Rajaratha Bus: ಉತ್ತರ ಕರ್ನಾಟಕದಿಂದ ಹೈದರಾಬಾದ್ಗೆ ರಾಜರಥ ಎಸಿ ಸ್ಲೀಪರ್ ಬಸ್ ಸೇವೆ; ಮಾರ್ಗ, ವೇಳಾಪಟ್ಟಿ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಭಾಗದಿಂದ ಅದರಲ್ಲೂ ಹುಬ್ಬಳ್ಳಿ-ಧಾರವಾಡ ಮತ್ತು ಅಕ್ಕ ಪಕ್ಕದ ಜಿಲ್ಲೆಗಳಿಂದ ನೆರೆಯ ರಾಜ್ಯ ಆಂಧ್ರಪ್ರದೇಶದ ಪ್ರಮುಖ ನಗರ ಹೈದರಾಬಾದ್ಗೆ ತೆರಳುವವರಿಗೆ ಶುಭ ಸುದ್ದಿ ದೊರೆತಿದೆ. ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ವತಿಯಿಂದ ಹುಬ್ಬಳ್ಳಿ-ಹೈದರಾಬದ್ ನಗರಗಳ ಮಧ್ಯೆ 'ರಾಜರಥ ನೂತನ ಎಸಿ ಸ್ಲೀಪರ್ ಸಾರಿಗೆ' ಸೇವೆ ಆರಂಭವಾಗಿದೆ.
ಏಪ್ರಿಲ್ನಿಂದ ಹುಬ್ಬಳ್ಳಿ -ಹೈದರಾಬಾದ್ ನಡುವೆ 'ರಾಜರಥ ನೂತನ ಎಸಿ ಸ್ಲಿಪರ್ ಸಾರಿಗೆ' ಸೇವೆ ಆರಂಭವಾಗಿದೆ. ಈ ಹಿಂದೆಯು ಒಂದಷ್ಟು ಬಸ್ಗಳಿದ್ದು, ಅದೆಲ್ಲಕ್ಕಿಂತ ಸದರಿ 'ರಾಜರಥ ನೂತನ ಎಸಿ ಸ್ಲಿಪರ್ ಸಾರಿಗೆ' ಭಿನ್ನವಾಗಿದೆ. ಅತ್ಯುತ್ತಮ ಮತ್ತು ಆರಾಮದಾಯಕ ಪ್ರಯಾಣ ಅನುಭವ ನೀಡುತ್ತದೆ. ಇದರ ಟಿಕೆಟ್ ದರ, ಸಂಚಾರ ಸಮಯ, ನಿಲುಗಡೆ ನಿಲ್ದಾಣ ಸೇರಿ, ಟಿಕೆಟ್ ಬುಕಿಂಗ್ ಮಾಹಿತಿ ಇಲ್ಲಿದೆ.

NWKRTC 'ರಾಜರಥ ನೂತನ ಎಸಿ ಸ್ಲಿಪರ್ ಸಾರಿಗೆ' ಬಸ್ ನಿತ್ಯ ಹುಬ್ಬಳ್ಳಿ ನಿಲ್ದಾಣದಿಂದ ರಾತ್ರಿ 7.34ಕ್ಕೆ ಬಿಡುತ್ತದೆ. ಅಲ್ಲಿಂದ ಗದಗ, ಕೊಪ್ಪಳ, ಗಂಗಾವತಿ ಮತ್ತು ರಾಯಚೂರು ಮಾರ್ಗವಾಗಿ ಹೈದರಾಬಾದ್ ಅನ್ನು ಮಾರನೇ ದಿನ ಬೆಳಗ್ಗೆ 7 ಗಂಟೆಗೆ ತಲುಪುತ್ತದೆ. ಒಬ್ಬರಿಗೆ ತಲಾ 1602 ರೂಪಾಯಿ ಇದೆ. ಹೆಚ್ಚಿನ ಮಾಹಿತಿಗೆ ಹಾಗೂ ಆನ್ಲೈನ್ ಬಸ್ ಟಿಕೆಟ್ ಬುಕಿಂಗ್ ಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ http://ksrtc.in ಗೆ ಭೇಟಿ ನೀಡಬೇಕು. ಇಲ್ಲವೇ 77609 91682, 77609 91674 ಗೆ ಸಂಪರ್ಕಿಸಬಹುದಾಗಿದೆ.
515 ಕಿಮೀ ದೂರ, ವಿವಿಧ ಭಾಗದ ಜನರಿಗೆ ಅನುಕೂಲ
ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ವಿವಿಧ ಕಾರ್ಯ ನಿಮಿತ್ತ, ಐಟಿ ಕಂಪನಿ ನೌಕರರು ಹಾಗೂ ಸೌರ್ವಜನಿಕರು ನಿತ್ಯ ಓಡಾಡುತ್ತಾರೆ. ಅದೇ ರೀತಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಿಂದ ಹೈದರಾಬಾದ್ ನಗರಕ್ಕೆ ನಾನಾ ಕೆಲಸ ಕಾರ್ಯಗಳಿಗೆ ತೆರಳುತ್ತಿರುತ್ತಾರೆ.
ಈ ಹಿಂದೆಯು ಕೆಲವು ಬಸ್ಗಳು ಇವೆ. ಹುಬ್ಬಳ್ಳಿ ಮತ್ತು ಹೈದರಾಬಾದ್ ಮಧ್ಯೆ 515 ಕಿಲೋ ಮೀಟರ್ ದೂರವಿದೆ. ಇದನ್ನು ಇನ್ನಿತರ ಬಸ್ಗಳು ಹೆಚ್ಚಿನ ಸಮಯದಲ್ಲಿ ಕ್ರಮಿಸುತ್ತವೆ. ಆದರೆ 'ರಾಜರಥ ನೂತನ ಎಸಿ ಸ್ಲಿಪರ್ ಸಾರಿಗೆ' ಬಸ್ ಕೇವಲ 11 ಗಂಟೆ 24ನಿಮಿಷಗಳಲ್ಲಿ ಕ್ರಮಿಸಲಿದೆ. ಇದರಿಂದ ಹುಬ್ಬಳ್ಳಿ-ಧಾರವಾಡದ ಅವಳಿನಗರ ಮಾತ್ರವಲ್ಲದೇ ಗದಗ, ಕೊಪ್ಪಳ, ರಾಯಚೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಜನರಿಗೂ ಅನುಕೂಲ ಕಲ್ಪಿಸಲಿದೆ ಎಂದು ವಾಯುವ್ಯ ರಾಜ್ಯ ರಸ್ತೆ ಸಾರಿಗೆ ನಿಮಗದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್













Click it and Unblock the Notifications