ಅವಧಿಗೂ ಮುನ್ನ ನಾನೇಕೆ ರಾಜೀನಾಮೆ ಕೊಡ್ಲಿ?
ಬೆಂಗಳೂರು, ಮೇ 21 : "ರಾಜ್ಯಪಾಲನಾಗಿ ನನ್ನ ಅವಧಿ ಜೂ.29ರವರೆಗೆ ಇದೆ. ಅವಧಿಗೂ ಮುನ್ನ ನಾನು ರಾಜೀನಾಮೆ ನೀಡುವುದಿಲ್ಲ" ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಕರ್ನಾಟಕದ ರಾಜ್ಯಪಾಲರು ಅವಧಿಗೆ ಮುನ್ನ ರಾಜೀನಾಮೆ ನೀಡಲಿದ್ದಾರೆ ಎಂದು ಹರಿದಾಡುತ್ತಿದ್ದ ಸುದ್ದಿಗಳಿಗೆ ತೆರೆ ಬಿದ್ದಿದೆ.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ರಾಜ್ಯಪಾಲರು, ಕರ್ನಾಟಕದ ರಾಜ್ಯಪಾಲನಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿರುವ ತೃಪ್ತಿ ಇದೆ. ನನ್ನ ಅವಧಿ ಜೂ.29ರವರೆಗೆ ಇದೆ. ಅಲ್ಲಿಯವರೆಗೆ ರಾಜೀನಾಮೆ ನೀಡುವುದಿಲ್ಲ ಹೇಳಿದರು. ನಾನು ಯಾವಾಗ ರಾಜೀನಾಮೆ ನೀಡಬೇಕು ಎಂಬ ಬಗ್ಗೆ ರಾಷ್ಟ್ರಪತಿ ಭವನದಿಂದ ನಿರ್ದೇಶನ ಬರುತ್ತದೆ, ಆಗ ರಾಜೀನಾಮೆ ನೀಡುತ್ತೇನೆ ಎಂದರು.

ರಾಜ್ಯಪಾಲ ಹುದ್ದೆ ಸಾಂವಿಧಾನಿಕವಾದುದು. ನನ್ನ ರಾಜೀನಾಮೆ ಬಗ್ಗೆ ರಾಷ್ಟ್ರಪತಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜೀನಾಮೆ ವಿಚಾರದ ಬಗ್ಗೆ ರಾಷ್ಟ್ರಪತಿಗಳಿಗೆ ಮಾತ್ರವೇ ವರದಿ ನೀಡುತ್ತೇನೆ. ರಾಜ್ಯಕ್ಕೆ ಹೊಸ ರಾಜ್ಯಪಾಲರು ಬರುವುದಕ್ಕೂ ಮೊದಲೇ ರಾಜೀನಾಮೆ ನೀಡುವುದಿಲ್ಲ ಎಂದು ಎಚ್.ಆರ್.ಭಾರದ್ವಾಜ್ ಸ್ಪಷ್ಟಪಡಿಸಿದರು. [ಬಿಜೆಪಿ ಅಧಿಕಾರಕ್ಕೆ ಬಂದ್ರೆ ರಾಜ್ಯಪಾಲರು ಮನೆಗೆ]
ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಹಲವು ರಾಜ್ಯಪಾಲರು ಅವಧಿಗೂ ಮೊದಲೇ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕರ್ನಾಟಕದ ರಾಜ್ಯಪಾಲರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳಿತ್ತು. ಆದರೆ, ಈ ಉಹಾಪೋಹಗಳಿಗೆ ಭಾರದ್ವಾಜ್ ಮಂಗಳವಾರ ತೆರೆ ಎಳೆದಿದ್ದಾರೆ.
ಪ್ರತಿಕ್ರಿಯೆ ನೀಡಲು ನಕಾರ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಾಜ್ಯಪಾಲರು "ನಾನು ದೆಹಲಿಯ ಯಾವುದೇ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿಲ್ಲ. ಆದ್ದರಿಂದ ಸೋಲಿನ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ" ಎಂದು ತಿಳಿಸಿದರು.
ಕರ್ನಾಟಕ ಕಾಂಗ್ರೆಸ್ ಸಹ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯಪಾಲರು, ಈ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಿ, ಚುನಾವಣೆ ಫಲಿತಾಂಶ ಬಂದ ಬಳಿಕ ಮುಖ್ಯಮಂತ್ರಿಯೊಂದಿಗೆ ನಾನು ಮಾತುಕತೆ ನಡೆಸಿಲ್ಲ ಎಂದು ಹೇಳಿದರು.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications