ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲೂ ಡಿಜಿಟಲೀಕರಣ: ಅಶ್ವಥ್ ನಾರಾಯಣ
ಬೆಂಗಳೂರು, ಅಕ್ಟೋಬರ್ 15: ಯೂನಿಫೈಡ್ ಡೇಟಾ ಮತ್ತು ಡಿಜಿಟಲೀಕರಣಗಳೇ ಇಡೀ ಜಗತ್ತಿನ ಶಿಕ್ಷಣ ಕ್ಷೇತ್ರದಲ್ಲಿ ನಿರ್ಣಾಯಕ ಶಕ್ತಿಗಳಾಗಿವೆ. ಇದನ್ನು ಗಮನದಲ್ಲಿಟ್ಟುಕೊಂಡೇ ರಾಜ್ಯದಲ್ಲೂ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಡಿಜಿಟಲೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಅನುದಾನಿತ ಮತ್ತು ಖಾಸಗಿ ಕಾಲೇಜುಗಳಿಗೂ ಕಡ್ಡಾಯಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 'ಸೀಮಾತೀತ ಶಿಕ್ಷಣ ಕ್ಷೇತ್ರದಲ್ಲಿ ನಾವೀನ್ಯತೆಯ ಭವಿಷ್ಯ' ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಕ ವಿಕೇಂದ್ರೀಕರಣಕ್ಕೆ ಚಾಲನೆ ಕೊಡಲಾಗಿದೆ. ಶಿಕ್ಷಣ ಕ್ಷೇತ್ರದ ಮೇಲೆ ಸರಕಾರದ ನಿಯಂತ್ರಣ ಇರಬಾರದೆನ್ನುವುದೇ ಸರ್ಕಾರದ ಆಶಯವಾಗಿದೆ. ಹೀಗಾಗಿ ಸಂಶೋಧನೆ ಮತ್ತು ಸಹಭಾಗಿತ್ವಗಳಿಗೆ ಹಾಗೂ ಟ್ವಿನ್ನಿಂಗ್ ಪದವಿ ಕೋರ್ಸುಗಳಿಗೆ ಮುಕ್ತ ಅವಕಾಶ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಮರ್ಥ ಕಾಯ್ದೆಯನ್ನೂ ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ ವಿವರಿಸಿದರು.

ಅಂತಾರಾಷ್ಟ್ರೀಕರಣಕ್ಕೆ ಶಿಕ್ಷಣ ನೀತಿಯ ಆದ್ಯತೆ:
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಆದ್ಯತೆ ನೀಡುತ್ತಿದೆ. ರಾಜ್ಯದಲ್ಲಿ ಜಾಗತಿಕ ಮಟ್ಟದ ಸೌಲಭ್ಯಗಳಿದ್ದರೂ ಅದರ ಸಮರ್ಪಕ ಉಪಯೋಗವಾಗುತ್ತಿಲ್ಲ. ನಮ್ಮಲ್ಲಿ 20 ಸಾವಿರ ನವೋದ್ಯಮಗಳಿದ್ದು, ಇವು ಶಿಕ್ಷಣದ ಗುಣಮಟ್ಟ ವರ್ಧನೆಗೆ ಕೈಜೋಡಿಸಬೇಕು. ಉದ್ಯಮ ವಲಯವು ಶಿಕ್ಷಣ ಕ್ಷೇತ್ರದ ಜತೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅಶ್ವಥ್ ನಾರಾಯಣ ಉಲ್ಲೇಖಿಸಿದರು.
ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಪರಿವರ್ತನೆಗಳು ತ್ವರಿತ ಗತಿಯಲ್ಲಿ ಸಂಭವಿಸುತ್ತಿವೆ. ಗುಣಮಟ್ಟದ ಶಿಕ್ಷಣ ಮಾತ್ರ 21ನೇ ಶತಮಾನದ ಜ್ಞಾನಾಧಾರಿತ ವ್ಯವಸ್ಥೆಗೆ ಆಧಾರವಾಗಿದೆ. ಜ್ಞಾನಾಧಾರಿತ ಆರ್ಥಿಕತೆಯ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುತ್ತಿದೆ. ಹೀಗಾಗಿ ಗುಣಮಟ್ಟ ಮತ್ತು ಉತ್ಕೃಷ್ಟತೆಯೊಂದಿಗೆ ರಾಜಿ ಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದ ಅಭಿಪ್ರಾಯಪಟ್ಟರು. ಎನ್ಇಪಿ ಜಾರಿಯಲ್ಲಿ ರಾಜ್ಯವು ದೇಶಕ್ಕೇ ಪ್ರಥಮ ಸ್ಥಾನದಲ್ಲಿದ್ದೇವೆ. ಹೀಗಾಗಿ ಜಾಗತಿಕ ರಂಗದಲ್ಲಿ ಕರ್ನಾಟಕವು ಪ್ರಸ್ತುತತೆಯನ್ನು ಉಳಿಸಿಕೊಳ್ಳುವಲ್ಲಿ ಗೆದ್ದಿದೆ. ಎನ್ಇಪಿ ನೀತಿಯು ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಒತ್ತು ಕೊಟ್ಟಿದ್ದು, ಇತ್ತೀಚೆಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಜಾರಿಗೆ ತಂದಿರುವ ನಿಯಮಗಳೂ ಇದಕ್ಕೆ ಪುಷ್ಟಿ ನೀಡುವಂತಿವೆ ಎಂದು ಹೇಳಿದರು.
ಶಿಕ್ಷಣದಲ್ಲಿ ಹೊಸತನಕ್ಕೆ ಗಮನ ನೀಡುತ್ತೆ:
ಕರ್ನಾಟಕವು ಮೊದಲಿನಿಂದಲೂ ಶಿಕ್ಷಣದಲ್ಲಿ ಹೊಸತನಕ್ಕೆ ಗಮನ ನೀಡುತ್ತ ಬಂದಿದೆ. ಈಗ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಶಿಕ್ಷಣದ ಸುಧಾರಣೆಗಾಗಿ ಅಳವಡಿಸಿಕೊಂಡು, ಸುಸ್ಥಿರ ಮತ್ತು ಸಮಾನ ಅಭಿವೃದ್ಧಿಯನ್ನು ಸಾಧಿಸಲು ತಕ್ಕ ವೇದಿಕೆಯನ್ನು ನಿರ್ಮಿಸುವ ಅಗತ್ಯವಿದೆ. ರಾಜ್ಯವು ಎಂದಿನಂತೆ ಇಡೀ ಜಗತ್ತಿನ ಪ್ರತಿಭೆಗಳನ್ನು ತನ್ನತ್ತ ಸೆಳೆಯುತ್ತಿದೆ ಎಂದು ಅಶ್ವತ್ಥನಾರಾಯಣ ಪ್ರತಿಪಾದಿಸಿದರು.
ಈ ಕಾರ್ಯಕ್ರಮದಲ್ಲಿ ಐಎಸ್ಡಿಸಿ ಕಾರ್ಯ ನಿರ್ವಾಹಕ ನಿರ್ದೇಶಕ ಟಾಮ್ ಜೋಸೆಫ್, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ ತಿಮ್ಮೇಗೌಡ, ಐಎಸ್ಡಿಸಿಯ ಕಲಿಕಾ ವಿಭಾಗದ ನಿರ್ದೇಶಕಿ ತೆರೇಸಾ ಜೇಕಬ್ಸ್ ಮಾತನಾಡಿದರು.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications