ರಾಮಚಂದ್ರಾಪುರ ಮಠದ ಆಡಳಿತಕ್ಕೆ ಐಎಸ್ಓ ಪ್ರಮಾಣಪತ್ರ
ಹೊಸನಗರ ರಾಮಚಂದ್ರಾಪುರ ಮಠದ ಸುವ್ಯವಸ್ಥಿತ ಆಡಳಿತ ಮತ್ತು ಸಮರ್ಥ ನಿರ್ವಹಣೆಯನ್ನು ಪ್ರಮಾಣೀಕರಿಸಿ ಜರ್ಮನ್ ಸರ್ಟ್ ಸಂಸ್ಥೆ ISO 9001:2008 ಪ್ರಮಾಣಪತ್ರವನ್ನು ಮಠಕ್ಕೆ ನೀಡಿದೆ.
ಬೆಂಗಳೂರು, ಡಿ 21: ಹೊಸನಗರ ರಾಮಚಂದ್ರಾಪುರ ಮಠದ ಸುವ್ಯವಸ್ಥಿತ ಆಡಳಿತ ಮತ್ತು ಸಮರ್ಥ ನಿರ್ವಹಣೆಯನ್ನು ಪ್ರಮಾಣೀಕರಿಸಿ ಜರ್ಮನ್ ಸರ್ಟ್ ಸಂಸ್ಥೆ ಐಎಸ್ಓ ಪ್ರಮಾಣಪತ್ರವನ್ನು ನೀಡಿದೆ.
ಹೊಸನಗರ ರಾಮಚಂದ್ರಾಪುರ ಮಠದ ಆಡಳಿತ ನಿರ್ವಹಣೆ, ಪೂಜಾ ವ್ಯವಸ್ಥೆ, ಸ್ವಚ್ಛತೆ, ಲೆಕ್ಕಪತ್ರ ನಿರ್ವಹಣೆ, ಸುರಕ್ಷೆ, ವಸತಿ ವ್ಯವಸ್ಥೆ ಹಾಗೂ ಪ್ರಸಾದ ಭೋಜನ ವ್ಯವಸ್ಥೆಗಳನ್ನು ಸಂಸ್ಥೆಯ ತಜ್ಞರ ಪರಿಶೋಧನೆಗೆ ಒಳಪಡಿಸಲಾಗಿತ್ತು. (ರಾಘವೇಶ್ವರ ಶ್ರೀಗಳ ಸಂದರ್ಶನ)
ಎಲ್ಲಾ ವ್ಯವಸ್ಥೆಗಳು ಮತ್ತು ಆಡಳಿತ ನಿರ್ವಹಣೆಯು, ISO 9001:2008 ಅರ್ಹತಾ ನಿಯಮಗಳಿಗೆ ಅನುಗುಣವಾಗಿರುವುದು ಖಾತರಿಯಾದ ಬಳಿಕ ಮಠಕ್ಕೆ ಐಎಸ್ಓ ಪ್ರಮಾಣಪತ್ರ ನೀಡಲಾಗಿದೆ.

ರಾಮಚಂದ್ರಾಪುರ ಮಠವು ಶಂಕರಾಚಾರ್ಯರಿಂದ ಸಂಸ್ಥಾಪಿಸಲ್ಪಟ್ಟ ಏಕೈಕ ಅವಿಚ್ಛಿನ್ನ ಪರಂಪರೆಯ ಪಾವಿತ್ರ್ಯತೆ ಹಾಗೂ ವೈಶಿಷ್ಟ್ಯವನ್ನು ಹೊಂದಿದ್ದಾಗಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ, ಪರಂಪರಾಗತ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಜೊತೆಜೊತೆಗೆ ದಕ್ಷ ಆಡಳಿತ ಹಾಗೂ ಹಣಕಾಸಿನ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಇಟ್ಟಿರುವ ಹೆಗ್ಗೆಳಿಕೆಯನ್ನೂ ಹೊಂದಿದೆ.
ಮಠದ ಕುರಿತಾಗಿ ನಾಡಿನಾದ್ಯಂತ ಸದಭಿಪ್ರಾಯವಿದ್ದು, ಈಗ ದೊರೆತಿರುವ ಐಎಸ್ಒ ಪ್ರಮಾಣಪತ್ರವು ಮಠದ ಸುವ್ಯವಸ್ಥಿತ ಮಾದರಿ ಆಡಳಿತಕ್ಕೆ ಕೈಗನ್ನಡಿ ಹಾಗೂ ಪಾರದರ್ಶಕ ನಿರ್ವಹಣೆಗೆ ಸಾಕ್ಷಿಯಾಗಿದೆ ಎಂದು ರಾಮಚಂದ್ರಾಪುರ ಮಠದ ಅಧಿಕಾರಿಗಳು ಹೇಳಿದ್ದಾರೆ.
ಸಂಸ್ಥೆ ಅಥವಾ ವ್ಯಕ್ತಿಗಳು ತಮ್ಮ ಹಣಕಾಸು ನಿರ್ವಹಣೆ, ಆಡಳಿತ ವ್ಯವಸ್ಥೆಯ ಗುಣಮಟ್ಟವನ್ನು ಸುಸೂತ್ರವಾಗಿ ಒಂದು ಚೌಕಟ್ಟಿನೊಳಗೆ ರೂಢಿಸಿಕೊಂಡಿರುವುದನ್ನು ಪ್ರಮಾಣೀಕರಿಸುವ ಪ್ರಮಾಣಪತ್ರ ಇದಾಗಿದ್ದು, ಮಠದ ಆಡಳಿತ ಸರಿಯಿಲ್ಲ ಎನ್ನುತ್ತಿದ್ದವರಿಗೆ ಈ ಐಎಸ್ಓ ಪ್ರಮಾಣಪತ್ರ ಸೂಕ್ತ ಉತ್ತರ ನೀಡಿದೆ ಎಂದು ಭಾವಿಸುತ್ತೇವೆ ಎಂದು ಮಠದ ಅಧಿಕಾರಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications