Hijab: ಸಿದ್ದರಾಮಯ್ಯ ಮೂರ್ಖರಂತೂ ಅಲ್ಲವೇ ಅಲ್ಲ, ಗೊತ್ತಿದ್ದೇ ಮಾಡುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ಬೆಂಗಳೂರು, ಡಿಸೆಂಬರ್ 25: ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ಸಭೆ ಸಭಾಪತಿ ಪತ್ರ ಬರೆದಿದ್ದಾರೆ. ಆದರೆ ಅದನ್ನು ಅಧಿವೇಶನ ನಂತರ ಬರೆದಿದ್ದಾರೆ ಎಂದು ತಿರುಚುತ್ತಿದ್ದಾರೆ. ಸದನದಿಂದ ಕಾಂಗ್ರೆಸ್ ನವರು ಹೊರ ಹೋಗಬೇಕಿತ್ತು, ಹೋಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಸೋಮವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಚಳಿಗಾಲ ಅಧಿವೇಶನ ನಡೆದ ವೇಳೆಯಲ್ಲಿಯೇ ರಾಜ್ಯ ಸಭಾ ಸ್ಪೀಕರ್ ಜಗದೀಪ್ ಧನಕರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಅದರೂ ಸಹಿತ ಖರ್ಗೆ ಅವರು ಅಧಿವೇಶನ ನಂತರ ಪತ್ರ ಬರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸದನದಲ್ಲಿಯೇ ಧನಕರ್ ಅವರು ಖರ್ಗೆ ಅವರಿಗೆ ಮಾತುಕತೆಗೆ ಆಹ್ವಾನಿಸಿದ್ದರು ಎಂದು ಜೋಶಿ ತಿಳಿಸಿದರು.

ಸದನದಿಂದ ಕಾಂಗ್ರೆಸ್ ನವರು ಅಮಾನತು ಆಗಿ ಹೊರಹೋಗಬೆಕಿತ್ತು. ಅದಕ್ಕಾಗಿ ಈ ರೀತಿ ಮಾಡಿದ್ದಾರೆ. ಪತ್ರಕ್ಕೆ ಉತ್ತರಿಸದ ಅವರು ಸಸ್ಪೆಂಡ್ ಆಗೋಕೆ ತೀರ್ಮಾನ ಮಾಡಿದ್ದರು. ಕಾಂಗ್ರೆಸ್ ಪಾರ್ಟಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಟೀಕಿಸಿದರು.
ಹಿಜಾಬ್ ಬಗ್ಗೆ ಸಿಎಂ ಹೇಳಿಕೆ ದುರುದ್ದೇಶ ಹೊಂದಿದೆ
ಇನ್ನೂ ಒಂದು ವಿಷಯವನ್ನು ತಿರುಚುವುದರಲ್ಲಿ ಕಾಂಗ್ರೆಸ್ ಪಕ್ಷದವರು ನಿಸ್ಸೀಮರು. ಇಲ್ಲದ ಹಿಜಾಬ್ ನಿಷೇಧ ನಿರ್ಧಾರವನ್ನು ಹಿಂತೆಗೆಯುತ್ತೇನೆ ಎನ್ನುವುದು ಎಂತಹ ಮುಟ್ಟಾಳತನ. ಜನರ ಭಾವನೆ ಕೆರಳಿಸಿ ವೋಟ್ ಬ್ಯಾಂಕ್ ಅನ್ನು ಮಾಡಿಕೊಳ್ಳುವಂತಹ ಹುನ್ನಾರ ನಡೆಸಿದ್ದು, ಕಾಂಗ್ರೆಸ್ ದುರುದ್ದೇಶ ಹೊಂದಿದೆ. ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ನ ಇಂತಹ ನಡವಳಿಕಯ ಪರಿಣಾಮವನ್ನು ತಿರುಗಿ ಎದುರಿಸಬೇಕಾಗುತ್ತದೆ. ಕಾಂಗ್ರೆಸ್ ಪಕ್ಷದವರು ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಮಧ್ಯಪ್ರದೇಶದಲ್ಲಿ ಹಿಂದೂ ಎಂದು ಹೇಳಿಕೊಂಡು ಜನಿವಾರ ಪ್ರದರ್ಶನ ಮಾಡುವುದು,ಇದು ರಾಹುಲ್ ಗಾಂಧಿಯವರ ಹೊಸ ಸ್ಟ್ಯಾಂಡರ್ಡ್.
ಸಿದ್ದರಾಮಯ್ಯ ಮೂರ್ಖರಲ್ಲ
ಹಿಜಾಬ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲ ಗೊತ್ತಿದ್ದೇ ರೀತಿ ನಿಷೇಧ ನಿರ್ಧಾರ ಹಿಂಪಡೆಯುತ್ತೇವೆ ಎಂದೆಲ್ಲ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಇನ್ನೋಸೆಂಟ್ ಅಲ್ಲ, ಇಗ್ನೋರೆನ್ಸ್ ಅಲ್ಲ, ಮೂರ್ಖರಂತೂ ಮೊದಲೇ ಅಲ್ಲಾ ಎಂದು ಟಾಂಗ್ ನೀಡಿದರು.
ನಾಳೆ ಮಹಿಳಾ ಪೊಲೀಸ್ ಹಿಜಾಬ್ ಹಾಕಿಕೊಂಡು ಬರುತ್ತೀನಿ ಎಂದರೆ ನಡೆಯುತ್ತದಾ. ಏನು ಮಾಡುತ್ತಿದ್ದೀರಿ ನೀವು ಸಿದ್ದರಾಮಯ್ಯನವರೇ?. ದುರುದ್ದೇಶದಿಂದ ವೋಟ್ ಬ್ಯಾಂಕ್ ಪಾಲಿಟಿಕ್ಸ್ ಮಾಡುತ್ತಿದ್ದೀರಿ. ಬಹುಜನ ಸಮಾಜ ವಿರುದ್ಧವಾದಾಗ ನಾನು ಹಾಗೆ ಹೇಳಿಲ್ಲ ಎನ್ನುತ್ತಾರೆ ಎಂದರು.
ಬಿಜೆಪಿ ನಾಯಕರ ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿಯವರು, ಇಲ್ಲಿವರೆಗೂ ನನಗೆ ಮಾಹಿತಿ ಇಲ್ಲ. ನಾನು ಸೋಮಣ್ಣ ಅವರ ಜೊತೆ ಮಾತನಾಡುತ್ತೇನೆ ಎಂದ ಅವರು, ಕಳ್ಳನ ಕೈಗೆ ಚಾವಿ ಕೊಟ್ಟಿದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಸಲು ನಿರಾಕರಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications