ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಕ್ಕಿದ್ದು ಹೇಗೆ?; 3 ಅಂಶಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 23 : ಕನಕಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್‌ ಜೈಲುವಾಸ ಅಂತ್ಯವಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಡಿ. ಕೆ. ಶಿವಕುಮಾರ್‌ಗೆ ಬುಧವಾರ ದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತು. ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಡಿ. ಕೆ. ಶಿವಕುಮಾರ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಡಿಕೆ ಶಿವಕುಮಾರ್ ಗೆ ಜಾಮೀನು, ನಿಜವಾಯ್ತೆ ಬ್ರಹ್ಮಾಂಡ ಗುರೂಜಿ ಭವಿಷ್ಯಡಿಕೆ ಶಿವಕುಮಾರ್ ಗೆ ಜಾಮೀನು, ನಿಜವಾಯ್ತೆ ಬ್ರಹ್ಮಾಂಡ ಗುರೂಜಿ ಭವಿಷ್ಯ

ಸೆಪ್ಟೆಂಬರ್ 3ರಂದು ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ಇಡಿ ವಿಶೇಷ ನ್ಯಾಯಾಲಯದಲ್ಲಿ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ಆದ್ದರಿಂದ, ದೆಹಲಿ ಹೈಕೋರ್ಟ್‌ನಲ್ಲಿ ಅವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

Live : ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದ ಹೈಕೋರ್ಟ್ Live : ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದ ಹೈಕೋರ್ಟ್

ಜಾಮೀನು ಪ್ರಕ್ರಿಯೆಗಳು ಪೂರ್ಣಗೊಂಡರೇ ಬುಧವಾರ ಸಂಜೆಯೇ ಡಿ. ಕೆ. ಶಿವಕುಮಾರ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ನೆಚ್ಚಿನ ನಾಯಕನಿಗೆ ಜಾಮೀನು ಸಿಕ್ಕಿದ ಬಳಿಕ ಸಾವಿರಾರು ಅಭಿಮಾನಿಗಳು ಸಂತಸಗೊಂಡಿದ್ದಾರೆ.

ಡಿಕೆಶಿಗೆ ದೀಪಾವಳಿ ಅಂದ್ರೆ ಅದೃಷ್ಟ! ಕಳೆದ ಬಾರಿ ಬಳ್ಳಾರಿ, ಈ ಬಾರಿ ಜಾಮೀನು!ಡಿಕೆಶಿಗೆ ದೀಪಾವಳಿ ಅಂದ್ರೆ ಅದೃಷ್ಟ! ಕಳೆದ ಬಾರಿ ಬಳ್ಳಾರಿ, ಈ ಬಾರಿ ಜಾಮೀನು!

ಡಿ. ಕೆ. ಶಿವಕುಮಾರ್ ಜಾಮೀನು

ಡಿ. ಕೆ. ಶಿವಕುಮಾರ್ ಜಾಮೀನು

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕೈಟ್ ಡಿ. ಕೆ. ಶಿವಕುಮಾರ್‌ಗೆ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. 25 ಲಕ್ಷ ರೂ. ಬಾಂಡ್, ಪಾಸ್ ಪೋರ್ಟ್‌ ವಶಕ್ಕೆ ನೀಡಬೇಕು, ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂಬ ಷರತ್ತುಗಳನ್ನು ಹಾಕಿ ಜಾಮೀನು ಮಂಜೂರು ಮಾಡಲಾಗಿದೆ. ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ದಯಾನ್ ಕೃಷ್ಣನ್ ವಾದ ಮಂಡನೆ ಮಾಡಿದ್ದರು.

ಜಾಮೀನು ಸಿಕ್ಕಲು ಕಾರಣ -1

ಜಾಮೀನು ಸಿಕ್ಕಲು ಕಾರಣ -1

ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ವಾದ ಮಂಡನೆ ಮಾಡುವಾಗ ಆರೋಗ್ಯದ ಸಮಸ್ಯೆ ಕುರಿತು ಪ್ರಸ್ತಾಪಿಸಲಾಗಿತ್ತು. ಹೈ ಬಿಪಿ, ಸಕ್ಕರೆ ಕಾಯಿಲೆ ಅವರಿಗೆ ಇದೆ ಎಂದು ವಾದ ಮಂಡಿಸಿದ್ದರು. ಇದನ್ನು ಒಂದು ಅಂಶವಾಗಿ ಪರಿಗಣಿಸಿರುವ ನ್ಯಾಯಾಲಯ ಜಾಮೀನು ನೀಡಿದೆ.

ಜಾಮೀನು ಸಿಗಲು ಕಾರಣ - 2

ಜಾಮೀನು ಸಿಗಲು ಕಾರಣ - 2

ಡಿ. ಕೆ. ಶಿವಕುಮಾರ್ ಪರವಾಗಿ ವಾದ ಮಂಡನೆ ಮಾಡುವಾಗ ಅಭಿಷೇಕ್ ಮನು ಸಿಂಘ್ವಿ, ದಯಾನ್ ಕೃಷ್ಣನ್ ಆರೋಪಿ ವಿದೇಶಕ್ಕೆ ಪರಾರಿಯಾಗುವುದಿಲ್ಲ. ಪಾಸ್ ಪೋರ್ಟ್‌ ಅನ್ನು ಸಹ ನ್ಯಾಯಾಲಯದ ವಶಕ್ಕೆ ಒಪ್ಪಿಸಲಿದ್ದಾರೆ ಎಂದು ವಾದಿಸಿದ್ದರು. ಇದನ್ನು ಪರಿಗಣಿಸಿ ನ್ಯಾಯಾಲಯ ಜಾಮೀನು ನೀಡಿದೆ. ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ಷರತ್ತು ಹಾಕಿದೆ.

ಜಾಮೀನು ಸಿಗಲು ಕಾರಣ - 3

ಜಾಮೀನು ಸಿಗಲು ಕಾರಣ - 3

ಜಾಮೀನು ಅರ್ಜಿಯ ವಾದ ಮಂಡನೆ ಸಮಯದಲ್ಲಿ ಆರೋಪಿ ಸಾಕ್ಷ್ಯ ನಾಶ ಮಾಡುವುದಿಲ್ಲ. ವಿಚಾರಣೆಗೆ ಸಹಕಾರ ನೀಡಲಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿತ್ತು. ಇದನ್ನು ಪರಿಗಣನೆ ಮಾಡಿರುವ ನ್ಯಾಯಾಲಯ ಜಾಮೀನು ನೀಡಿದೆ.

English summary
Here are the three points how Delhi high court granted bail to Karnataka former minister D.K.Shivakumar on October 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X