Get Updates
Get notified of breaking news, exclusive insights, and must-see stories!

ಹುಬ್ಬಳ್ಳಿ ಹುತಾತ್ಮ ಸೈನಿಕನಿಗೆ ಅಂತಿಮ ನಮನ

ಹುಬ್ಬಳ್ಳಿ, ಜೂನ್ 08 : ಹುಬ್ಬಳ್ಳಿಯ ಅಮರಗೋಳದ ಯೋಧ ಛತ್ತೀಸಗಢದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಯೋಧನಪಾರ್ಥೀವ ಶರೀರ ಬುಧವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿತು.

ಸಕಲ ಸರ್ಕಾರಿ ಗೌರವದೊಂದಿಗೆ ಯೋಧ ಸತೀಶ್ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸತೀಶ ಸೈಯಣ್ಣವರ (31) ಛತ್ತೀಸಗಡದ ದಾಂತೆವಾಡಯಲ್ಲಿ ನಕ್ಸಲ್ ಗುಂಡಿಗೆ ಬಲಿಯಾಗಿದ್ದರು. ಬಡ ಕುಟುಂಬದಿಂದಲೇ ಬಂದಿದ್ದ ಸತೀಶ ತಮ್ಮ ದುಡಿಮೆಯಿಂದ ಇತ್ತೀಚೆಗೆ ಸ್ವಂತ ಮನೆ ಕಟ್ಟಿಸಿದ್ದರು. ಮದುವೆ ಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದರು. ಮುಂದಿನ ವಾರ ಊರಿಗೆ ಬರುವುದಾಗಿ ಕುಟುಂಬದವರಿಗೆ ತಿಳಿಸಿದ್ದರು. [ಚಿಕ್ಕಮಗಳೂರಿನಲ್ಲಿ ನಕ್ಸಲರ ಟೆಂಟ್ ಪತ್ತೆ]

satish

ಬಿಎ ಪದವಿ ಪಡೆದಿದ್ದ ಯೋಧ ಸತೀಶ ಅವರು, ಜಮ್ಮು ಕಾಶ್ಮೀರದಲ್ಲಿ 8 ವರ್ಷ ಸೇವೆ ಸಲ್ಲಿಸಿದ್ದರು. ದಾಂತೇವಾಡದಲ್ಲಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಸತೀಶ ಅವರಿಗೆ ಬೇರೆ ಸ್ಥಳಕ್ಕೆ ವರ್ಗಾವಣೆಯಾಗಿತ್ತು. ಹೊಸ ಸ್ಥಳದಲ್ಲಿ ಕೆಲಸ ಮಾಡಲು ತೆರಳುವ ಮುನ್ನವೇ ನಕ್ಸಲರ ಗುಂಡಿಗೆ ಬಲಿಯಾಗಿ ವೀರಮರಣವನ್ನಪ್ಪಿದ್ದರು. [ಚಿತ್ರಗಳು : ಛತ್ತೀಸ್‌ಗಢದಲ್ಲಿ ಶಾಂತಿ ಸಂದೇಶ ಸಾರಿದ ಮೋದಿ]

ಚಿತ್ರಗಳು: ಶಂಭು ಹುಬ್ಬಳ್ಳಿ

-

-

-

-

ಯೋಧ ಸತೀಶನ ಪಾರ್ಥೀವ ಶರೀರವನ್ನು ಜಿಲ್ಲಾಡಳಿತದಿಂದ ಬರಮಾಡಿಕೊಂಡು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+