Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾರ್ಚ್ 6) ವಿಧಾನಸಭೆಯಲ್ಲಿ ಕರ್ನಾಟಕ ಬಜೆಟ್ 2026-27 ಮಂಡಿಸಿದರು. ಕರ್ನಾಟಕ ಸರ್ಕಾರದ ಮುಂದಿನ ಒಂದಿಡೀ ವರ್ಷದ ದಿಕ್ಸೂಚಿ ಹೇಳಿಕೆ ಎಂದೇ ಪರಿಗಣಿಸುವ ಈ ಮಹತ್ವದ ದಾಖಲೆಯನ್ನು ಸಮಗ್ರವಾಗಿ ಓದಲು ಹಲವರು ಬಯಸುತ್ತಾರೆ. ಅಂಥವರಿಗಾಗಿ ಇಡೀ ಬಜೆಟ್ ದಾಖಲೆಯನ್ನು (Karnataka Budget 2026-27 PDF) ಸುದ್ದಿಯ ಕೊನೆಗೆ ನೀಡಲಾಗಿದೆ. ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಬಜೆಟ್ ದಾಖಲೆಯ ಪಿಡಿಎಫ್ ಪ್ರತಿಯನ್ನು ಡೌನ್ಲೋಡ್ ಮಾಡಬಹುದು.
ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಇನ್ನು ಸ್ವಲ್ಪ ಹೊತ್ತಿಗೆ ಬಜೆಟ್ನ ಅಧಿಕೃತ ಪ್ರತಿ ಅಪ್ಲೋಡ್ ಆಗಲಿದೆ. ಹಣಕಾಸು ಇಲಾಖೆಯ ವೆಬ್ಸೈಟ್ನಲ್ಲಿ ಬಜೆಟ್ ಪ್ರತಿಯನ್ನು ನೋಡಲು finance.karnataka.gov.in ಲಿಂಕ್ ಕ್ಲಿಕ್ ಮಾಡಿ.16 ವರ್ಷ ವಯೋಮಾನದ ಒಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಸೇರಿ ಹಲವು ಮಹತ್ವದ ಘೋಷಣೆಗಳು ಈ ಬಾರಿಯ ಬಜೆಟ್ ಭಾಷಣದಲ್ಲಿ ಇತ್ತು.

2025-26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.
ಬಜೆಟ್ ಗಾತ್ರವು ಈ ಬಾರಿಇ ₹ 40 ಸಾವಿರ ಕೋಟಿಯಷ್ಟು ಹೆಚ್ಚಾಗಿದೆ. ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಸರ್ಕಾರದ ಆದಾಯವು 4.47 ಲಕ್ಷ ಕೋಟಿ ಇದೆ. ಆದಾಯಕ್ಕಿಂತಲೂ ವೆಚ್ಚ ಹೆಚ್ಚಾಗಿರುವುದರಿಂದ ಇದು ಖೋತಾ ಬಜೆಟ್ ಆಗುತ್ತದೆ. ಮಹಿಳೆಯರ ಅಭಿವೃದ್ಧಿಗಾಗಿ 94,663 ಕೋಟಿ, ಮಕ್ಕಳ ಅಭಿವೃದ್ಧಿಗಾಗಿ 63,135 ಕೋಟಿ ರೂಪಾಯಿಗಳನ್ನು ಕರ್ನಾಟಕ ಸರ್ಕಾರವು ಮೀಸಲಿಟ್ಟಿದೆ.
ಈ ವರ್ಷ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 56,432 ಹುದ್ದೆಗಳ ಭರ್ತಿಗೂ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಭರವಸೆ ನೀಡಿದ್ದಾರೆ. ಬಜೆಟ್ ಭಾಷಣದ ಇಡೀ ದಾಖಲೆಯನ್ನು ಇಲ್ಲಿ ನೀಡಲಾಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications