KSRTC; ಕಾರ್ಮಿಕರು ಉಚಿತ ಬಸ್ಪಾಸ್ ಪಡೆಯಲು ಬೇಕಾದ ದಾಖಲೆಗಳು
ಬೆಂಗಳೂರು, ಅಕ್ಟೋಬರ್ 07; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ಪಾಸ್ ನೀಡುತ್ತಿದೆ.
ಬಸ್ ಪಾಸ್ಗಳನ್ನು ಪಡೆಯಲು ಕಾರ್ಮಿಕರು ಇಡಿಸಿಎಸ್ ಇಲಾಖೆಯ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಗ್ರಾಮಸೇವಾ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕರೆ ನೀಡಿದ್ದಾರೆ.
ಈ ಪಾಸ್ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿಯೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪಡೆದ ಗುರುತಿನ ಚೀಟಿ, ಆಧಾರ್ ಕಾರ್ಡ್ ಸಲ್ಲಿಸಿ ಅಲ್ಲಿಯೇ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್ಪಾಸ್ಗಳನ್ನು ಪಡೆದುಕೊಳ್ಳಬಹುದಾಗಿದೆ.

ಅಗತ್ಯ ದಾಖಲೆಗಳು; ಬಸ್ಪಾಸ್ಗಾಗಿ ಅರ್ಜಿ ಸಲ್ಲಿಸುವ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರಬೇಕು ಹಾಗೂ ನೋಂದಣಿ ಚಾಲ್ತಿಯಲ್ಲಿರಬೇಕು.
ಪಾಸುದಾರರು ನಗರ, ಸಾಮಾನ್ಯ/ ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ, ಪಾಸಿನಲ್ಲಿ ನಮೂದಿಸಲಾದ ಪ್ರಾರಂಭಿಕ ಸ್ಥಳ/ ಪ್ರಾರಂಭಿಕ ಬಸ್ ನಿಲ್ದಾಣದಿಂದ 7 ಹಂತಗಳವರೆಗೆ (ಗರಿಷ್ಟ 45 ಕಿ. ಮೀ.) ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.

ಈ ಬಸ್ ಪಾಸ್ನ ಮಾನ್ಯತಾ ಅವಧಿಯು ಮೂರು ತಿಂಗಳಾಗಿರುತ್ತದೆ. ಮೂರು ತಿಂಗಳ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯವಾಗುವ ಕೊನೆಯ ದಿನಾಂಕಕ್ಕಿಂತ 15 ದಿನಗಳ ಮೊದಲು ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಬಸ್ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.
ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಬಸ್ಪಾಸ್ ಪಡೆಯುವಾಗ ವಿಳಾಸವನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.
ರಾಜ್ಯಾದ್ಯಂತ ವಿಸ್ತರಣೆ; ಮೊದಲು ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ ನೀಡುವ ಸೌಲಭ್ಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವ್ಯಾಪ್ತಿಯಲ್ಲಿ ಜಾರಿಯಲ್ಲಿತ್ತು. ಈಗ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ.
ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್ನಲ್ಲಿ ಉಚಿತ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದ್ದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ ಈ ಯೋಜನೆ ವಿಸ್ತರಿಸಲು ಅನುಮೋದನೆ ನೀಡಿ ಕಳೆದ ವಾರ ಆದೇಶ ಹೊರಡಿಸಲಾಗಿತ್ತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿ ಕೇಂದ್ರ ಕಛೇರಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ನೋಂದಾಯಿತ ಕಟ್ಟಡ ಮತ್ತುಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸುಗಳನ್ನು ವಿತರಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಪಾಸುಗಳ ದರ, ಪಾಸು ಪಡೆಯುವುದು ಸೇರಿದಂತೆ ಇತರ ನಿರ್ದೇಶನಗಳನ್ನು ನೀಡಿತ್ತು.
ಪಾಸು ತೋರಿಸುವುದು ಕಡ್ಡಾಯ; ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ರಸ್ತೆ ಸಾರಿಗೆ ನಿಗಮಗಳು ಜಂಟಿಯಾಗಿ ಪಾಸ್ಗಳ ವಿನ್ಯಾಸವನ್ನು ಮಾಡಿವೆ.
ಪಾಸುದಾರರು ಪ್ರಯಾಣಿಸುವಾಗ ಚಾಲನಾ ಸಿಬ್ಬಂದಿಗಳಿಗೆ/ ತನಿಖಾಧಿಕಾರಿಗಳು ಕೇಳಿದಾಗ ಪಾಸ್ ತೋರಿಸುವುದು ಕಡ್ಡಾಯ. ಚಾಲನಾ ಸಿಬ್ಬಂದಿಗಳು ಪಾಸುಗಳ ಮಾನ್ಯತಾ ಅವಧಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು.
ಚಾಲನಾ ಸಿಬ್ಬಂದಿಗಳು ಹಾಗೂ ತನಿಖಾ ಸಿಬ್ಬಂದಿಗಳು ನಮೂನೆಯ ಮಾದರಿಯನ್ನು ಗಮನದಲ್ಲಿರಿಸಿಕೊಂಡು ಪ್ರಯಾಣದ ಸಂದರ್ಭದಲ್ಲಿ ಪರಿಶೀಲನೆ ಮಾಡಬೇಕು. ಈ ಪಾಸ್ ವಿತರಣೆ, ನಿರ್ವಹಣೆ ಹಾಗೂ ನವೀಕರಣ ಕೆಲಸವನ್ನು ರಾಜ್ಯದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ವಹಣೆ ಮಾಡಲಿದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications