ಅವಧಿಗೂ ಮುನ್ನ ನಾನೇಕೆ ರಾಜೀನಾಮೆ ಕೊಡ್ಲಿ?
ಬೆಂಗಳೂರು, ಮೇ 21 : "ರಾಜ್ಯಪಾಲನಾಗಿ ನನ್ನ ಅವಧಿ ಜೂ.29ರವರೆಗೆ ಇದೆ. ಅವಧಿಗೂ ಮುನ್ನ ನಾನು ರಾಜೀನಾಮೆ ನೀಡುವುದಿಲ್ಲ" ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಕರ್ನಾಟಕದ ರಾಜ್ಯಪಾಲರು ಅವಧಿಗೆ ಮುನ್ನ ರಾಜೀನಾಮೆ ನೀಡಲಿದ್ದಾರೆ ಎಂದು ಹರಿದಾಡುತ್ತಿದ್ದ ಸುದ್ದಿಗಳಿಗೆ ತೆರೆ ಬಿದ್ದಿದೆ.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ರಾಜ್ಯಪಾಲರು, ಕರ್ನಾಟಕದ ರಾಜ್ಯಪಾಲನಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿರುವ ತೃಪ್ತಿ ಇದೆ. ನನ್ನ ಅವಧಿ ಜೂ.29ರವರೆಗೆ ಇದೆ. ಅಲ್ಲಿಯವರೆಗೆ ರಾಜೀನಾಮೆ ನೀಡುವುದಿಲ್ಲ ಹೇಳಿದರು. ನಾನು ಯಾವಾಗ ರಾಜೀನಾಮೆ ನೀಡಬೇಕು ಎಂಬ ಬಗ್ಗೆ ರಾಷ್ಟ್ರಪತಿ ಭವನದಿಂದ ನಿರ್ದೇಶನ ಬರುತ್ತದೆ, ಆಗ ರಾಜೀನಾಮೆ ನೀಡುತ್ತೇನೆ ಎಂದರು.

ರಾಜ್ಯಪಾಲ ಹುದ್ದೆ ಸಾಂವಿಧಾನಿಕವಾದುದು. ನನ್ನ ರಾಜೀನಾಮೆ ಬಗ್ಗೆ ರಾಷ್ಟ್ರಪತಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜೀನಾಮೆ ವಿಚಾರದ ಬಗ್ಗೆ ರಾಷ್ಟ್ರಪತಿಗಳಿಗೆ ಮಾತ್ರವೇ ವರದಿ ನೀಡುತ್ತೇನೆ. ರಾಜ್ಯಕ್ಕೆ ಹೊಸ ರಾಜ್ಯಪಾಲರು ಬರುವುದಕ್ಕೂ ಮೊದಲೇ ರಾಜೀನಾಮೆ ನೀಡುವುದಿಲ್ಲ ಎಂದು ಎಚ್.ಆರ್.ಭಾರದ್ವಾಜ್ ಸ್ಪಷ್ಟಪಡಿಸಿದರು. [ಬಿಜೆಪಿ ಅಧಿಕಾರಕ್ಕೆ ಬಂದ್ರೆ ರಾಜ್ಯಪಾಲರು ಮನೆಗೆ]
ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಹಲವು ರಾಜ್ಯಪಾಲರು ಅವಧಿಗೂ ಮೊದಲೇ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕರ್ನಾಟಕದ ರಾಜ್ಯಪಾಲರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳಿತ್ತು. ಆದರೆ, ಈ ಉಹಾಪೋಹಗಳಿಗೆ ಭಾರದ್ವಾಜ್ ಮಂಗಳವಾರ ತೆರೆ ಎಳೆದಿದ್ದಾರೆ.
ಪ್ರತಿಕ್ರಿಯೆ ನೀಡಲು ನಕಾರ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಾಜ್ಯಪಾಲರು "ನಾನು ದೆಹಲಿಯ ಯಾವುದೇ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿಲ್ಲ. ಆದ್ದರಿಂದ ಸೋಲಿನ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ" ಎಂದು ತಿಳಿಸಿದರು.
ಕರ್ನಾಟಕ ಕಾಂಗ್ರೆಸ್ ಸಹ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯಪಾಲರು, ಈ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಿ, ಚುನಾವಣೆ ಫಲಿತಾಂಶ ಬಂದ ಬಳಿಕ ಮುಖ್ಯಮಂತ್ರಿಯೊಂದಿಗೆ ನಾನು ಮಾತುಕತೆ ನಡೆಸಿಲ್ಲ ಎಂದು ಹೇಳಿದರು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications