ಬಸನಗೌಡ ಪಾಟೀಲ ಯತ್ನಾಳಗೆ ಆರು ತಿಂಗಳು ಶಿಕ್ಷೆ
ಹುಬ್ಬಳ್ಳಿ, ನವೆಂಬರ್, 17: ವಿಧಾನ ಪರಿಷತ್ ಸದಸ್ಯ ವಿಜಯ ಸಂಕೇಶ್ವರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಹುಬ್ಬಳ್ಳಿ 2ನೇ ಜೆಎಂಎಫ್ಸಿ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ಹಾಗೂ 24 ಸಾವಿರ ರೂ ದಂಡ ವಿಧಿಸಿದೆ.
ವಿಆರ್ ಎಲ್ ಸಮೂಹ ಸಂಸ್ಥೆ ಮಾಲೀಕ ಸಂಕೇಶ್ವರ್ ಅವರಿಗೆ 25 ಸಾವಿರ ರೂ. ಪರಿಹಾರ ನೀಡುವಂತೆ ಯತ್ನಾಳಗೆ ಕೋರ್ಟ್ ಆದೇಶಿಸಿದೆ. ಅಕಸ್ಮಾತ್ ದಂಡ ಹಾಗೂ ಪರಿಹಾರ ನೀಡಲು ವಿಫಲರಾದರೆ 1 ತಿಂಗಳು ಹೆಚ್ಚುವರಿ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಹುಬ್ಬಳ್ಳಿ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.[ಸರ್ಕಾರದ ಅನುಮತಿಯಿಲ್ಲದೇ ಎದ್ದೇಳುತ್ತಿದೆ ಕೋರ್ಟ್ ಕಟ್ಟಡ]

ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದೇನು?
ಯತ್ನಾಳ 2004 ರಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ, 'ಸಂಕೇಶ್ವರರು ಪತ್ರಿಕಾ ಕ್ಷೇತ್ರ ದುರ್ಬಳಕೆ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಅನಂತಕುಮಾರ್ ಅವರಿಂದ ಸಾಕಷ್ಟು ಲಾಭ ಪಡೆದಿದ್ದಾರೆ. ಸಂಸತ್ ಸದಸ್ಯರಾಗಿ ಸದನಕ್ಕೆ ಬಾರದೆ ತಮ್ಮ ವ್ಯಾಪಾರ ಅಭಿವೃದ್ಧಿಗಾಗಿ ಸುತ್ತಾಡಲು ವಿಮಾನ ಟಿಕೆಟ್ ಸೌಲಭ್ಯ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಖಂಡಿಸಿ ಸಂಕೇಶ್ವರರು ಯತ್ನಾಳ ವಿರುದ್ಧ ಮಾನಹಾನಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. 11 ವರ್ಷ ವಿಚಾರಣೆ ಬಳಿಕ ನ್ಯಾಯಾಲಯ ಈ ತೀರ್ಪು ನೀಡಿದೆ.
ಬಸನಗೌಡ ಪಾಟೀಲ ಯತ್ನಾಳ ಅವರು ತೀರ್ಪಿನ ನಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಮಾನಹಾನಿ ಮೊಕದ್ದಮೆ ವಜಾಕ್ಕಾಗಿ ಹೈಕೋರ್ಟ್ ಗೂ ಅರ್ಜಿ ಸಲ್ಲಿಸಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications