Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಕರ್ನಾಟಕದಲ್ಲಿ ಸಾರಿಗೆ ಮೂಲಸೌಕರ್ಯ, ಸಾರಿಗೆ ವ್ಯವಸ್ಥೆ ಸುಧಾರಿಸುತ್ತಿದೆ. ಇದರೊಂದಿಗೆ ವಿಮಾನಯಾನ ಮೂಲಸೌಕರ್ಯ, ಹೊಸ ಏರ್ಪೊರ್ಟ್ ನಿರ್ಮಾಣ ಯೋಜನೆಗಳು ಪ್ರಗತಿಯಲ್ಲಿವೆ. ಇದರೊಂದಿಗೆ ಬಹು ದಿನಗಳಿಂದ ಇಡಲಾಗಿದ್ದ ಹುಬ್ಬಳ್ಳಿ-ಹೈದಾರಾಬಾದ್ ಮತ್ತು ಹುಬ್ಬಳ್ಳಿ-ಬೆಂಗಳೂರಿಗೆ ವಿಮಾನ ಸೇವಾರಂಭದ ಬೇಡಿಕೆ ಈಡೇರಿದೆ. ಇದೇ ತಿಂಗಳು ಈ ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ.
ಹುಬ್ಬಳ್ಳಿ ಧಾರವಾಡ ಸೇರಿ ಉತ್ತರ ಕರ್ನಾಟಕದ ಮಂದಿಗೆ ಸಿಹಿ ಸುದ್ದಿ ನೀಡಿರುವ ಕೇಂದ್ರ ಸಚಿವರು ಎಕ್ಸ್ ಪೋಸ್ಟ್ ಮಾಡಿದ್ದಾರೆ. 'ಹುಬ್ಬಳ್ಳಿ-ಧಾರವಾಡದ ಜನತೆಗೆ ಸಂತೋಷದ ಸುದ್ದಿ. http://fly91.in ಏರ್ ಲೈನ್ಸ್ ಅಧಿಕಾರಿಗಳೊಂದಿಗೆ ಹುಬ್ಬಳ್ಳಿಯಿಂದ ಹೈದರಾಬಾದ್ ಹಾಗೂ ಬೆಂಗಳೂರಿಗೆ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ವಿನಂತಿಸಿದ್ದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಏಪ್ರಿಲ್ ಎರಡನೇ ವಾರದಿಂದ ಈ ಸೇವೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ' ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಮುಂದೆ ತಾವು ಬೇಡಿಕೆ ಇಟ್ಟಿದ್ದನ್ನು ವಿವರಿಸಿದರು.

ವಿಮಾನ ಸೇವೆ ಆರಂಭ, ವೇಳಾಪಟ್ಟಿ ಹೀಗಿದೆ
ಮುಂದಿನ ಹದಿನೈದು ದಿನಗಳಲ್ಲಿ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಅಕ್ಕಪ್ಪಕ್ಕ ಜಿಲ್ಲೆಗಳ ಜನರು ಹುಬ್ಬಳ್ಳಿ ಏರ್ಪೋರ್ಟ್ನಿಂದ ರಾಜಧಾನಿ ಬೆಂಗಳೂರು, ನೆರೆಯ ಆಂಧ್ರಪ್ರದೇಶದ ಹೈದರಾಬಾದ್ಗೆ ತೆರಳಬಹುದಾಗಿದೆ. ಏಪ್ರಿಲ್ ಎರಡನೇ ವಾರದಲ್ಲಿ ಆರಂಭವಾಗುವ ವಿಮಾನ ಸೇವೆಯ ವೇಳಾಪಟ್ಟಿ, ಸಮಯ ಮಾಹಿತಿ ಪ್ರಕಟಿಸಲಾಗಿದೆ.
ಹೈದರಾಬದ್-ಹುಬ್ಬಳ್ಳಿ ಫ್ಲೈ-91 ವಿಮಾನ (IC3401) ಮಧ್ಯಾಹ್ನ 3 ಗಂಟೆಗೆ ಹೊರಟು 4.30ಕ್ಕೆ ತಲುಪಲಿದೆ.
ಹುಬ್ಬಳ್ಳಿ-ಬೆಂಗಳೂರು ಫ್ಲೈ-91 ವಿಮಾನವು (IC3411 ) ಸಂಜೆ4.55 ಗಂಟೆಗೆ ಸಂಚಾರ ಆರಂಭಿಸಿ 6.15ಕ್ಕೆ ಗಮ್ಯಸ್ಥಳ ತಲುಪಲಿದೆ.
ಬೆಂಗಳೂರು-ಹುಬ್ಬಳ್ಳಿ ವಿಮಾನವು (IC3412) ಸಂಜೆ 6:45 ಬೆಂಗಳೂರಿನಿಂದ ಹೊರಟು ರಾತ್ರಿ 8:15ಕ್ಕೆ ಬಂದು ಸೇರುತ್ತದೆ.
ಹುಬ್ಬಳ್ಳಿ-ಹೈದರಾಬಾದ್ ವಿಮಾನವು (IC3402) ರಾತ್ರಿ 8:35 ಗಂಟೆಗೆ ಹೊರಟು 9.55 ಗಂಟೆಗೆ ತಲುಪುತ್ತದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಈ ಸಂಸ್ಥೆಗೆ ಕಾರ್ಯ ನಿರ್ವಹಿಸಲು ಸ್ಥಳ ನೀಡಲಾಗಿದೆ. ಸಂಸ್ಥೆಯು ಅವಶ್ಯಕ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದಿರುವ ಕೇಂದ್ರ ಸಚಿವರು ಹುಬ್ಬಳ್ಳಿಯಿಂದ ವಿಮಾನ ಸೇವೆ ಪ್ರಾರಂಭಿಸಿರುವ fly91 ಆಡಳಿತ ಮಂಡಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ.
ಹುಬ್ಬಳ್ಳಿಯಿಂದ ಈಗಾಗಲೇ ದೇಶಿಯ ವಿಮಾನವು ಬೇರೆ ಬೇರೆ ಭಾಗಗಳಿಗೆ ಸಂಚಾರ ಮಾಡುತ್ತಿವಿ. ಬಹುದಿನಗಳಿಂದ ಹುಬ್ಬಳ್ಳಿ-ಹೈದರಾಬಾದ್, ಹುಬ್ಬಳ್ಳಿ-ಬೆಂಗಳೂರಿಗೆ ವಿಮಾನಯಾನ ಅರಂಭಿಸುವಂತೆ ಬೇಡಿಕೆ ಇತ್ತು. ಅದರಂತೆ ಸೇವೆ ಆರಂಭಕ್ಕೆ ಎಲ್ಲ ಸಿದ್ಧತೆ ನಡೆದಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications