ಕಟುಕರ ಪಾಲಾಗುವ ಗೋವುಗಳಿಗೆ ರಕ್ಷೆ, ಆ 11ರಿಂದ ಅಭಯ ಜಾತ್ರೆ
ಭಾರತೀಯ ಗೋಸಂಪತ್ತನ್ನು ಸಂರಕ್ಷಿಸುವ ಉದ್ದೇಶದ 'ಅಭಯ ಜಾತ್ರೆ' ಇದೇ ತಿಂಗಳ 11ರಿಂದ 13ರವರೆಗೆ ಹನೂರು ತಾಲೂಕು ಕೆಂಪಯ್ಯನಹಟ್ಟಿಯಲ್ಲಿ ನಡೆಯಲಿದೆ. ರಾಮಚಂದ್ರಾಪುರ ಮಠ ಅಭಯ ಜಾತ್ರೆಯನ್ನು ಆಯೋಜಿಸುತ್ತಿದೆ.
ಬೆಂಗಳೂರು, ಆ 9: ಭಾರತೀಯ ಗೋಸಂಪತ್ತನ್ನು ಸಂರಕ್ಷಿಸುವ ಉದ್ದೇಶದ 'ಅಭಯ ಜಾತ್ರೆ' ಇದೇ ತಿಂಗಳ 11ರಿಂದ 13ರವರೆಗೆ ಚಾಮರಾಜನಗರ ಜಿಲ್ಲೆ ಹನೂರಿನ ಕೆಂಪಯ್ಯನಹಟ್ಟಿಯಲ್ಲಿ ನಡೆಯಲಿದೆ.
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿಶಿಷ್ಟ ಪರಿಕಲ್ಪನೆ ಇದಾಗಿದ್ದು, ದೇಶೀ ಗೋಸಂರಕ್ಷಣೆಯ ಉದ್ದೇಶದಿಂದ ಜಾನುವಾರು ಜಾತ್ರೆಯೊಂದನ್ನು ಹಮ್ಮಿಕೊಳ್ಲಲಾಗುತ್ತಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜಾನುವಾರುಗಳ ವಹಿವಾಟು ಈ ಜಾತ್ರೆಯಲ್ಲಿ ನಡೆಯುವ ನಿರೀಕ್ಷೆ ಇದೆ.
ಮಲೆಮಹದೇಶ್ವರ ಬೆಟ್ಟಕ್ಕೆ ಸರ್ಕಾರ ಬೇಲಿ ಹಾಕಿದ ಪರಿಣಾಮ ಜಾನುವಾರುಗಳಿಗೆ ಮೇವು ಇಲ್ಲವಾಗಿದ್ದು, ಬೆಟ್ಟದ ತಪ್ಪಲಿನ ಸಾವಿರಾರು ಗೋಪಾಲಕರು ಕಂಗಾಲಾಗಿದ್ದಾರೆ.

ಜಾನುವಾರುಗಳಿಗೆ ಪರ್ಯಾಯ ಮೇವಿನ ವ್ಯವಸ್ಥೆ ಇಲ್ಲದೇ ಗೋಸಾಕಾಣಿಕೆಯೇ ರೈತರಿಗೆ ಕಷ್ಟಕರವಾಗಿದ್ದು, ಈ ಅಸಹಾಯಕ ಪರಿಸ್ಥಿತಿಯ ಲಾಭ ಪಡೆಯಲು ಕಸಾಯಿಖಾನೆಯವರು ಹೊಂಚು ಹಾಕಿ ಸಮಯ ಕಾಯುತ್ತಿರುವ ಹಿನ್ನೆಲೆಯಲ್ಲಿ ಅಮೂಲ್ಯ ಗೋಸಂಪತ್ತು ರಕ್ಷಣೆಗೆ ಈ ಜಾತ್ರೆಯನ್ನು ಮಠ ಆಯೋಜಿಸುತ್ತಿದೆ.
ತಮಿಳುನಾಡಿನ ಗಡಿಭಾಗದ ಈರೋಡ್ ಜಿಲ್ಲೆ ಅಂದಿಯೂರಿನಲ್ಲಿ ನಡೆಯುವ ವಾರ್ಷಿಕ ಜಾನುವಾರು ಜಾತ್ರೆಯಲ್ಲಿ ಸಾವಿರಾರು ಗೋವುಗಳು ಕಟುಕರ ಪಾಲಾಗುತ್ತಿವೆ. ಇದನ್ನು ತಪ್ಪಿಸುವ ಸಲುವಾಗಿ ರಾಮಚಂದ್ರಾಪುರ ಮಠ ಹಾಗೂ ಮಲೆಮಹದೇಶ್ವರ ಗೋಪರಿವಾರದ ಸಂಯುಕ್ತ ಆಶ್ರಯದಲ್ಲಿ ಈ ಜಾತ್ರೆ ಆಯೋಜಿಸಲಾಗಿದೆ.
ಈ ಭಾಗದಲ್ಲಿ ಅಪರೂಪದ ಬರಗೂರು, ಹಳ್ಳಿಕಾರ್ ಹಾಗೂ ಆಲಂಬಾಡಿ ಗೋ ತಳಿಗಳು ಕಟುಕರ ಪಾಲಾಗದೇ ರೈತರಿಂದ ರೈತರ ಮನೆಗೇ ತಲುಪಬೇಕು ಎಂಬ ಉದ್ದೇಶದಿಂದ ಈ ಅಭಯ ಜಾತ್ರೆ ಹಮ್ಮಿಕೊಳ್ಳಲಾಗಿದೆಯೆಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೆಂಪಯ್ಯನಹಟ್ಟಿ ಗವ್ಯ ಉದ್ಯಮ ಆವರಣದಲ್ಲಿ ನಡೆಯುವ ಜಾತ್ರೆಯಲ್ಲಿ ಭಾರತೀಯ ಗೋ ತಳಿಯ ಗೋವುಗಳಿಗೆ ಮಾತ್ರ ಅವಕಾಶವಿದೆ. ಖರೀದಿಸಿದ ಗೋವುಗಳನ್ನು ರೈತರಲ್ಲದೇ ಬೇರಾರಿಗೂ ಮಾರಾಟ ಮಾಡುವಂತಿಲ್ಲ.
ಗೋವು ಖರೀದಿಸಿ ಸಾಕಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಪುನಃ ಶ್ರೀಮಠದ ಗೋಬ್ಯಾಂಕಿಗೇ ಅದನ್ನು ನೀಡಬೇಕು ಹಾಗೂ ಕೃತಕ ಗರ್ಭಧಾರಣೆ ಮಾಡಿಸುವಂತಿಲ್ಲ ಎಂಬ ಷರತ್ತುಗಳೊಂದಿಗೆ ಇಲ್ಲಿ ಜಾನುವಾರು ವಹಿವಾಟು ನಡೆಯುತ್ತದೆ.
ಜಾತ್ರೆಯಲ್ಲಿ ಭಾಗವಹಿಸಿ ಗೋವುಗಳನ್ನು ಖರೀದಿಸುವವರು ಕೃಷಿಕ ಅಥವಾ ಗೋಶಾಲೆಗೆ ಸಂಬಂಧಿಸಿದ ವ್ಯಕ್ತಿ ಎಂಬ ದಾಖಲೆಯನ್ನು ಹೊಂದಿರಬೇಕು. ವಿವರಗಳಿಗೆ ಮೊಬೈಲ್: 9663660535 ಸಂಪರ್ಕಿಸಬಹುದಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications