HMPV ಸೋಂಕನ್ನು ತಡೆಯಲು ಪಾಲಿಸಬೇಕಾದ ಕ್ರಮಗಳು
HMPV Virus: ಚೀನಾದಲ್ಲಿ ಭೀತಿ ಹುಟ್ಟಿಸಿದ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಇದೀಗ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಈ ಮೂಲಕ ಇಲ್ಲಿನ ಜನರಿಗೆ ಸೃಷ್ಟಿಸಿದೆ. ಮತ್ತೊಂದೆಡೆ ಇದಕ್ಕೆ ಇನ್ನೂ ಯಾವುದೇ ಲಸಿಕೆ ಕಂಡುಹಿಡಿದಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ. ಹಾಗಾದರೆ ಇದನ್ನು ಹತ್ತಿರಕ್ಕೆ ಸುಳಿಯಂದತೆ ತಡೆಗಟ್ಟುವ ಕ್ರಮಗಳ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ.
ಕೆಲವರು ಹೇ.. ಇದು ಏನು ವೈರಸ್ ಎಂದು ಅಸಡ್ಡೆ ತೋರುತ್ತಾರೆ. ಆದರೆ, ಇಂತಹ ಸಣ್ಣ ನಿರ್ಲಕ್ಷವೇ ದೊಡ್ಡ ಸಮಸ್ಯೆಗೆ ಹೆಡೆಮಾಡಿಕೊಡುವ ಸಾಧ್ಯೆಗಳಿರುತ್ತವೆ. ಇಂತಹ ಘಟನೆಗಳು ಈಗಾಗಲೇ ಕೊರೊನಾ ಸಮಯದಲ್ಲಿ ನಡೆದಿವೆ. ಇನ್ನು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ತಜ್ಞರ ಪ್ರಕಾರ ಇಲ್ಲಿ ನೀಡಿರುವ ಕ್ರಮಗಳನ್ನು ಪಾಲಿಸುವುದು ಉತ್ತಮ. ಯಾಕೆಂದರೆ ಆರೋಗ್ಯ ಭಾಗ್ಯ ಎನ್ನುವ ಮಾತೇ ಇದೆ. ಇದು ಚೆನ್ನಾಗಿದ್ದಾರೆ ಏನು ಬೇಕಾದರೂ ಸಾಧಿಸಬಹದು.

ವೈರಸ್ ತಡೆಗಟ್ಟುವ ಕ್ರಮಗಳಿವು
* ಗುಣಮಟ್ಟದ ಮಾಸ್ಟ್ಗಳನ್ನು ಧರಿಸಿ
* ಸಾಬೂನು ಮತ್ತು ನೀರಿನಿಂದ ಆಗಾಗ್ಗೆ ಕೈಗಳನ್ನು ತೊಳೆಯುವು
* ಅನಾರೋಗ್ಯದ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಿ.
* ಆಗಾಗ್ಗೆ ಕೈಯಿಂದ ಸ್ಪರ್ಶಿಸಿದ ದೇಹದ ಭಾಗಗಳನ್ನು ಸ್ವಚ್ಚಗೊಳಿಸುವುದು.
* ಅನಾರೋಗ್ಯಕ್ಕೆ ತುತ್ತಾದವರ ಮನೆಗೆ ಪದೇ ಪದೇ ಹೋಗದೇ ನಿಮ್ಮ ಮನೆಯಲ್ಲೇ ಇರಿ.
* ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಟಿಶ್ಯೂ ಅಥವಾ ಕೈಯಿಂದ ಮುಚ್ಚಿಕೊಳ್ಳಿ.
ರಾಜ್ಯದಲ್ಲಿ ಎರಡು ಎಚ್ಎಂಪಿವಿ ವೈರಸ್ ಪ್ರಕರಣ ಪತ್ತೆ ಹಿನ್ನೆಲೆ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಎಚ್ಎಂಪಿವಿ ಪ್ರಕರಣ ಪತ್ತೆಯಾಗಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಸಚಿವರಿಗೆ ಸೂಚಿಸಿಸಿದ್ದೇನೆ. ಈಗಾಗಲೇ ಸಚಿವರು ಸಭೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಇನ್ನು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ಮಾಡುವ ವಿಚಾರ ಆರೋಗ್ಯ ಇಲಾಖೆ ನಿರ್ಧಾರ ಮಾಡುತ್ತದೆ. ಆರೋಗ್ಯ ಇಲಾಖೆ ಯಾವೆಲ್ಲಾ ಕ್ರಮ ಬೇಕೋ ಅ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಅಲ್ಲದೆ, ಈ ವೈರಸ್ ಅಪಾಯಕಾರಿಯಲ್ಲ. ಅದರೂ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications