KSRTC; ಕಾರ್ಮಿಕರು ಉಚಿತ ಬಸ್ಪಾಸ್ ಪಡೆಯಲು ಬೇಕಾದ ದಾಖಲೆಗಳು
ಬೆಂಗಳೂರು, ಅಕ್ಟೋಬರ್ 07; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ಪಾಸ್ ನೀಡುತ್ತಿದೆ.
ಬಸ್ ಪಾಸ್ಗಳನ್ನು ಪಡೆಯಲು ಕಾರ್ಮಿಕರು ಇಡಿಸಿಎಸ್ ಇಲಾಖೆಯ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಗ್ರಾಮಸೇವಾ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕರೆ ನೀಡಿದ್ದಾರೆ.
ಈ ಪಾಸ್ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿಯೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪಡೆದ ಗುರುತಿನ ಚೀಟಿ, ಆಧಾರ್ ಕಾರ್ಡ್ ಸಲ್ಲಿಸಿ ಅಲ್ಲಿಯೇ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್ಪಾಸ್ಗಳನ್ನು ಪಡೆದುಕೊಳ್ಳಬಹುದಾಗಿದೆ.

ಅಗತ್ಯ ದಾಖಲೆಗಳು; ಬಸ್ಪಾಸ್ಗಾಗಿ ಅರ್ಜಿ ಸಲ್ಲಿಸುವ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರಬೇಕು ಹಾಗೂ ನೋಂದಣಿ ಚಾಲ್ತಿಯಲ್ಲಿರಬೇಕು.
ಪಾಸುದಾರರು ನಗರ, ಸಾಮಾನ್ಯ/ ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ, ಪಾಸಿನಲ್ಲಿ ನಮೂದಿಸಲಾದ ಪ್ರಾರಂಭಿಕ ಸ್ಥಳ/ ಪ್ರಾರಂಭಿಕ ಬಸ್ ನಿಲ್ದಾಣದಿಂದ 7 ಹಂತಗಳವರೆಗೆ (ಗರಿಷ್ಟ 45 ಕಿ. ಮೀ.) ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.

ಈ ಬಸ್ ಪಾಸ್ನ ಮಾನ್ಯತಾ ಅವಧಿಯು ಮೂರು ತಿಂಗಳಾಗಿರುತ್ತದೆ. ಮೂರು ತಿಂಗಳ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯವಾಗುವ ಕೊನೆಯ ದಿನಾಂಕಕ್ಕಿಂತ 15 ದಿನಗಳ ಮೊದಲು ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಬಸ್ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.
ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಬಸ್ಪಾಸ್ ಪಡೆಯುವಾಗ ವಿಳಾಸವನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.
ರಾಜ್ಯಾದ್ಯಂತ ವಿಸ್ತರಣೆ; ಮೊದಲು ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ ನೀಡುವ ಸೌಲಭ್ಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವ್ಯಾಪ್ತಿಯಲ್ಲಿ ಜಾರಿಯಲ್ಲಿತ್ತು. ಈಗ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ.
ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್ನಲ್ಲಿ ಉಚಿತ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದ್ದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ ಈ ಯೋಜನೆ ವಿಸ್ತರಿಸಲು ಅನುಮೋದನೆ ನೀಡಿ ಕಳೆದ ವಾರ ಆದೇಶ ಹೊರಡಿಸಲಾಗಿತ್ತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿ ಕೇಂದ್ರ ಕಛೇರಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ನೋಂದಾಯಿತ ಕಟ್ಟಡ ಮತ್ತುಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸುಗಳನ್ನು ವಿತರಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಪಾಸುಗಳ ದರ, ಪಾಸು ಪಡೆಯುವುದು ಸೇರಿದಂತೆ ಇತರ ನಿರ್ದೇಶನಗಳನ್ನು ನೀಡಿತ್ತು.
ಪಾಸು ತೋರಿಸುವುದು ಕಡ್ಡಾಯ; ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ರಸ್ತೆ ಸಾರಿಗೆ ನಿಗಮಗಳು ಜಂಟಿಯಾಗಿ ಪಾಸ್ಗಳ ವಿನ್ಯಾಸವನ್ನು ಮಾಡಿವೆ.
ಪಾಸುದಾರರು ಪ್ರಯಾಣಿಸುವಾಗ ಚಾಲನಾ ಸಿಬ್ಬಂದಿಗಳಿಗೆ/ ತನಿಖಾಧಿಕಾರಿಗಳು ಕೇಳಿದಾಗ ಪಾಸ್ ತೋರಿಸುವುದು ಕಡ್ಡಾಯ. ಚಾಲನಾ ಸಿಬ್ಬಂದಿಗಳು ಪಾಸುಗಳ ಮಾನ್ಯತಾ ಅವಧಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು.
ಚಾಲನಾ ಸಿಬ್ಬಂದಿಗಳು ಹಾಗೂ ತನಿಖಾ ಸಿಬ್ಬಂದಿಗಳು ನಮೂನೆಯ ಮಾದರಿಯನ್ನು ಗಮನದಲ್ಲಿರಿಸಿಕೊಂಡು ಪ್ರಯಾಣದ ಸಂದರ್ಭದಲ್ಲಿ ಪರಿಶೀಲನೆ ಮಾಡಬೇಕು. ಈ ಪಾಸ್ ವಿತರಣೆ, ನಿರ್ವಹಣೆ ಹಾಗೂ ನವೀಕರಣ ಕೆಲಸವನ್ನು ರಾಜ್ಯದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ವಹಣೆ ಮಾಡಲಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications