ಲ್ಯಾಪ್ ಟಾಪ್ ಖರೀದಿ ಹಗರಣದ ತನಿಖೆಗೆ ಸದನ ಸಮಿತಿ ರಚನೆ
ಬೆಂಗಳೂರು, ನವೆಂಬರ್ 22 : ಲ್ಯಾಪ್ ಟಾಪ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ರಚನೆ ಮಾಡಲಾಗಿದೆ. ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಸದನ ಸಮಿತಿ ಅಧ್ಯಕ್ಷರಾಗಿದ್ದಾರೆ.
ಬಿಜೆಪಿಯ ರಘುನಾಥ ಮಲ್ಕಾಪುರೆ ಕಾಲೇಜು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿದ ಲ್ಯಾಪ್ ಟಾಪ್ ಖರೀದಿಯಲ್ಲಿ ಅಕ್ರಮ ನಡೆಸಿದೆ ಎಂದು ಆರೋಪಿಸಿದ್ದರು. ಸಭಾಪತಿ ಡಿ.ಎಚ್. ಶಂಕರಮೂರ್ತಿ ತನಿಖೆಗೆ ಸದನ ಸಮಿತಿ ರಚನೆ ಮಾಡುವುದಾಗಿ ಹೇಳಿದ್ದರು.

2016-17ನೇ ಸಾಲಿಗಿಂತ ಪ್ರತಿ ಲ್ಯಾಪ್ ಟಾಪ್ಗೆ 10 ಸಾವಿರ ರೂ. ಹೆಚ್ಚಿನ ದರ ನೀಡಿ ಖರೀದಿ ಮಾಡಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಲು ಕೆ.ಸಿ.ಕೊಂಡಯ್ಯ ನೇತೃತ್ವದಲ್ಲಿ ವಿಧಾನಪರಿಷತ್ ಸದನ ಸಮಿತಿ ರಚನೆ ಮಾಡಲಾಗಿದೆ. 15 ದಿನದಲ್ಲಿ ಸದನ ಸಮಿತಿ ತನ್ನ ವರದಿಯನ್ನು ನೀಡಲಿದೆ.
2016-17ನೇ ಸಾಲಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿನ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿತ್ತು. ಲ್ಯಾಪ್ ಟಾಪ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬುದು ಆರೋಪ.
ಸದನ ಸಮಿತಿ ಸದಸ್ಯರು : ಐವಾನ್ ಡಿಸೋಜಾ (ಕಾಂಗ್ರೆಸ್), ಶರಣಪ್ಪ ಮಟ್ಟೂರು (ಕಾಂಗ್ರೆಸ್), ಆರ್.ಪ್ರಸನ್ನ ಕುಮಾರ್ (ಕಾಂಗ್ರೆಸ್), ರಘುನಾಥ ಮಲ್ಕಾಪುರೆ (ಬಿಜೆಪಿ), ಅರುಣ ಶಹಾಪುರ (ಬಿಜೆಪಿ), ಕೆ.ಟಿ.ಶ್ರೀಕಂಠೇಗೌಡ (ಜೆಡಿಎಸ್).











Click it and Unblock the Notifications