ಗರ್ಭಿಣಿಯರಿಗೆ, ತಾಯಂದಿರಿಗೆ ಬಿಸಿಯೂಟ ಯೋಜನೆ
ಬೆಂಗಳೂರು, ಸೆಪ್ಟೆಂಬರ್ 27: ಗರ್ಭಿಣಿಯರಿಗೆ ಹಾಗೂ ಹಾಲೂಡಿಸುವ ತಾಯಂದಿರಿಗೆ ಈವರೆಗೆ ಐಸಿಡಿಎಸ್ ಯೋಜನೆ ಅಡಿಯಲ್ಲಿ ದಿನಸಿ ನೀಡಲಾಗುತ್ತಿತ್ತು. ಅದರ ಬದಲಿಗೆ ರಾಜ್ಯ ಸರಕಾರವು ಮುಂದಿನ ತಿಂಗಳಿಂದ ಬಿಸಿಯೂಟವನ್ನೇ ನೀಡಲಿದೆ.
'ಮಾತೃಪೂರ್ಣ' ಕಾರ್ಯಕ್ರಮದ ಅಡಿಯಲ್ಲಿ ಇಂಥ ಮಹಿಳೆಯರಿಗೆ ಒಂದು ಹೊತ್ತಿನ ಬಿಸಿಯೂಟವನ್ನು ಅಂಗನವಾಡಿ ಕೇಂದ್ರಗಳ ಮೂಲಕ ವಿತರಿಸುವ ಕಾರ್ಯಕ್ಕೆ ಅಕ್ಟೋಬರ್ ಎರಡರಿಂದ ರಾಜ್ಯದಾದ್ಯಂತ ಚಾಲನೆ ದೊರೆಯಲಿದೆ.

ಆಂಧ್ರ, ತೆಲಂಗಾಣ ನಂತರ ಈ ರೀತಿ ಕಾರ್ಯಕ್ರಮವನ್ನು ಜಾರಿಗೆ ತರುತ್ತಿರುವ ಮೂರನೇ ರಾಜ್ಯ ಕರ್ನಾಟಕ. ಈ ಕಾರ್ಯಕ್ರಮದ ಮೂಲಕ ಹನ್ನೆರಡು ಲಕ್ಷ ಮಹಿಳೆಯರು ಪ್ರಯೋಜನ ಪಡೆಯಲಿದ್ದಾರೆ ಎಬ ನಿರೀಕ್ಷೆ ರಾಜ್ಯ ಸರಕಾರಕ್ಕೆ ಇದೆ. ಹೆರಿಗೆ ನಂತರ ಆರು ತಿಂಗಳ ತನಕ ಬಿಸಿಯೂಟ ವಿತರಿಸಲಾಗುತ್ತದೆ.
ದಿನಸಿ ಪದಾರ್ಥಗಳು ಕೊಟ್ಟರೂ ಅಡುಗೆ ಮಾಡಿಕೊಳ್ಳಬೇಕು, ಕುಟುಂಬದ ಇತರ ಸದಸ್ಯರ ಜತೆಗೆ ಆಹಾರವನ್ನು ಹಂಚಿಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ತಿಳಿಸಿದ್ದಾರೆ.
ಫಲಾನುಭವಿಯ ಸಂಬಂಧಿಕರು ಟಿಫನ್ ಬಾಕ್ಸ್ ತಂದು, ತೆಗೆದುಕೊಂಡು ಹೋಗಬಹುದು. ಇದು ಗರ್ಭ ಧರಿಸಿ ಎಂಟು ತಿಂಗಳು ಕಳೆದಿರುವ ಹಾಗೂ ಹೆರಿಗೆ ಆದ ನಲವತ್ತೈದು ದಿನದವರೆಗಿನ ಮಹಿಳೆಯರಿಗೆ ಅನ್ವಯ ಆಗುತ್ತದೆ ಎಂದು ಇಲಾಖೆ ನಿರ್ದೇಶಕಿ ಮಾಹಿತಿ ನೀಡಿದ್ದಾರೆ.
ಇನ್ನು ಹದಿನೆಂಟು ವಯಸ್ಸಿಗಿಂತ ಕಡಿಮೆ ಪ್ರಾಯದ ತಾಯಂದಿರಿಗೆ ಕೂಡ ಅಂಗನವಾಡಿಗಳ ಮೂಲಕ ಬಿಸಿಯೂಟ ವಿತರಿಸಲಾಗುತ್ತದೆ. ಈ ರೀತಿ ಚಿಕ್ಕವಯಸ್ಸಿನ ತಾಯಂದಿರಿಗೆ ಊಟ ನಿರಾಕರಿಸುವಂತಿಲ್ಲ. ಹಾಗಂತ ಬಾಲ್ಯವಿವಾಹವನ್ನು ಸರಕಾರ ಪ್ರೋತ್ಸಾಹಿಸುವುದಿಲ್ಲ ಎಂದು ಹೇಳಿದ್ದಾರೆ.
ಆದರೆ, ಈ ಯೋಜನೆ ಜಾರಿಗೆ ತರುವ ಮುಂಚೆ ಅಂಗನವಾಡಿಗಳಿಗೆ ಸೂಕ್ತ ಸೌಲಭ್ಯ ಒದಗಿಸಬೇಕು. ಪಾತ್ರೆಗಳು, ಅಡುಗೆ ಮಾಡುವವರು ಹಾಗೂ ಸಹಾಯಕರು ಬೇಕಾಗುತ್ತಾರೆ ಎಂದು ಕರ್ನಾಟಕ ಅಂಗನವಾಡಿ ನೌಕರರ ಒಕ್ಕೂಟದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ












Click it and Unblock the Notifications