ಮೈದಾನ ಅಕ್ರಮದಲ್ಲಿ ಬಿಜೆಪಿ ನಾಯಕರು ಶಾಮೀಲು

ಈ ಸಂಬಂಧ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಮಾಜ ಪರಿವರ್ತನ ಸಮುದಾಯದ ಮುಖಂಡ ಎಸ್ಆರ್ ಹಿರೇಮಠ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಸಂಸದ ಅನಂತ ಕುಮಾರ್ ಅವರ ವಿರುದ್ಧ ನೇರ ಆರೋಪ ಮಾಡಿದ್ದಾರೆ.
ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರು ಕಳೆದ ತಿಂಗಳು ಇದೇ ಆರೋಪವನ್ನು ಮುಂದಿಟ್ಟುಕೊಂಡು ಹುಬ್ಬಳಿಯಲ್ಲಿ ಸತ್ಯಾಗ್ರಹ ನಡೆಸಿದ್ದರು ಎಂಬುದು ಗಮನಾರ್ಹ.
ಹುಬ್ಬಳ್ಳಿಯ ಜಿಮಖಾನಾ ಮೈದಾನವು (Karnataka Gymkhana Association) ಸರಕಾರಕ್ಕೆ ಸೇರಿರುವ ಜಾಗ. 1914ರಲ್ಲಿ ಅಂದಿನ ಮುಂಬೈ ಸರಕಾರ ಸಾರ್ವಜನಿಕ ಕ್ರೀಡಾ ಚಟುವಟಿಕೆಗಳಿಗಾಗಿ ಇದನ್ನು ಮಂಜೂರು ಮಾಡಿತ್ತು. ಅದು ಸುಮಾರು 80 ಕೋಟಿ ರೂ. ಮೌಲ್ಯದ್ದಾಗಿದೆ. ಆ ಜಾಗದಲ್ಲಿ ಈ ತ್ರಿಮೂರ್ತಿಗಳ ಹತ್ತಿರದ ಸಂಬಂಧಿಗಳು ಅಕ್ರಮವಾಗಿ ಕ್ಲಬ್ ಕಟ್ಟಡ ನಿರ್ಮಿಸಿಕೊಂಡಿದ್ದಾರೆ ಎಂದು ಎಸ್ಆರ್ ಹಿರೇಮಠ ಆರೋಪಿಸಿದ್ದಾರೆ.
ಆದರೆ 2009ರಿಂದೀಚೆಗೆ ಈ ಆಟದ ಮೈದಾನವನ್ನು ಕೆಲ ಪ್ರಭಾವಿ ರಾಜಕಾರಿಗಳು ಸ್ವಾರ್ಥಕ್ಕಾಗಿ ಸಂಪೂರ್ಣವಾಗಿ ತಮ್ಮ ಸುಪರ್ದಿಗೆ ತೆಗೆದುಕೊಂಡು ರಿಕ್ರಿಯೇಶನ್ ಕ್ಲಬ್ ನಿರ್ಮಿಸಿಕೊಂಡು ಅನುಭವಿಸುತ್ತಿದ್ದಾರೆ. ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಈ ಅಕ್ರಮಕ್ಕೆ ಜಿಲ್ಲಾಧಿಕಾರಿಗಳು (ದರ್ಪಣ್ ಜೈನ್) ಕುಮ್ಮಕ್ಕು ನೀಡಿದ್ದಾರೆ.
ಆದರೆ ಇದು ಸರಕಾರಿ ಜಾಗ ಅಲ್ಲವೇ? ಹೀಗೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ನನ್ನ ಬಳಿ ದಾಖಲೆಗಳು ಇವೆ ಎಂದು ದಾಖಲೆಗಳನ್ನು ಮಾಧ್ಯಮಗಳಿಗೆ ತೋರಿಸಿದ ಹಿರೇಮಠ ಅವರು ಈ ಅಕ್ರಮವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಅಕ್ರಮದಲ್ಲಿ ಯಾರೆಲ್ಲಾ ಭಾಗಿ?:
1. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಅವರ ಸೋದರ ಗೋವಿಂದ ಜೋಶಿ,
2. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಸೋದರ ಪ್ರದೀಪ ಶೆಟ್ಟರ್,
3. ಸಂಸದ ಅನಂತ ಕುಮಾರ್ ಅವರ ಸೋದರ ಎಚ್ ಎನ್ ನಂದಕುಮಾರ್ ಮತ್ತು ಇನ್ನೂ ಕೆಲ ಪ್ರಭಾವಿ ವ್ಯಕ್ತಿಗಳು.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್












Click it and Unblock the Notifications