ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗ ಮನಮೋಹನ್ ಸಿಂಗ್ ಸ್ಪಂದಿಸಿದ್ದು ಹೇಗೆ? ಈಗ ಮೋದಿ ಮಾಡುತ್ತಿರುವುದೇನು?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 4: ಪ್ರವಾಹದಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಇನ್ನೂ ಪರಿಹಾರ ಹಣ ಘೋಷಣೆ ಮಾಡದೆ ಇರುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಷ್ಟೆಲ್ಲಾ ಅನಾಹುತಗಳು ನಡೆದು ಜನರು ಪರದಾಡುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಇತ್ತ ತಲೆಹಾಕಿಲ್ಲ. ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದರೂ ಅದರ ಮನವಿಗೆ ಸ್ಪಂದಿಸಿಲ್ಲ. ಅಲ್ಲದೆ ರಾಜ್ಯ ಸರ್ಕಾರ ನೀಡಿದ್ದ ವರದಿಯನ್ನು ತಿರಸ್ಕರಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇದರ ಬೆನ್ನಲ್ಲೇ ಹತ್ತು ವರ್ಷಗಳ ಹಿಂದೆ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಉತ್ತರ ಕರ್ನಾಟಕದ ಪ್ರವಾಹ ಸಂದರ್ಭದಲ್ಲಿ ಹೇಗೆ ಪ್ರತಿಕ್ರಿಯಿಸಿದ್ದರು ಎಂಬುದು ಚರ್ಚೆಗೆ ಒಳಗಾಗಿದೆ. 2009ರಲ್ಲಿ ಇದೇ ಸಂದರ್ಭದಲ್ಲಿ ಭೀಕರ ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿತ್ತು. ಆಗಲೂ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರವಿತ್ತು. ಕೇಂದ್ರದಲ್ಲಿ ಇದ್ದದ್ದು ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ.

ದಯೆ ಇಲ್ಲದ ಮೋದಿಯೆದುರು ದೀನವಾಗಿ ಅಂಗಲಾಚುತ್ತಿರುವ ಯಡಿಯೂರಪ್ಪದಯೆ ಇಲ್ಲದ ಮೋದಿಯೆದುರು ದೀನವಾಗಿ ಅಂಗಲಾಚುತ್ತಿರುವ ಯಡಿಯೂರಪ್ಪ

2009ರಲ್ಲಿ ಕೂಡ ವಿಪರೀತ ಮಳೆ ಉತ್ತರ ಕರ್ನಾಟಕದ ಜನತೆಯ ಬದುಕು ಪ್ರವಾಹದಿಂದ ಕೊಚ್ಚಿಹೋಗಿತ್ತು. ಆದರೆ ಈ ವರ್ಷ ಪ್ರವಾಹದಿಂದ ಉಂಟಾಗಿರುವ ಹಾನಿ ಮತ್ತು ನಷ್ಟ ಅದಕ್ಕಿಂತಲೂ ಹೆಚ್ಚು. ಎರಡು ತಿಂಗಳು ಕಳೆದರೂ ಜನರ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ ಎನ್ನುವ ಅಂಶಗಳು ಉತ್ತರ ಕರ್ನಾಟಕದ ಹೀನಾಯ ಸ್ಥಿತಿಯನ್ನು ಹೇಳುತ್ತವೆ.

ಸ್ಪಂದಿಸಿದ್ದ ಮನಮೋಹನ್ ಸಿಂಗ್

ಸ್ಪಂದಿಸಿದ್ದ ಮನಮೋಹನ್ ಸಿಂಗ್

ಈ ಸಂದರ್ಭದಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಂದಿಸಿದ ರೀತಿಗೆ ಸಾಕಷ್ಟು ವ್ಯತ್ಯಾಸವಿದೆ. ರಾಜ್ಯದಲ್ಲಿ ನೆರೆ ಉಂಟಾದ ಬಳಿಕ ಯಡಿಯೂರಪ್ಪ ಅವರು ಕೇಂದ್ರದ ಸಹಾಯಕ್ಕಾಗಿ ದೆಹಲಿಗೆ ತೆರಳಿದ್ದರು. ಯಡಿಯೂರಪ್ಪ ಅವರು ಕದ ತಟ್ಟಿದ ಕೂಡಲೇ ಕೇಂದ್ರ ಸರ್ಕಾರ ಬಾಗಿಲು ತೆರೆದು ಅವರೊಂದಿಗೆ ಮಾತುಕತೆ ನಡೆಸಿ ವಿವರಗಳನ್ನು ಪಡೆದುಕೊಂಡಿತ್ತು. ಮನಮೋಹನ್ ಸಿಂಗ್ ಖುದ್ದಾಗಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದರು. ಆದರೆ ಎರಡೂವರೆ ತಿಂಗಳಾದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಯಡಿಯೂರಪ್ಪ ಅವರಿಗೆ ಸಾಧ್ಯವಾಗಿಲ್ಲ.

ವೈಮಾನಿಕ ಸಮೀಕ್ಷೆ ನಡೆಸಿದ್ದ ಸಿಂಗ್

ವೈಮಾನಿಕ ಸಮೀಕ್ಷೆ ನಡೆಸಿದ್ದ ಸಿಂಗ್

ಯಡಿಯೂರಪ್ಪ ಅವರು ಭೀಕರ ಪ್ರವಾಹದ ಸ್ಥಿತಿಯನ್ನು ವಿವರಿಸುತ್ತಿದ್ದಂತೆಯೇ ಮನಮೋಹನ್ ಸಿಂಗ್ ಅವರು ಎರಡೇ ದಿನದಲ್ಲಿ ನೇರವಾಗಿ ರಾಯಚೂರಿಗೆ ಬಂದಿಳಿದಿದ್ದರು. ಅದಕ್ಕೂ ಮೊದಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಬಳ್ಳಾರಿ ಭಾಗದಲ್ಲಿ ವೈಮಾನಿಕ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು. ಮನಮೋಹನ್ ಸಿಂಗ್ ನೆರೆಯ ಆಂಧ್ರಪ್ರದೇಶದಲ್ಲಿ ಕೂಡ ಸಮೀಕ್ಷೆ ನಡೆಸಿದ್ದರು. ಈ ಎರಡೂ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಕಾಂಗ್ರೆಸ್ ನಾಯಕರೊಂದಿಗೆ ವೈಮಾನಿಕ ಸಮೀಕ್ಷೆಯಲ್ಲಿ ತೆರಳಿ ಹಾನಿಯ ಬಗ್ಗೆ ವಿವರಿಸಿದ್ದರು.

ಕರ್ನಾಟಕ ಪ್ರವಾಹ ನಷ್ಟದ ಅಂದಾಜು ವರದಿ ತಿರಸ್ಕರಿಸಿದ ಕೇಂದ್ರಕರ್ನಾಟಕ ಪ್ರವಾಹ ನಷ್ಟದ ಅಂದಾಜು ವರದಿ ತಿರಸ್ಕರಿಸಿದ ಕೇಂದ್ರ

ರಾಜ್ಯಕ್ಕೆ 1,500 ಕೋಟಿ ಸಹಾಯ

ರಾಜ್ಯಕ್ಕೆ 1,500 ಕೋಟಿ ಸಹಾಯ

ಮನಮೋಹನ್ ಸಿಂಗ್ ಅವರು ಸಮೀಕ್ಷೆ ಪೂರ್ಣಗೊಳಿಸಿ ಕೂಡಲೇ ರಾಜ್ಯದ ಪ್ರವಾಹ ಪರಿಸ್ಥಿತಿಗೆ ನೆರವಾಗಲು 1,500 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದರು. ಅಲ್ಲದೆ, ಯಡಿಯೂರಪ್ಪ, ಕೇಂದ್ರ ಸಚಿವರಾಗಿದ್ದ ಎಸ್ ಎಂ ಕೃಷ್ಣ, ಎಂ ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ಸಭೆ ನಡೆಸಿದ್ದರು.

ಆಕ್ರೋಶದ ಬಳಿಕ ಭೇಟಿ

ಆಕ್ರೋಶದ ಬಳಿಕ ಭೇಟಿ

ಈ ವರ್ಷ ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ವಾರಗಳು ಕಳೆದರೂ ಕೇಂದ್ರದಿಂದ ಯಾವ ನಾಯಕರೂ ಕರ್ನಾಟಕದತ್ತ ಮುಖಮಾಡಿರಲಿಲ್ಲ. ಈ ಬಗ್ಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾದ ಬಳಿಕ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರಿಶೀಲನೆ ನಡೆಸಿ ಹೋಗಿದ್ದರು. ಆದರೆ ಪ್ರವಾಹದ ಪರಿಸ್ಥಿತಿಗೆ ನೆರವು ನೀಡುವ ಬಗ್ಗೆ ಅವರು ಯಾವುದೇ ಖಚಿತ ಭರವಸೆ ನೀಡಿರಲಿಲ್ಲ. ಬಳಿಕ ಕೇಂದ್ರದ ತಂಡವೊಂದು ಬಂದು ಪರಿಶೀಲನೆ ನಡೆಸಿತ್ತು. ಆದರೆ ಯಾವ ತಂಡವೂ ಸಂಪೂರ್ಣ ಅಧ್ಯಯನ ನಡೆಸಿಲ್ಲ. ಕರಾವಳಿ ಮತ್ತು ಉತ್ತರ ಕನ್ನಡ ಭಾಗಗಳತ್ತ ತಲೆಯೇಹಾಕಿರಲಿಲ್ಲ. ಆ ವರದಿ ಪರಿಸ್ಥಿತಿ ಏನಾಗಿದೆ ಎಂಬ ಮಾಹಿತಿ ಕೂಡ ಇಲ್ಲ.

ಬರ ಪರಿಹಾರ: ಬಿಎಸ್ವೈ ಸಿಎಂ ಆಗಿದ್ದು ಮೋದಿ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಕಾರಣವೇ?ಬರ ಪರಿಹಾರ: ಬಿಎಸ್ವೈ ಸಿಎಂ ಆಗಿದ್ದು ಮೋದಿ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಕಾರಣವೇ?

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ಮನಮೋಹನ್ ಸಿಂಗ್ ಅವರು ಆಗ ಪಕ್ಷಾತೀತವಾಗಿ ತೋರಿಸಿದ ಕಾಳಜಿಯನ್ನು ಈಗ ಅವರದೇ ಸರ್ಕಾರವಿದ್ದರೂ ಮೋದಿ ಅವರು ತೋರಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಕಳೆದ ಎರಡು ತಿಂಗಳಿನಿಂದ ಹೋಲಿಕೆಯೊಂದಿಗೆ ಆರೋಪಿಸುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರದ ವಿರುದ್ಧ ಬೇಸತ್ತಿರುವ ಜನರು ಮನಮೋಹನ್ ಸಿಂಗ್ ಅವರು ತೋರಿಸಿದ್ದ ಸ್ಪಂದನೆಯ ಫೋಟೊ ಮತ್ತು ಸುದ್ದಿಗಳನ್ನು ಹಂಚಿಕೊಂಡು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

English summary
People remembering how the PM Dr Manmohan Singh responded for state's request for floods in 2009 when the same BS Yediyurappa's BJP government was in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X