ಕರ್ನಾಟಕ ಸಿಎಂ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವುದು ಹೇಗೆ?, ತಿಳಿಯಿರಿ
ಬೆಂಗಳೂರು, ಜುಲೈ 24: ಆರ್ಥಿಕವಾಗಿ ಹಿಂದುಳಿದವರಿಗೆ, ಬಡತನದಲ್ಲಿ ಜೀವನ ಸಾಗಿಸುತ್ತಿರುವವರಿಗೆ, ಬಡ ಜನರ ಮಾರಣಾಂತಿಕ ಕಾಯಿಲೆಗಳ ಚಿಕಿತ್ಸೆಗಾಗಿ, ವಿಶೇಷ ಚೇತನರ ಸಹಾಯ ಸೇರಿದಂತೆ ಹತ್ತು ಹಲವು ಕಾರಣಗಳಿಗಾಗಿ ಸರ್ಕಾರ, "ಮುಖ್ಯಮಂತ್ರಿ ಪರಿಹಾರ ನಿಧಿಯ ರೂಪ"ದಲ್ಲಿ ಹಣಕಾಸಿನ ನೆರವನ್ನು ಒದಗಿಸುತ್ತದೆ. ಈ ಇತ್ತೀಚಿನ ಕೆಲ ಬದಲಾವಣೆಗಳಿಂದ ಈ ಯೋಜನೆ ಫಲಾನುಭವಿಗಳನ್ನು ತಲುಪುತ್ತಿಲ್ಲ ಎಂಬ ಆರೋಪವು ಇದೆ.
ಅನಾರೋಗ್ಯದಂತಹ ಸಂಕಷ್ಟದ ಸಂದರ್ಭಗಳಲ್ಲಿ ಹಣದ ಅಗತ್ಯತೆ ಹೆಚ್ಚಿರುತ್ತದೆ. ಈ ವೇಳೆ ಸಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ನಿಮಗೆ ಸೂಕ್ತ ಮಾಹಿತಿ ಕೊರತೆ ಕಾಡುತ್ತಿದೆಯೆ?, ಯಾವ ದಾಖಲೆಗಳು ಬೇಕು, ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಹೇಗೆ ಎಂಬಿತ್ಯಾದಿ ಮಾಹಿತಿ ಇಲ್ಲಿ ತಿಳಿಯಿರಿ.

ಅರ್ಹ ಪಲಾನುಭವಿಗಳು ಸೇವಾಸಿಂಧು ಫೋರ್ಟಲ್ (https://sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದು. ಅದಕ್ಕಾಗಿ ನೀವು ಹತ್ತಿರದ ಗ್ರಾಮ ಒನ್ಗೆ ಬೇಟಿ ನೀಡಬೇಕು. ಯಾರೆಲ್ಲ ಅರ್ಹರು ಎಂದು ನೋಡುವುದಾದರೆ, ಕಡುಬಡತನದಲ್ಲಿ ಜೀವನ ಮಾಡುತ್ತಿರುವವರಿಗೆ ಬಡ ಜನರ ಮಾರಣಾಂತಿಕ ಕಾಯಿಲೆಗಳ ಚಿಕಿತ್ಸೆಗಾಗಿ, ನಿರುದ್ಯೋಗಿಗಳಿಗೆ, ದಿವ್ಯಾಂಗರು ಇದ ಸದುಪಯೋಗ ಮಾಡಿಕೊಳ್ಳಬೇಕು.
ಕುಟುಂಬದ ದುಡಿಯುವ ವ್ಯಕ್ತಿಯು ಅಪಘಾತದಲ್ಲಿ ಆಕಾಲಿಕ ಮರಣ ಹೊಂದಿದಲ್ಲಿ ನಿರ್ಗತಿಕರಾದವರು ಅರ್ಜಿ ಸಲ್ಲಿಸಬಹುದು. ಆಕಸ್ಮಿಕ ದರ್ಘಟನೆಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳು, ಪ್ರದತ್ತವಾಗಿರುವ ವಿವೇಚನಾನುಸಾರ ಘೋಷಿಸುವ ಪರಿಹಾರದ ಮೊತ್ತವನ್ನು ನೊಂದ ಕುಟುಂಬದವರಿಗೆ ವಿತರಿಸಲಾಗುತ್ತಿದೆ. ಇತ್ತೀಚೆಗೆ ಈ ಷರತ್ತುಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಸೇವಾ ಶುಲ್ಕ 30 ರೂ. ಬಿಟ್ಟು ಬೇರಾವ ಅರ್ಜಿ ಸಲ್ಲಿಕೆಗೆ ಶುಲ್ಕ ಇರುವುದಲ್ಲ.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು
1) ಅರ್ಜಿದಾರರ ಭಾವ ಚಿತ್ರ
2) ಚಿಕಿತ್ಸೆ ಪಡೆದಿರುವ ಆಸ್ಪತ್ರೆಯ ಮೂಲ ಬಿಲ್ಗಳು
3) ಆಸ್ಪತ್ರೆಯ ಬಿಡುಗಡೆ ಸಾರಾಂಶ ಪತ್ರ
4) ಬಿಪಿಎಲ್ ಪಡಿತರ ಚೀಟಿ
5) ಆಧಾರ್ ಗುರುತಿನ ಚೀಟಿ
6) ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪ್ರತಿ
7) ವಿಳಾಸ ದೃಢೀಕರಣ ದಾಖಲೆಗಳು
8) ಅರ್ಜಿದಾರರ ಅಥವಾ ಅವರ ಕುಟುಂಬ ವರ್ಗದವರ ಬಳಕೆಯಲ್ಲಿರುವ ಮೊಬೈಲ್ ಸಂಖ್ಯೆ ಅಗತ್ಯವಾಗಿರುತ್ತದೆ.
ನೀವು ಸಲ್ಲಿಸುವ ಅರ್ಜಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಯ ವಿಷಯ ನಿರ್ವಾಹಕರು ಅವರಿಂದ ಪರಿಶೀಲನೆ ನಡೆಯುತ್ತದೆ. ನಂತರ ಅಧೀನ ಕಾರ್ಯದರ್ಶಿ/ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸುತ್ತಾರೆ. ಜಂಟಿ ಕಾರ್ಯದರ್ಶಿಯಿಂದ ಪರಿಶೀಲನೆ ನಡೆಸುತ್ತಾರೆ. ಲೆಕ್ಕಾಧಿಕಾರಿಗಳು ಮತ್ತೊಮ್ಮೆ ಪರಿಶೀಲಿಸಿ ಪರಿಹಾರ ಮೊತ್ತವನ್ನು ಜಂಟಿ ಕಾರ್ಯದರ್ಶಿಗಳು ಫಲಾನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications