SSLC Key Answers: ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರಗಳನ್ನು ಚೆಕ್ ಮಾಡುವುದು ಹೇಗೆ..?
ಬೆಂಗಳೂರು, ಮಾರ್ಚ್ 25: 2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಪ್ರಥಮ ಭಾಷೆ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ (ಪ್ರಥಮ ಭಾಷೆ) ಪರೀಕ್ಷೆ ಇಂದು ನಡೆದಿದೆ.
ಬೆಳಗ್ಗೆ 10:15ಕ್ಕೆ ಆರಂಭವಾದ ಪರೀಕ್ಷೆ ಮಧ್ಯಾಹ್ನ 1:30ರವರೆಗೆ ಯಶಸ್ವಿಯಾಗಿ ನಡೆದಿದ್ದು, ಈ ಬಾರಿ ಎಸ್ಎಸ್ಎಲ್ಸಿಯ ಪ್ರಥಮ ಪರೀಕ್ಷೆ ಮಧ್ಯಮವಾಗಿತ್ತು ಎಂದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೇಳಿದ್ದಾರೆ. ಇಂದು ನಡೆದ ಪರೀಕ್ಷೆಯ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಕಟಿಸಲಿದೆ.

ವಿದ್ಯಾರ್ಥಿಗಳು ಮಾದರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ. ಕೆಎಸ್ಇಎಬಿ (KSEAB) ಅಧಿಕೃತ ವೆಬ್ಸೈಟ್ kseab.karnataka.gov.in ನಲ್ಲಿ ಪ್ರಶ್ನೆ ಪತ್ರಿಕೆಯೊಂದಿಗೆ ಉತ್ತರ ಕೀ 2024 ಬಿಡುಗಡೆಯಾಗಲಿದೆ. ಬಳಿಕ ವಿದ್ಯಾರ್ಥಿಗಳು ಈ ಉತ್ತರ ಪತ್ರಿಕೆಯನ್ನು ಡೌನ್ಲೋಡ್ ಮಾಡಬಹುದು. ಇಂದಿನಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ವಿಷಯವಾರು ಉತ್ತರ ಕೀಯನ್ನು ಪಡೆಯಬಹುದಾಗಿದೆ.
ಉತ್ತರ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ..?
ಹಂತ 1: ಇಲಾಖೆಯ ಅಧಿಕೃತ ವೆಬ್ಸೈಟ್ kseab.karnataka.gov.in ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ನಿಮಗೆ ಮಾದರಿ ಉತ್ತರಗಳಿಗಾಗಿ ಮತ್ತು ಆಕ್ಷೇಪಣೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಎಂದು ಕಾಣಸಿಗಲಿದೆ. ಅದರ ಮೇಲೆ ಕ್ಲಿಕ್ ಮಾಡಿ
ಹಂತ 3: ಎಸ್ಎಸ್ಎಲ್ಸಿ 2024 ಮಾದರಿ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಅಂತ ಕಾಣಸಿಗುತ್ತೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ 4: ಆಗ ಕರ್ನಾಟಕ ಎಸ್ಎಸ್ಎಲ್ಸಿ ಮಾದರಿ ಉತ್ತರ 2024 ಪುಟ ತೆರೆಯುತ್ತದೆ.
ಹಂತ 5: ನಂತರ ನೀವು ವಿಷಯವಾರು ಮಾದರಿ ಉತ್ತರಗಳನ್ನು ತಿಳಿದುಕೊಳ್ಳಬಹುದು
ಹಂತ 6: ಬಳಿಕ ಮಾದರಿ ಉತ್ತರಗಳ ಪಿಡಿಎಫ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications