ಕರ್ನಾಟಕದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಎಷ್ಟು ತೆರಿಗೆ ವಿನಾಯತಿ
ಧಾರವಾಡ, ಮಾರ್ಚ್ 14: ದಿ ಕಾಶ್ಮೀರ್ ಫೈಲ್ಸ್ ಹಿಂದಿ ಸಿನಿಮಾಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಗುಜರಾತ್, ಹರ್ಯಾಣ, ಮಧ್ಯಪ್ರದೇಶದಲ್ಲಿ ಈ ಸಿನಿಮಾಕ್ಕೆ ತೆರಿಗೆ ವಿನಾಯತಿ ಘೋಷಿಸಲಾಗಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಮೇಲಿನ ಮನರಂಜನಾ ತೆರಿಗೆಯನ್ನು ತೆಗೆದು ಹಾಕಿರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ಮಂತ್ರಿ ಮಾಲ್ನಲ್ಲಿ ದಿ ಕಾಶ್ಮೀರ ಫೈಲ್ಸ್ ಚಲನಚಿತ್ರ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನದಲ್ಲಿ ಪ್ರಕಟಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಈ ಚಿತ್ರ ಹಿಂದಿಯಲ್ಲಿದ್ದು, ನಾನು ನೋಡುವುದಿಲ್ಲ ಎಂದಿದ್ದಾರೆ.
ಈ ಚಿತ್ರಕ್ಕೆ ಜಿಎಸ್ಟಿ ವಿನಾಯಿತಿ
ದಿ ಕಾಶ್ಮೀರ ಫೈಲ್ಸ್ ಚಲನಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರವು ತನ್ನ ಪಾಲಿನ ರಾಜ್ಯ ಜಿಎಸ್ಟಿಯನ್ನು ವೀಕ್ಷಕರಿಗೆ ವಿಧಿಸದಿರಲು ಸಿನೆಮಾ ಪ್ರದರ್ಶಕರಿಗೆ ಸೂಚಿಸಿದೆ. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಧಾರವಾಡ ಜಿಲ್ಲೆಯ ಸಿನೆಮಾ, ಮಲ್ಟಿಪ್ಲೆಕ್ಸ್ ಮಂದಿರಗಳ ಮಾಲೀಕರು ಟಿಕೇಟ್ನಲ್ಲಿ ಶೇ.9 ರಿಯಾಯಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಉಳಿದ ಜಿಲ್ಲೆಗಳಿಂದಲೂ ಇದೇ ರೀತಿ ಆದೇಶ ಜಾರಿಗೆ ಬರಲಿದೆ.

ಮುಖ್ಯಮಂತ್ರಿಯವರ ನಿರ್ದೇಶನದ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಸಿನೆಮಾ ಹಾಗೂ ಮಲ್ಟಿಪ್ಲೆಕ್ಸ್ ಮಂದಿರಗಳ ನೊಂದಾಯಿತ ತೆರಿಗೆ ಪಾವತಿದಾರರು ವೀಕ್ಷಕರು ಹಾಗೂ ಗ್ರಾಹಕರಿಗೆ ರಾಜ್ಯದ ಪಾಲಿನ ಶೇ.9 ಜಿಎಸ್ಟಿ ವಿಧಿಸಬಾರದು, ಈ ಹಣವನ್ನು ಸರ್ಕಾರ ಭರಿಸಲಿದೆ.
ಟಿಕೆಟ್ ಮೇಲೆ ರಾಜ್ಯ ಸರ್ಕಾರದ ಆದೇಶದ ಮೇರೆಗೆ ರಾಜ್ಯ ಸಂಗ್ರಹಿಸಿರುವುದಿಲ್ಲ ಎಂದು ದಪ್ಪ ಅಕ್ಷರಗಳಲ್ಲಿ ಮುದ್ರಿಸಿರಬೇಕು. ಈ ಆದೇಶವು ಇಂದು ಮಾರ್ಚ್ 14 ರಿಂದ ಮುಂದಿನ ಆರು ತಿಂಗಳ ಅವಧಿಯವರೆಗೆ ಜಾರಿಯಲ್ಲಿರುತ್ತದೆ.
ಸಿನೆಮಾ, ಮಲ್ಟಿಪ್ಲೆಕ್ಸ್ ಮಂದಿರಗಳ ಮಾಲೀಕರು ರಾಜ್ಯ ಜಿಎಸ್ಟಿ ಮರುಪಾವತಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಸರ್ಕಾರ ಪ್ರಕಟಿಸಲಿದೆ. ಜಿಎಸ್ಟಿ ಅಧಿಕಾರಿಗಳು ಈ ಆದೇಶ ಜಾರಿಗೊಳಿಸಿ ವರದಿ ನೀಡಲು ಸೂಚಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications