HSRP; ಸಾರಿಗೆ ಇಲಾಖೆಯಿಂದ ಮಹತ್ವದ ಮಾಹಿತಿ
ಬೆಂಗಳೂರು, ಏಪ್ರಿಲ್ 23: ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಮೇ ಅಂತ್ಯದ ತನಕ ಗಡುವು ನೀಡಲಾಗಿದೆ. ಈ ಗಡುವು ಮತ್ತೆ ವಿಸ್ತರಣೆ ಮಾಡುವುದಿಲ್ಲ ಎಂದು ಸಾರಿಗೆ ಇಲಾಖೆ ಹೇಳಿದ್ದು, ಜೂನ್ ತಿಂಗಳಿನಿಂದ ದಂಡ ಹಾಕಲು ತೀರ್ಮಾನಿಸಲಾಗಿದೆ.
ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. "ಈ ತನಕ ರಾಜ್ಯದಲ್ಲಿ 34 ಲಕ್ಷ ವಾಹನಗಳಿಗೆ ಹೆಚ್ಎಸ್ಆರ್ಪಿ ನೋಂದಣಿ ಮಾಡಲಾಗಿದೆ. ಎರಡು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿದೆ" ಎಂದರು.

ನೋಂದಣಿ ಬಾಕಿ ಇದೆ: "ಫೆಬ್ರವರಿ ತಿಂಗಳ ವೇಳೆಗೆ ಸುಮಾರು 18 ಲಕ್ಷ ವಾಹನಗಳು ನೋಂದಣಿಯಾಗಿತ್ತು. ಏಪ್ರಿಲ್ ತಿಂಗಳ ವೇಳೆಗೆ ಈ ಸಂಖ್ಯೆ ದುಪ್ಪಟ್ಟಾಗಿದೆ. ಆದರೆ ಇನ್ನೂ ಹೆಚ್ಚಿನ ಸಂಖ್ಯೆಯ ವಾಹನಗಳ ಪ್ಲೇಟ್ ಅಳವಡಿಕೆ ಬಾಕಿ ಇದೆ" ಎಂದು ಆಯುಕ್ತರು ಹೇಳಿದ್ದಾರೆ.
"ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ನಂತರವೂ ಅಳವಡಿಕೆ ಮಾಡದಿದ್ದರೆ 1000 ರೂ. ದಂಡ ಹಾಕಲಾಗುತ್ತದೆ" ಎಂದು ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ.
"ಹೆಚ್ಎಸ್ಆರ್ಪಿ ಅಳವಡಿಕೆಗೆ ಮೇ ಅಂತ್ಯದ ತನಕ ಗಡುವು ನೀಡಲಾಗಿದೆ. ಲೋಕಸಭೆ ಮಾದರಿ ಚುನಾವಣಾ ನೀತಿ ಸಂಹಿತೆ ಮುಗಿಯುವ ತನಕ ಕಾಯಲಾಗುತ್ತದೆ. ಬಳಿಕ ಸರ್ಕಾರದ ಜೊತೆ ಚರ್ಚಿಸಿ, ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ" ಎಂದರು.
"ಸದ್ಯ ನೀಡಿರುವ ಗಡುವಿನಂತೆ ಮೇ 31ರ ತನಕ ಕಾಯಲಾಗುತ್ತದೆ. ಹೆಚ್ಎಸ್ಆರ್ಪಿ ನೋಂದಣಿ 75 ಲಕ್ಷ ದಾಟುವ ನಿರೀಕ್ಷೆ ಇದೆ. ಅದರ ನಂತರವೂ ಗಡುವು ವಿಸ್ತರಣೆ ಮಾಡಬೇಕೆ?" ಎಂದು ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.
"ಜನರು ಈಗ ಹೆಚ್ಎಸ್ಆರ್ಪಿ ನೋಂದಣಿಗೆ ಮುಗಿ ಬೀಳುತ್ತಿದ್ದಾರೆ. ಇನ್ನಷ್ಟು ಸಮಯ ವಿಸ್ತರಣೆ ಮಾಡಿದರೆ ಎಲ್ಲಾ ವಾಹನಗಳ ನೋಂದಣಿ ಪೂರ್ಣವಾಗಲಿದೆ ಎಂಬ ಅಭಿಪ್ರಾಯವಿದೆ. ಆದರೆ ಗಡುವು ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸದ್ಯಕ್ಕೆ ಗಡುವು ವಿಸ್ತರಣೆ ಮಾಡುವ ಪ್ರಸ್ತಾಪ ಇಲಾಖೆ ಮುಂದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.
ಎಷ್ಟು ವಾಹನಗಳು ಬಾಕಿ?; ಕರ್ನಾಟಕದ ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. 2024ರ ಫೆಬ್ರವರಿಯಲ್ಲಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಮೇ 31, 2024ರ ತನಕ ಗಡುವು ನೀಡಲಾಗಿದೆ.
ಸಾರಿಗೆ ಇಲಾಖೆಯ ಮಾಹಿತಿಯಂತೆ ಸುಮಾರು 2 ಕೋಟಿ ವಾಹನಗಳು ಇನ್ನೂ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ. ಆದರೆ, ಮೇ 31ರ ಗಡುವು ಮತ್ತೆ ವಿಸ್ತರಣೆ ಮಾಡುವುದಿಲ್ಲ. ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದಂಡ ಪ್ರಯೋಗ ಮಾಡಲು ಇಲಾಖೆ ಚಿಂತನೆ ನಡೆಸಿದೆ.
ಈಗಾಗಲೇ ಎರಡು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಮೊದಲು 2023ರ ನವೆಂಬರ್ 17ರ ತನಕ ಅವಕಾಶ ನೀಡಲಾಗಿತ್ತು. ಬಳಿಕ 2024ರ ಫೆಬ್ರವರಿ 17ರ ತನಕ ಗಡುವು ನೀಡಲಾಗಿತ್ತು. ವಾಹನ ಸವಾರರ ಒತ್ತಾಯದ ಮೇರೆಗೆ ಮೇ 31ರ ತನಕ ಗಡುವು ನೀಡಲಾಗಿದೆ. ಆದ್ದರಿಂದ ಮತ್ತೆ ಗಡುವು ವಿಸ್ತರಣೆ ಮಾಡುವುದಿಲ್ಲ ಎಂಬುದು ಅಧಿಕಾರಿಗಳು ಹೇಳಿಕೆ.
ಹೆಚ್ಎಸ್ಆರ್ಪಿ ಬಗ್ಗೆ ಜನರಿಗೆ ಸಹಾಯ ಮಾಡಲು ಸಾರಿಗೆ ಇಲಾಖೆ ಸಹಾಯವಾಣಿ ಆರಂಭಿಸಿದೆ. ಜನರು ಸಹಾಯವಾಣಿ ಸಂಖ್ಯೆ 9449863429/26 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಆನ್ಲೈನ್ನಲ್ಲಿ ಹೆಚ್ಎಸ್ಆರ್ಪಿ ಪ್ಲೇಟ್ ನೋಂದಣಿಗಾಗಿ ಹಲವಾರು ಲಿಂಕ್ ಸಿಗುತ್ತವೆ. ಆದರೆ ಅಧಿಕೃತ ಲಿಂಕ್ ಮೂಲಕ ಮಾತ್ರ ನೋಂದಣಿ ಮಾಡಿಸಬೇಕು ಎಂದು ಮನವಿ ಮಾಡಲಾಗಿದೆ.
ಜನರು https://transport.karnataka.gov.in ಅಥವ www.siam.in ವೆಬ್ಸೈಟ್ಗೆ ಭೇಟಿ ನೀಡಿ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ನೋಂದಣಿ ಮಾಡಬೇಕು. ಈ ಪೋರ್ಟಲ್ ಮೂಲಕ ನೋಂದಣಿಯಾದ ಹೆಚ್ಎಸ್ಆರ್ಪಿಗಳು ಮಾತ್ರ ಮಾನ್ಯತೆ ಹೊಂದಿವೆ.
ವಾಹನಗಳ ಮಾಲೀಕರು ವೆಬ್ಸೈಟ್ಗೆ ಭೇಟಿ ನೀಡಿ ವಾಹನದ ವಿವರ ನೀಡಿ ನೋಂದಣಿ ಮಾಡಿಸಬೇಕು. ಫಲಕ ಅಳವಡಿಕೆ ದಿನಾಂಕ, ಮಾರಾಟ ಕೇಂದ್ರದ ಹೆಸರು, ವಿಳಾಸ ಖಚಿತಪಡಿಸಿಕೊಳ್ಳಬೇಕು. ಆನ್ಲೈನ್ ಮೂಲಕವೇ ನಿಗದಿತ ಶುಲ್ಕವನ್ನು ಪಾವತಿಸಬೇಕು.
-
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್










Click it and Unblock the Notifications