Karnataka Trains: ಬಾಗಲಕೋಟೆ, ಯಲಹಂಕದ ರೈಲುಗಳ ಸಂಚಾರ ರದ್ದು, 'ವಿಬಿ' ರೈಲು ಸಮಯ ಬದಲು
ಹುಬ್ಬಳ್ಳಿ, ಸೆಪ್ಟಂಬರ್ 24: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಕೂಡಗಿ ರೈಲ್ವೆ ಯಾರ್ಡ್ ಇಂಜಿನಿಯರಿಂಗ್ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಹೊರಡುವ ಕೆಲ ರೈಲುಗಳು ರದ್ದಾಗಿವೆ. ಕೆಲ ರೈಲುಗಳನ್ನು ನಿಯಂತ್ರಿಸಲಾಗುತ್ತಿದೆ. ಇದರೊಂದಿಗೆ ದಕ್ಷಿಣ ರೈಲ್ವೆಯ ಎರ್ನಾಕುಲಂ-ಯಲಹಂಕ ರೈಲು ರದ್ದುಗೊಳಿಸಲಾಗಿದೆ. ಇತ್ತ ಬೆಳಗಾವಿ ಮತ್ತು ಧಾರವಾಡದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ನ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ.
ಯಲಹಂಕ-ಎರ್ನಾಕುಲಂ ಟ್ರೈ-ವೀಕ್ಲಿ ಸ್ಪೆಷಲ್ ರೈಲು ರದ್ದು
* ಎರ್ನಾಕುಲಂ-ಯಲಹಂಕ-ಎರ್ನಾಕುಲಂ ಸ್ಪೆಷಲ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 06101/06102) ವಾರದಲ್ಲಿ ಮೂರು ಟ್ರಿಪ್ಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರ ಕೊರತೆಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

* ಸೆಪ್ಟೆಂಬರ್ 25, 27 ಮತ್ತು 29 ರಂದು ಓಡಿಸಲು ನಿರ್ಧರಿಸಿದ್ದ ಎರ್ನಾಕುಲಂ-ಯಲಹಂಕ ಟ್ರೈ ವೀಕ್ಲಿ ಎಕ್ಸ್ಪ್ರೆಸ್ ರೈಲು (ಸಂಖ್ಯೆ 06101) ವಿಶೇಷ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.
* ಯಲಹಂಕ-ಎರ್ನಾಕುಲಂ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ ಸ್ಪೆಷಲ್ ರೈಲು (ಸಂಖ್ಯೆ 06102) ಸೆಪ್ಟೆಂಬರ್ 26, 28 ಮತ್ತು 30 ರಂದು ಸಂಚಾರ ರದ್ದುಗೊಳಿಸಲಾಗಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ನ ವೇಳಾಪಟ್ಟಿ ಪರಿಷ್ಕರಣೆ
ಇತ್ತೀಚೆಗೆ ಕಾರ್ಯಾಚರಣೆ ಆರಂಭಿಸಿರುವ ಪುಣೆ-ಎಸ್ಎಸ್ಎಸ್ ಹುಬ್ಬಳ್ಳಿ ಟ್ರೈ-ವೀಕ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 06102) ವೇಳಾಪಟ್ಟಿ ಪರಿಷ್ಕರಿಸಲಾಗಿದೆ. ಬೆಳಗಾವಿ ಮತ್ತು ಧಾರವಾಡ ನಿಲ್ದಾಣಗಳಲ್ಲಿ ಅಕ್ಟೋಬರ್ 3 ರಿಂದ ಈ ಪರಿಷ್ಕೃತ ವೇಳಾಪಟ್ಟಿ ಜಾರಿಗೆ ಬರಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
* ವಂದೇ ಭಾರತ್ ರೈಲು ಬೆಳಗಾವಿಗೆ ರಾತ್ರಿ 8:35/8:40 ಗಂಟೆಯ ಆಗಮಿಸುವ ಬದಲಾಗಿ ರಾತ್ರಿ 8:15/8:20 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
* ವಂದೇ ಭಾರತ್ ರೈಲು ಧಾರವಾಡ ನಿಲ್ದಾಣಕ್ಕೆ ರಾತ್ರಿ 10:20/10:22 ಗಂಟೆಯ ಬದಲು ರಾತ್ರಿ 10:13/10:15 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
ಹುಬ್ಬಳ್ಳಿ ವಿಭಾಗದಲ್ಲಿ ರದ್ದಾದ ರೈಲುಗಳ ಪಟ್ಟಿ
* ಹುಬ್ಬಳ್ಳಿ- ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು (ಸಂಖ್ಯೆ 06919) ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2 ಬಾಗಲಕೋಟೆವರೆಗೆ ಮಾತ್ರ ಸಂಚರಿಸಲಿದೆ. ಈ ರೈಲು ಬಾಗಲಕೋಟೆ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಂಡಿದೆ.
* ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ವಿಶೇಷ ರೈಲು (ಸಂಖ್ಯೆ 06920) ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ವಿಜಯಪುರದ ಬದಲು ಬಾಗಲಕೋಟೆ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ಮಧ್ಯೆ ಸಂಚಾರ ರದ್ದಾಗಿದೆ.
* ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು (ಸಂಖ್ಯೆ 07378) ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1 ರವರೆಗೆ ಬಾಗಲಕೋಟೆ ವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟೆ- ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚರಿಸುವುದಿಲ್ಲ.
* ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು (ಸಂಖ್ಯೆ 07377) ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ರೈಲು ವಿಜಯಪುರ ಬದಲಿಗೆ ಬಾಗಲಕೋಟೆ ನಿಲ್ದಾಣದಿಂದ ಸಂಚರಿಸುತ್ತದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ಮಧ್ಯದ ಸಂಚಾರ ರದ್ದಾಗಿದೆ.
* ಮೈಸೂರು- ಬಾಗಲಕೋಟೆ ಬಸವ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 17307) ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1ರವರೆಗೆ ವಿಜಯಪುರವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟೆವರೆಗೆ ರದ್ದುಗೊಳಿಸಲಾಗಿದೆ.
* ಬಾಗಲಕೋಟ-ಮೈಸೂರು ಬಸವ ಎಕ್ಸ್ಪ್ರೆಸ್ ರೈಲು (ಸಂಖ್ಯೆ 17308) ಸೆಪ್ಟೆಂಬರ್ 29ರಿಂದ ಅಕ್ಟೋಬರ್ 2ರವರೆಗೆ ಬಾಗಲಕೋಟೆ ನಿಲ್ದಾಣದ ಬದಲು ವಿಜಯಪುರ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚರಿಸುವುದಿಲ್ಲ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
-
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications