ರಾಮಚಂದ್ರಾಪುರ ಮಠದ ಆಡಳಿತಕ್ಕೆ ಐಎಸ್ಓ ಪ್ರಮಾಣಪತ್ರ
ಹೊಸನಗರ ರಾಮಚಂದ್ರಾಪುರ ಮಠದ ಸುವ್ಯವಸ್ಥಿತ ಆಡಳಿತ ಮತ್ತು ಸಮರ್ಥ ನಿರ್ವಹಣೆಯನ್ನು ಪ್ರಮಾಣೀಕರಿಸಿ ಜರ್ಮನ್ ಸರ್ಟ್ ಸಂಸ್ಥೆ ISO 9001:2008 ಪ್ರಮಾಣಪತ್ರವನ್ನು ಮಠಕ್ಕೆ ನೀಡಿದೆ.
ಬೆಂಗಳೂರು, ಡಿ 21: ಹೊಸನಗರ ರಾಮಚಂದ್ರಾಪುರ ಮಠದ ಸುವ್ಯವಸ್ಥಿತ ಆಡಳಿತ ಮತ್ತು ಸಮರ್ಥ ನಿರ್ವಹಣೆಯನ್ನು ಪ್ರಮಾಣೀಕರಿಸಿ ಜರ್ಮನ್ ಸರ್ಟ್ ಸಂಸ್ಥೆ ಐಎಸ್ಓ ಪ್ರಮಾಣಪತ್ರವನ್ನು ನೀಡಿದೆ.
ಹೊಸನಗರ ರಾಮಚಂದ್ರಾಪುರ ಮಠದ ಆಡಳಿತ ನಿರ್ವಹಣೆ, ಪೂಜಾ ವ್ಯವಸ್ಥೆ, ಸ್ವಚ್ಛತೆ, ಲೆಕ್ಕಪತ್ರ ನಿರ್ವಹಣೆ, ಸುರಕ್ಷೆ, ವಸತಿ ವ್ಯವಸ್ಥೆ ಹಾಗೂ ಪ್ರಸಾದ ಭೋಜನ ವ್ಯವಸ್ಥೆಗಳನ್ನು ಸಂಸ್ಥೆಯ ತಜ್ಞರ ಪರಿಶೋಧನೆಗೆ ಒಳಪಡಿಸಲಾಗಿತ್ತು. (ರಾಘವೇಶ್ವರ ಶ್ರೀಗಳ ಸಂದರ್ಶನ)
ಎಲ್ಲಾ ವ್ಯವಸ್ಥೆಗಳು ಮತ್ತು ಆಡಳಿತ ನಿರ್ವಹಣೆಯು, ISO 9001:2008 ಅರ್ಹತಾ ನಿಯಮಗಳಿಗೆ ಅನುಗುಣವಾಗಿರುವುದು ಖಾತರಿಯಾದ ಬಳಿಕ ಮಠಕ್ಕೆ ಐಎಸ್ಓ ಪ್ರಮಾಣಪತ್ರ ನೀಡಲಾಗಿದೆ.

ರಾಮಚಂದ್ರಾಪುರ ಮಠವು ಶಂಕರಾಚಾರ್ಯರಿಂದ ಸಂಸ್ಥಾಪಿಸಲ್ಪಟ್ಟ ಏಕೈಕ ಅವಿಚ್ಛಿನ್ನ ಪರಂಪರೆಯ ಪಾವಿತ್ರ್ಯತೆ ಹಾಗೂ ವೈಶಿಷ್ಟ್ಯವನ್ನು ಹೊಂದಿದ್ದಾಗಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ, ಪರಂಪರಾಗತ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಜೊತೆಜೊತೆಗೆ ದಕ್ಷ ಆಡಳಿತ ಹಾಗೂ ಹಣಕಾಸಿನ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಇಟ್ಟಿರುವ ಹೆಗ್ಗೆಳಿಕೆಯನ್ನೂ ಹೊಂದಿದೆ.
ಮಠದ ಕುರಿತಾಗಿ ನಾಡಿನಾದ್ಯಂತ ಸದಭಿಪ್ರಾಯವಿದ್ದು, ಈಗ ದೊರೆತಿರುವ ಐಎಸ್ಒ ಪ್ರಮಾಣಪತ್ರವು ಮಠದ ಸುವ್ಯವಸ್ಥಿತ ಮಾದರಿ ಆಡಳಿತಕ್ಕೆ ಕೈಗನ್ನಡಿ ಹಾಗೂ ಪಾರದರ್ಶಕ ನಿರ್ವಹಣೆಗೆ ಸಾಕ್ಷಿಯಾಗಿದೆ ಎಂದು ರಾಮಚಂದ್ರಾಪುರ ಮಠದ ಅಧಿಕಾರಿಗಳು ಹೇಳಿದ್ದಾರೆ.
ಸಂಸ್ಥೆ ಅಥವಾ ವ್ಯಕ್ತಿಗಳು ತಮ್ಮ ಹಣಕಾಸು ನಿರ್ವಹಣೆ, ಆಡಳಿತ ವ್ಯವಸ್ಥೆಯ ಗುಣಮಟ್ಟವನ್ನು ಸುಸೂತ್ರವಾಗಿ ಒಂದು ಚೌಕಟ್ಟಿನೊಳಗೆ ರೂಢಿಸಿಕೊಂಡಿರುವುದನ್ನು ಪ್ರಮಾಣೀಕರಿಸುವ ಪ್ರಮಾಣಪತ್ರ ಇದಾಗಿದ್ದು, ಮಠದ ಆಡಳಿತ ಸರಿಯಿಲ್ಲ ಎನ್ನುತ್ತಿದ್ದವರಿಗೆ ಈ ಐಎಸ್ಓ ಪ್ರಮಾಣಪತ್ರ ಸೂಕ್ತ ಉತ್ತರ ನೀಡಿದೆ ಎಂದು ಭಾವಿಸುತ್ತೇವೆ ಎಂದು ಮಠದ ಅಧಿಕಾರಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications