ಮೈದಾನ ಅಕ್ರಮದಲ್ಲಿ ಬಿಜೆಪಿ ನಾಯಕರು ಶಾಮೀಲು

ಈ ಸಂಬಂಧ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಮಾಜ ಪರಿವರ್ತನ ಸಮುದಾಯದ ಮುಖಂಡ ಎಸ್ಆರ್ ಹಿರೇಮಠ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಸಂಸದ ಅನಂತ ಕುಮಾರ್ ಅವರ ವಿರುದ್ಧ ನೇರ ಆರೋಪ ಮಾಡಿದ್ದಾರೆ.
ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರು ಕಳೆದ ತಿಂಗಳು ಇದೇ ಆರೋಪವನ್ನು ಮುಂದಿಟ್ಟುಕೊಂಡು ಹುಬ್ಬಳಿಯಲ್ಲಿ ಸತ್ಯಾಗ್ರಹ ನಡೆಸಿದ್ದರು ಎಂಬುದು ಗಮನಾರ್ಹ.
ಹುಬ್ಬಳ್ಳಿಯ ಜಿಮಖಾನಾ ಮೈದಾನವು (Karnataka Gymkhana Association) ಸರಕಾರಕ್ಕೆ ಸೇರಿರುವ ಜಾಗ. 1914ರಲ್ಲಿ ಅಂದಿನ ಮುಂಬೈ ಸರಕಾರ ಸಾರ್ವಜನಿಕ ಕ್ರೀಡಾ ಚಟುವಟಿಕೆಗಳಿಗಾಗಿ ಇದನ್ನು ಮಂಜೂರು ಮಾಡಿತ್ತು. ಅದು ಸುಮಾರು 80 ಕೋಟಿ ರೂ. ಮೌಲ್ಯದ್ದಾಗಿದೆ. ಆ ಜಾಗದಲ್ಲಿ ಈ ತ್ರಿಮೂರ್ತಿಗಳ ಹತ್ತಿರದ ಸಂಬಂಧಿಗಳು ಅಕ್ರಮವಾಗಿ ಕ್ಲಬ್ ಕಟ್ಟಡ ನಿರ್ಮಿಸಿಕೊಂಡಿದ್ದಾರೆ ಎಂದು ಎಸ್ಆರ್ ಹಿರೇಮಠ ಆರೋಪಿಸಿದ್ದಾರೆ.
ಆದರೆ 2009ರಿಂದೀಚೆಗೆ ಈ ಆಟದ ಮೈದಾನವನ್ನು ಕೆಲ ಪ್ರಭಾವಿ ರಾಜಕಾರಿಗಳು ಸ್ವಾರ್ಥಕ್ಕಾಗಿ ಸಂಪೂರ್ಣವಾಗಿ ತಮ್ಮ ಸುಪರ್ದಿಗೆ ತೆಗೆದುಕೊಂಡು ರಿಕ್ರಿಯೇಶನ್ ಕ್ಲಬ್ ನಿರ್ಮಿಸಿಕೊಂಡು ಅನುಭವಿಸುತ್ತಿದ್ದಾರೆ. ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಈ ಅಕ್ರಮಕ್ಕೆ ಜಿಲ್ಲಾಧಿಕಾರಿಗಳು (ದರ್ಪಣ್ ಜೈನ್) ಕುಮ್ಮಕ್ಕು ನೀಡಿದ್ದಾರೆ.
ಆದರೆ ಇದು ಸರಕಾರಿ ಜಾಗ ಅಲ್ಲವೇ? ಹೀಗೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ನನ್ನ ಬಳಿ ದಾಖಲೆಗಳು ಇವೆ ಎಂದು ದಾಖಲೆಗಳನ್ನು ಮಾಧ್ಯಮಗಳಿಗೆ ತೋರಿಸಿದ ಹಿರೇಮಠ ಅವರು ಈ ಅಕ್ರಮವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಅಕ್ರಮದಲ್ಲಿ ಯಾರೆಲ್ಲಾ ಭಾಗಿ?:
1. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಅವರ ಸೋದರ ಗೋವಿಂದ ಜೋಶಿ,
2. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಸೋದರ ಪ್ರದೀಪ ಶೆಟ್ಟರ್,
3. ಸಂಸದ ಅನಂತ ಕುಮಾರ್ ಅವರ ಸೋದರ ಎಚ್ ಎನ್ ನಂದಕುಮಾರ್ ಮತ್ತು ಇನ್ನೂ ಕೆಲ ಪ್ರಭಾವಿ ವ್ಯಕ್ತಿಗಳು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications