HSRP: ಈ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ದಂಡಾಸ್ತ್ರ ಪ್ರಯೋಗ, ಯಾವಾಗಿನಿಂದ? ಸಾರಿಗೆ ಇಲಾಖೆ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್, 08: ಈಗಾಗಲೇ ಸಾರಿಗೆ ಇಲಾಖೆ 2019ರ ಹಿಂದಿನ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ಜನರು ಇದನ್ನು ಪಾಲಿಸಿದರೆ, ಇನ್ನು ಬಹುತೇಕ ಮಂದಿ ಈ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಕೊಂಡಿಲ್ಲ ಎನ್ನುವುದು ಸಾರಿಗೆ ಇಲಾಖೆಯ ವಾದವಾಗಿದೆ. ಆದ್ದರಿಂದ ಯಾರೂ ತಮ್ಮ ವಾಹನಗಳಿಗೆ ಈ ನಂಬರ್ ಪ್ಲೇಟ್ ಅನ್ನು ಹಾಕಿಸಿಲ್ಲವೋ ಅಂತಹವರ ಮೇಳೆ ದಂಡಾಸ್ತ್ರ ಪ್ರಯೋಗ ಮಾಡಲು ಇಲಾಖೆ ಮುಂದಾಗಿದೆ.
2019ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಆಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ ಎಚ್ಎಸ್ಆರ್ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಜೂನ್ 1ರಿಂದ ಪೊಲೀಸ್ ಇಲಾಖೆ ಜೊತೆ ಸೇರಿ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.

HSRP ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಎರಡು ಬಾರಿ ಗುಡುವು ವಿಸ್ತರಣೆ ಮಾಡಲಾಗಿದೆ. ಈ ಹಿಂದೆ 2023ರ ನವೆಂಬರ್ 13ರೊಳಗೆ ಎಚ್ಎಸ್ಆರ್ಪಿ ಅಳವಡಿ ಮಾಡಲು ಗಡುವು ನೀಡಲಾಗಿದ್ದು, ಆ ವೇಳೆ ಕೇವಲ 30,000 ವಾಹನಗಳ ಮಾಲೀಕರು ಮಾತ್ರ ನೋಂದಣಿ ಮಾಡಿಕೊಂಡಿದ್ದರು. ಆದ್ದರಿಂದ ಮತ್ತೆ ಫೆಬ್ರವರಿ 17 ರವರೆಗೆ ಗಡುವನ್ನು ವಿಸ್ತರಣೆ ಮಾಡಲಾಯಿತು. ಈ ವೇಳೆಗೆ 18 ಲಕ್ಷ ವಾಹನಗಳಿಗೆ HSRP ಅಳವಡಿಕೆ ಮಾಡಿಕೊಂಡಿದ್ದರು. ಮತ್ತೆ ಮೇ 31ರವರೆಗೆ HSRP ಅಳವಡಿಕೆ ಗಡುವು ವಿಸ್ತರಣೆ ಮಾಡಲಾಗಿದೆ.
ಈ ಗುಡುವಿನ ನಂತರವೂ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಲವಡಿಕೆ ಮಾಡದ ವಾಹನಗಳ ವಿರುದ್ಧ ದಂಡ ಪ್ರಯೋಗ ಮಾಡಲು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದ್ದು, ನಂತರ ವಾಹನ ಮಾಲೀಕರು ನೋಂದಣಿ ಪ್ರಮಾಣ ಹೆಚ್ಚಾಗಿ 18ಲಕ್ಷಕ್ಕೆ ತಲುಪಿದೆ. ಈಗ 52 ಲಕ್ಷ ವಾಹನಗಳ ನೋಂದಣಿಯಾಗಿದೆ.
ಎರಡನೇ ತಿಂಗಳಲ್ಲಿ 34 ಲಕ್ಷ ವಾಹನಗಳು HSRP ಅಳವಡಿಸಿಕೊಂಡಿದ್ದು, ಇನ್ನೂ ಸುಮಾರು 1.48 ಕೋಟಿ ವಾಹನಗಳು HSRP ಅಳವಡಿಸಿಕೊಳ್ಳಬೇಕಿದೆ. ನಿಗದಿತ ಗಡುವಿನೊಳಗೆ HSRP ಅಳವಡಿಸದಿದ್ದರೆ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಬಹುದು. ಗಡುವು ವಿಸ್ತರಿಸದಿದ್ದರೆ HSRP ಇಲ್ಲದ ವಾಹನಗಳಿಗೆ 500 ರಿಂದ 1000 ರೂಪಾಯಿ ದಂಡ ವಿಧಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications