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿಶಿಷ್ಟ ಪರಿಕಲ್ಪನೆ ಇದಾಗಿದ್ದು, ದೇಶೀ ಗೋಸಂರಕ್ಷಣೆಯ ಉದ್ದೇಶದಿಂದ ಜಾನುವಾರು ಜಾತ್ರೆಯೊಂದನ್ನು ಹಮ್ಮಿಕೊಳ್ಲಲಾಗುತ್ತಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜಾನುವಾರುಗಳ ವಹಿವಾಟು ಈ ಜಾತ್ರೆಯಲ್ಲಿ ನಡೆಯುವ ನಿರೀಕ್ಷೆ ಇದೆ.
ಮಲೆಮಹದೇಶ್ವರ ಬೆಟ್ಟಕ್ಕೆ ಸರ್ಕಾರ ಬೇಲಿ ಹಾಕಿದ ಪರಿಣಾಮ ಜಾನುವಾರುಗಳಿಗೆ ಮೇವು ಇಲ್ಲವಾಗಿದ್ದು, ಬೆಟ್ಟದ ತಪ್ಪಲಿನ ಸಾವಿರಾರು ಗೋಪಾಲಕರು ಕಂಗಾಲಾಗಿದ್ದಾರೆ.

ಜಾನುವಾರುಗಳಿಗೆ ಪರ್ಯಾಯ ಮೇವಿನ ವ್ಯವಸ್ಥೆ ಇಲ್ಲದೇ ಗೋಸಾಕಾಣಿಕೆಯೇ ರೈತರಿಗೆ ಕಷ್ಟಕರವಾಗಿದ್ದು, ಈ ಅಸಹಾಯಕ ಪರಿಸ್ಥಿತಿಯ ಲಾಭ ಪಡೆಯಲು ಕಸಾಯಿಖಾನೆಯವರು ಹೊಂಚು ಹಾಕಿ ಸಮಯ ಕಾಯುತ್ತಿರುವ ಹಿನ್ನೆಲೆಯಲ್ಲಿ ಅಮೂಲ್ಯ ಗೋಸಂಪತ್ತು ರಕ್ಷಣೆಗೆ ಈ ಜಾತ್ರೆಯನ್ನು ಮಠ ಆಯೋಜಿಸುತ್ತಿದೆ.
ತಮಿಳುನಾಡಿನ ಗಡಿಭಾಗದ ಈರೋಡ್ ಜಿಲ್ಲೆ ಅಂದಿಯೂರಿನಲ್ಲಿ ನಡೆಯುವ ವಾರ್ಷಿಕ ಜಾನುವಾರು ಜಾತ್ರೆಯಲ್ಲಿ ಸಾವಿರಾರು ಗೋವುಗಳು ಕಟುಕರ ಪಾಲಾಗುತ್ತಿವೆ. ಇದನ್ನು ತಪ್ಪಿಸುವ ಸಲುವಾಗಿ ರಾಮಚಂದ್ರಾಪುರ ಮಠ ಹಾಗೂ ಮಲೆಮಹದೇಶ್ವರ ಗೋಪರಿವಾರದ ಸಂಯುಕ್ತ ಆಶ್ರಯದಲ್ಲಿ ಈ ಜಾತ್ರೆ ಆಯೋಜಿಸಲಾಗಿದೆ.
ಈ ಭಾಗದಲ್ಲಿ ಅಪರೂಪದ ಬರಗೂರು, ಹಳ್ಳಿಕಾರ್ ಹಾಗೂ ಆಲಂಬಾಡಿ ಗೋ ತಳಿಗಳು ಕಟುಕರ ಪಾಲಾಗದೇ ರೈತರಿಂದ ರೈತರ ಮನೆಗೇ ತಲುಪಬೇಕು ಎಂಬ ಉದ್ದೇಶದಿಂದ ಈ ಅಭಯ ಜಾತ್ರೆ ಹಮ್ಮಿಕೊಳ್ಳಲಾಗಿದೆಯೆಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೆಂಪಯ್ಯನಹಟ್ಟಿ ಗವ್ಯ ಉದ್ಯಮ ಆವರಣದಲ್ಲಿ ನಡೆಯುವ ಜಾತ್ರೆಯಲ್ಲಿ ಭಾರತೀಯ ಗೋ ತಳಿಯ ಗೋವುಗಳಿಗೆ ಮಾತ್ರ ಅವಕಾಶವಿದೆ. ಖರೀದಿಸಿದ ಗೋವುಗಳನ್ನು ರೈತರಲ್ಲದೇ ಬೇರಾರಿಗೂ ಮಾರಾಟ ಮಾಡುವಂತಿಲ್ಲ.
ಗೋವು ಖರೀದಿಸಿ ಸಾಕಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಪುನಃ ಶ್ರೀಮಠದ ಗೋಬ್ಯಾಂಕಿಗೇ ಅದನ್ನು ನೀಡಬೇಕು ಹಾಗೂ ಕೃತಕ ಗರ್ಭಧಾರಣೆ ಮಾಡಿಸುವಂತಿಲ್ಲ ಎಂಬ ಷರತ್ತುಗಳೊಂದಿಗೆ ಇಲ್ಲಿ ಜಾನುವಾರು ವಹಿವಾಟು ನಡೆಯುತ್ತದೆ.
ಜಾತ್ರೆಯಲ್ಲಿ ಭಾಗವಹಿಸಿ ಗೋವುಗಳನ್ನು ಖರೀದಿಸುವವರು ಕೃಷಿಕ ಅಥವಾ ಗೋಶಾಲೆಗೆ ಸಂಬಂಧಿಸಿದ ವ್ಯಕ್ತಿ ಎಂಬ ದಾಖಲೆಯನ್ನು ಹೊಂದಿರಬೇಕು. ವಿವರಗಳಿಗೆ ಮೊಬೈಲ್: 9663660535 ಸಂಪರ್ಕಿಸಬಹುದಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications