ವಾಚ್ ವಿವಾದ : ಎಸಿಬಿಯಿಂದ ಗಿರೀಶ್ ಚಂದ್ರ ವರ್ಮಾ ವಿಚಾರಣೆ
ಬೆಂಗಳೂರು, ಜೂನ್ 16 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಜ್ರ ಖಚಿತ ಉಬ್ಲೋ ವಾಚ್ ಉಡುಗೊರೆಯಾಗಿ ನೀಡಿದ್ದ ಡಾ.ಗಿರೀಶ್ ಚಂದ್ರ ವರ್ಮಾ ಅವರನ್ನು ಎಸಿಬಿ ವಿಚಾರಣೆ ನಡೆಸಿದೆ. ವಾಚ್ಗೆ ಸಂಬಂಧಿಸಿದಂತೆ ದಾಖಲೆಗಳನ್ನು ಅವರು ನೀಡಿದ್ದಾರೆ.
ಬುಧವಾರ ಬೆಂಗಳೂರಿನ ಖನಿಜ ಭವನದಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಚೇರಿಯಲ್ಲಿ 2 ತಾಸಿಗೂ ಹೆಚ್ಚು ಕಾಲ ಡಾ.ಗಿರೀಶ್ ಚಂದ್ರ ವರ್ಮಾ ವಿಚಾರಣೆ ನಡೆದಿದೆ. ಸಿದ್ದರಾಮಯ್ಯ ಅವರಿಗೆ ವಾಚ್ ಅನ್ನು ತಾವೇ ಉಡುಗೊರೆಯಾಗಿ ನೀಡಿದ್ದಾಗಿ ಅವರು ವಿಚಾರಣೆ ವೇಳೆ ಹೇಳಿದ್ದಾರೆ. [ಉಬ್ಲೋ ವಾಚ್ ಬಗ್ಗೆ ಎಸಿಬಿಗೆ ಮೊದಲ ದೂರು!]

'ಸಿದ್ದರಾಮಯ್ಯ ಅವರು 15 ವರ್ಷಗಳಿಂದ ಪರಿಚಿತರು. ಸ್ನೇಹ, ಆತ್ಮೀಯತೆಯಿಂದಾಗಿ ವಾಚ್ ಉಡುಗೊರೆ ನೀಡಲಾಗಿದೆ. ಯಾವುದೇ ಕೆಲಸ ಮಾಡಿಸಿಕೊಳ್ಳಲು ವಾಚ್ ಕೊಟ್ಟಿಲ್ಲ. ಕರ್ನಾಟಕದಲ್ಲಿ ತಮ್ಮ ಯಾವುದೇ ವ್ಯವಹಾರವಿಲ್ಲ' ಎಂದು ಅವರು ಎಸಿಬಿ ಅಧಿಕಾರಿಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ' ಎಂದು ತಿಳಿದುಬಂದಿದೆ. [ದುಬಾರಿ ಉಬ್ಲೋ ವಾಚುಗಳ ಕಥೆ]
ನೋಟಿಸ್ ನೀಡಲಾಗಿತ್ತು : ಎಸಿಬಿ ಸ್ಥಾಪನೆಯಾದ ಬಳಿಕ ಮೊದಲ ದೂರು ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿತ್ತು. ವಕೀಲ ನಟರಾಜ್ ಶರ್ಮಾ ಅವರು ಸಿದ್ದರಾಮಯ್ಯ ಅವರ ವಜ್ರ ಖಚಿತ ಉಬ್ಲೋ ವಾಚ್ನ ಮೂಲ ಯಾವುದು ಎಂದು ತನಿಖೆಯಾಗಬೇಕು? ಎಂದು ದೂರು ಕೊಟ್ಟಿದ್ದರು. [ವಾಚ್ ವಿವಾದ : ಎಚ್ಡಿಕೆಯಿಂದ ಕಾಗೋಡು ತಿಮ್ಮಪ್ಪ ತನಕ]
ದೂರಿನ ಅನ್ವಯ ಎಸಿಬಿ ಎಸಿಪಿ ವೇಣುಗೋಪಾಲ್ ಅವರು ದುಬೈನಲ್ಲಿ ನೆಲೆಸಿರುವ ಡಾ.ಗಿರೀಶ್ ಚಂದ್ರ ವರ್ಮಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಆನ್ಲೈನ್ ಮೂಲಕ ನೋಟಿಸ್ ಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಬುಧವಾರ ಅವರು ಎಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.
ಎಸಿಬಿಯಲ್ಲಿ ತಮ್ಮ ವಿರುದ್ಧ ದೂರು ದಾಖಲಾದಾಗ, 'ಎಸಿಬಿಯಲ್ಲಿ ದೂರು ತೆಗೆದುಕೊಳ್ಳುವುದಿಲ್ಲ ಎಂದು ಕೆಲವರು ಆರೋಪಿಸುತ್ತಿದ್ದರು. ವಾಚ್ ಪ್ರಕರಣದ ಬಗ್ಗೆ ಎಸಿಬಿಯಲ್ಲಿ ದಾಖಲಾದ ದೂರಿನ ಬಗ್ಗೆ ತನಿಖೆಯಾಗಲಿ' ಎಂದು ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ಕೊಟ್ಟಿದ್ದರು.
ವಾಚ್ ಸರ್ಕಾರದ ಆಸ್ತಿ : ಸಿದ್ದರಾಮಯ್ಯ ಅವರ ಕೈಯಲ್ಲಿ ವಜ್ರ ಖಚಿತ ಊಬ್ಲೋ ವಾಚ್ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ಆರೋಪ ಮಾಡಿದ್ದರು. ನಂತರ ರಾಜ್ಯದಲ್ಲಿ ವಾಚ್ ವಿವಾದದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಮಾರ್ಚ್ 2ರಂದು ಸಿದ್ದರಾಮಯ್ಯ ಅವರು ವಾಚ್ ಅನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು, ಈಗ ವಾಚ್ ಸರ್ಕಾರದ ಆಸ್ತಿ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications