ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್‌ಓಯು ವಿದ್ಯಾರ್ಥಿಗಳಿಗೆ ಆಗಸ್ಟ್ 10ಕ್ಕೆ ಸಿಹಿಸುದ್ದಿ ನಿರೀಕ್ಷೆ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 3: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಯುಜಿಸಿ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಅತಂತ್ರಗೊಂಡಿದ್ದ ಸರಿಸುಮಾರು 1 ಲಕ್ಷ ವಿದ್ಯಾರ್ಥಿಗಳಿಗೆ ಆ.10 ರಂದು ಸಿಹಿಸುದ್ದಿ ನಿರೀಕ್ಷೆಯಿದೆ.

ಕೆಎಸ್‌ಒಯು ಮಾನ್ಯತೆ ಕೇಂದ್ರದ ಹೊಣೆಯಲ್ಲ, ಯುಜಿಸಿಯದ್ದು: ಜಾವಡೇಕರ್ಕೆಎಸ್‌ಒಯು ಮಾನ್ಯತೆ ಕೇಂದ್ರದ ಹೊಣೆಯಲ್ಲ, ಯುಜಿಸಿಯದ್ದು: ಜಾವಡೇಕರ್

ಶುಕ್ರವಾರ ನವದೆಹಲಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದಾರೆ.

HRD ministry may issue notification of KSOU on Aug 10

ಈ ವೇಳೆ ಸಚಿವ ಪ್ರಕಾಶ್‌ ಜಾವಡೇಕರ್ ಆಗಸ್ಟ್ 10ರಂದು ಕೆಎಸ್‌ಓಯುಗೆ ಮಾನ್ಯತೆ ನೀಡುವ ಆದೇಶ ಹೊರಬೀಳಲಿದೆ ಎಂಬ ಭರವಸೆ ನೀಡಿದ್ದಾರೆ. ಈ ಕುರಿತು ಸಚಿವ ಸದಾನಂದಗೌಡ ಅವರ ಕಚೇ ಮಾಹಿತಿ ನೀಡಿದೆ. ಈ ನಿರ್ಧಾರದಿಂದ ಅನಿಶ್ಚಿತತೆ ತೂಗುಯ್ಯಾಲೆಯಲ್ಲಿದ್ದ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಭವಿಷ್ಯವನ್ನು ನಿಶ್ಚಿತ ಗುರಿ ಮುಟ್ಟಿಸುವಲ್ಲಿ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಂತಾಗಿದೆ.

HRD ministry may issue notification of KSOU on Aug 10

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಮತ್ತೆ ನೀಡುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಸಂಬಂಧಪಟ್ಟ ಕಡತ ರವಾನಿಸಿದೆ. ಈ ಕುರಿತು ಪ್ರಕಾಶ್‌ ಜಾವಡೇಕರ್ ಸದಾನಂದಗೌಡರ ಮನವಿಗೆ ಸ್ಪಂದಿಸಿದ್ದಾರೆ. ಆಗಸ್ಟ್ 10ರಂದು ಇದರ ಸಂಬಂಧ ಯುಜಿಸಿಯಿಂದ ಸೂಚನೆ ಹೊರಬರಲಿದೆ.

English summary
Union ministry of Human Resource Development may issue notification on Karnataka State Open University of Mysore on August 10, union planning minster D.V.Sadananda Gowda said in a press release.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X