ಬಿಎಸ್ ವೈ ಸರ್ಕಾರದಿಂದ ಬೋಗಸ್ ಬಜೆಟ್: ಕಾಂಗ್ರೆಸ್ ಟೀಕೆ
ಬೆಂಗಳೂರು, ಮಾರ್ಚ್.08: "ಕರ್ನಾಟಕದ ಬಿಜೆಪಿ ಸರ್ಕಾರದ್ದು ಹೆಡ್ ಲೈನ್ ಮ್ಯಾನೇಜ್ಮೆಂಟ್ ಬಜೆಟ್ ಅಷ್ಟೇ ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆ ಅಷ್ಟೇ" ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.
"ಸಂಸ್ಕೃತಿ, ಪರಂಪರೆಗೂ ನೈಸರ್ಗಿಕ ಸಂಪನ್ಮೂಲ ರಕ್ಷಣೆಗೂ ಏನು ಸಂಬಂಧ!?. ಇವೆರೆಡಕ್ಕೂ ಇಲಾಖಾವಾರು ವಿವರಣೆ ನೀಡದೆ ಒಂದೇ ವಾಕ್ಯದಲ್ಲಿ ವಿವರಣೆ ನೀಡಿದ್ದರಲ್ಲಿಯೇ ಇದು ಬೋಗಸ್ ಬಜೆಟ್ ಎನ್ನುವುದು ಅರಿವಾಗುತ್ತದೆ!" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
'@BJP4Karnataka ಸರ್ಕಾರದ್ದು ಹೆಡ್ ಲೈನ್ ಮ್ಯಾನೇಜ್ಮೆಂಟ್ ಬಜೆಟ್ ಅಷ್ಟೇ ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆ ಅಷ್ಟೇ.
— Karnataka Congress (@INCKarnataka) March 8, 2021
ಸಂಸ್ಕೃತಿ, ಪರಂಪರೆಗೂ ನೈಸರ್ಗಿಕ ಸಂಪನ್ಮೂಲ ರಕ್ಷಣೆಗೂ ಏನು ಸಂಬಂಧ!?
ಇವೆರೆಡಕ್ಕೂ ಇಲಾಖಾವಾರು ವಿವರಣೆ ನೀಡದೆ ಒಂದೇ ವಾಕ್ಯದಲ್ಲಿ ವಿವರಣೆ ನೀಡಿದ್ದರಲ್ಲಿಯೇ ಇದು #BogusBudget
ಎನ್ನುವುದು ಅರಿವಾಗುತ್ತದೆ! pic.twitter.com/LMg1vVP9kj
ಮಾರ್ಚ್.08ರಂದು ಎಂಟನೇ ಬಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಬಜೆಟ್ ಮಂಡಿಸಿದರು. 2021-22ನೇ ಸಾಲಿನ ಕರ್ನಾಟಕ ಬಜೆಟ್ ಒಟ್ಟು ಗಾತ್ರ 2,46,207 ಕೋಟಿ ರೂಪಾಯಿ ಆಗಿದ್ದು, ಒಟ್ಟು ವೆಚ್ಚ 2.46 ಲಕ್ಷ ರೂಪಾಯಿ ತಗಲುತ್ತದೆ. ಬಜೆಟ್ ನ ಒಟ್ಟು ಕೊರತೆ 15,134 ಕೋಟಿ ರೂಪಾಯಿ ಆಗಿದೆ.

ಬೆಲೆ ಇಳಿಕೆ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ ಎಂದು ಟೀಕೆ:
ಕರ್ನಾಟಕದಲ್ಲಿ "ಪ್ರಸ್ತುತ ಜನಸಾಮಾನ್ಯರನ್ನ ಹೈರಾಣಾಗಿಸಿದ್ದು ಬೆಲೆ ಏರಿಕೆ ಎನ್ನುವ ಭೂತ. ಬಜೆಟ್ನಲ್ಲಿ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದಿರುವುದು ಹಾಗೂ ಇಂಧನ ತೈಲಗಳ ಮೇಲಿನ ತೆರಿಗೆ ಕಡಿತಗೊಳಿಸದಿರುವುದು ಕರ್ನಾಟಕ ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆಯನ್ನು ಅನಾವರಣಗೊಳಿಸಿದೆ" ಎಂದು ಕಾಂಗ್ರೆಸ್ ಟೀಕಿಸಿದೆ.
ಪ್ರಸ್ತುತ ಜನಸಾಮಾನ್ಯರನ್ನ ಹೈರಾಣಾಗಿಸಿದ್ದು ಬೆಲೆ ಏರಿಕೆ ಎನ್ನುವ ಭೂತ.
— Karnataka Congress (@INCKarnataka) March 8, 2021
ಬಜೆಟ್ನಲ್ಲಿ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದಿರುವುದು
ಹಾಗೂ ಇಂಧನ ತೈಲಗಳ ಮೇಲಿನ ತೆರಿಗೆ ಕಡಿತಗೊಳಿಸದಿರುವುದು @BJP4Karnataka ಸರ್ಕಾರದ ಜನವಿರೋಧಿ ಧೋರಣೆಯನ್ನು ಅನಾವರಣಗೊಳಿಸಿದೆ.#BogusBudget
ಬಿಜೆಪಿ ಸರ್ಕಾರವು ಕೋಟಿ ಕೋಟಿ ರೂಪಾಯಿ ಸಾಲ ಮಾಡಿರುವ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾಗಿದೆ. ಹೀಗಿದ್ದರೂ ಸರ್ಕಾರ "ಸಾಲ ಮಾಡಿದರೂ ತುಪ್ಪ ತಿನ್ನಿಸಲಾಗದ ಬಜೆಟ್" ಮಂಡಿಸಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications