ಕೆಎಸ್ಓಯು ವಿದ್ಯಾರ್ಥಿಗಳಿಗೆ ಆಗಸ್ಟ್ 10ಕ್ಕೆ ಸಿಹಿಸುದ್ದಿ ನಿರೀಕ್ಷೆ
ಬೆಂಗಳೂರು, ಆಗಸ್ಟ್ 3: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಯುಜಿಸಿ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಅತಂತ್ರಗೊಂಡಿದ್ದ ಸರಿಸುಮಾರು 1 ಲಕ್ಷ ವಿದ್ಯಾರ್ಥಿಗಳಿಗೆ ಆ.10 ರಂದು ಸಿಹಿಸುದ್ದಿ ನಿರೀಕ್ಷೆಯಿದೆ.
ಕೆಎಸ್ಒಯು ಮಾನ್ಯತೆ ಕೇಂದ್ರದ ಹೊಣೆಯಲ್ಲ, ಯುಜಿಸಿಯದ್ದು: ಜಾವಡೇಕರ್
ಶುಕ್ರವಾರ ನವದೆಹಲಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದಾರೆ.
ಈ ವೇಳೆ ಸಚಿವ ಪ್ರಕಾಶ್ ಜಾವಡೇಕರ್ ಆಗಸ್ಟ್ 10ರಂದು ಕೆಎಸ್ಓಯುಗೆ ಮಾನ್ಯತೆ ನೀಡುವ ಆದೇಶ ಹೊರಬೀಳಲಿದೆ ಎಂಬ ಭರವಸೆ ನೀಡಿದ್ದಾರೆ. ಈ ಕುರಿತು ಸಚಿವ ಸದಾನಂದಗೌಡ ಅವರ ಕಚೇ ಮಾಹಿತಿ ನೀಡಿದೆ. ಈ ನಿರ್ಧಾರದಿಂದ ಅನಿಶ್ಚಿತತೆ ತೂಗುಯ್ಯಾಲೆಯಲ್ಲಿದ್ದ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಭವಿಷ್ಯವನ್ನು ನಿಶ್ಚಿತ ಗುರಿ ಮುಟ್ಟಿಸುವಲ್ಲಿ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಂತಾಗಿದೆ.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಮತ್ತೆ ನೀಡುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಸಂಬಂಧಪಟ್ಟ ಕಡತ ರವಾನಿಸಿದೆ. ಈ ಕುರಿತು ಪ್ರಕಾಶ್ ಜಾವಡೇಕರ್ ಸದಾನಂದಗೌಡರ ಮನವಿಗೆ ಸ್ಪಂದಿಸಿದ್ದಾರೆ. ಆಗಸ್ಟ್ 10ರಂದು ಇದರ ಸಂಬಂಧ ಯುಜಿಸಿಯಿಂದ ಸೂಚನೆ ಹೊರಬರಲಿದೆ.