ವಾಚ್ ವಿವಾದ : ಎಸಿಬಿಯಿಂದ ಗಿರೀಶ್ ಚಂದ್ರ ವರ್ಮಾ ವಿಚಾರಣೆ
ಬೆಂಗಳೂರು, ಜೂನ್ 16 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಜ್ರ ಖಚಿತ ಉಬ್ಲೋ ವಾಚ್ ಉಡುಗೊರೆಯಾಗಿ ನೀಡಿದ್ದ ಡಾ.ಗಿರೀಶ್ ಚಂದ್ರ ವರ್ಮಾ ಅವರನ್ನು ಎಸಿಬಿ ವಿಚಾರಣೆ ನಡೆಸಿದೆ. ವಾಚ್ಗೆ ಸಂಬಂಧಿಸಿದಂತೆ ದಾಖಲೆಗಳನ್ನು ಅವರು ನೀಡಿದ್ದಾರೆ.
ಬುಧವಾರ ಬೆಂಗಳೂರಿನ ಖನಿಜ ಭವನದಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಚೇರಿಯಲ್ಲಿ 2 ತಾಸಿಗೂ ಹೆಚ್ಚು ಕಾಲ ಡಾ.ಗಿರೀಶ್ ಚಂದ್ರ ವರ್ಮಾ ವಿಚಾರಣೆ ನಡೆದಿದೆ. ಸಿದ್ದರಾಮಯ್ಯ ಅವರಿಗೆ ವಾಚ್ ಅನ್ನು ತಾವೇ ಉಡುಗೊರೆಯಾಗಿ ನೀಡಿದ್ದಾಗಿ ಅವರು ವಿಚಾರಣೆ ವೇಳೆ ಹೇಳಿದ್ದಾರೆ. [ಉಬ್ಲೋ ವಾಚ್ ಬಗ್ಗೆ ಎಸಿಬಿಗೆ ಮೊದಲ ದೂರು!]

'ಸಿದ್ದರಾಮಯ್ಯ ಅವರು 15 ವರ್ಷಗಳಿಂದ ಪರಿಚಿತರು. ಸ್ನೇಹ, ಆತ್ಮೀಯತೆಯಿಂದಾಗಿ ವಾಚ್ ಉಡುಗೊರೆ ನೀಡಲಾಗಿದೆ. ಯಾವುದೇ ಕೆಲಸ ಮಾಡಿಸಿಕೊಳ್ಳಲು ವಾಚ್ ಕೊಟ್ಟಿಲ್ಲ. ಕರ್ನಾಟಕದಲ್ಲಿ ತಮ್ಮ ಯಾವುದೇ ವ್ಯವಹಾರವಿಲ್ಲ' ಎಂದು ಅವರು ಎಸಿಬಿ ಅಧಿಕಾರಿಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ' ಎಂದು ತಿಳಿದುಬಂದಿದೆ. [ದುಬಾರಿ ಉಬ್ಲೋ ವಾಚುಗಳ ಕಥೆ]
ನೋಟಿಸ್ ನೀಡಲಾಗಿತ್ತು : ಎಸಿಬಿ ಸ್ಥಾಪನೆಯಾದ ಬಳಿಕ ಮೊದಲ ದೂರು ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿತ್ತು. ವಕೀಲ ನಟರಾಜ್ ಶರ್ಮಾ ಅವರು ಸಿದ್ದರಾಮಯ್ಯ ಅವರ ವಜ್ರ ಖಚಿತ ಉಬ್ಲೋ ವಾಚ್ನ ಮೂಲ ಯಾವುದು ಎಂದು ತನಿಖೆಯಾಗಬೇಕು? ಎಂದು ದೂರು ಕೊಟ್ಟಿದ್ದರು. [ವಾಚ್ ವಿವಾದ : ಎಚ್ಡಿಕೆಯಿಂದ ಕಾಗೋಡು ತಿಮ್ಮಪ್ಪ ತನಕ]
ದೂರಿನ ಅನ್ವಯ ಎಸಿಬಿ ಎಸಿಪಿ ವೇಣುಗೋಪಾಲ್ ಅವರು ದುಬೈನಲ್ಲಿ ನೆಲೆಸಿರುವ ಡಾ.ಗಿರೀಶ್ ಚಂದ್ರ ವರ್ಮಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಆನ್ಲೈನ್ ಮೂಲಕ ನೋಟಿಸ್ ಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಬುಧವಾರ ಅವರು ಎಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.
ಎಸಿಬಿಯಲ್ಲಿ ತಮ್ಮ ವಿರುದ್ಧ ದೂರು ದಾಖಲಾದಾಗ, 'ಎಸಿಬಿಯಲ್ಲಿ ದೂರು ತೆಗೆದುಕೊಳ್ಳುವುದಿಲ್ಲ ಎಂದು ಕೆಲವರು ಆರೋಪಿಸುತ್ತಿದ್ದರು. ವಾಚ್ ಪ್ರಕರಣದ ಬಗ್ಗೆ ಎಸಿಬಿಯಲ್ಲಿ ದಾಖಲಾದ ದೂರಿನ ಬಗ್ಗೆ ತನಿಖೆಯಾಗಲಿ' ಎಂದು ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ಕೊಟ್ಟಿದ್ದರು.
ವಾಚ್ ಸರ್ಕಾರದ ಆಸ್ತಿ : ಸಿದ್ದರಾಮಯ್ಯ ಅವರ ಕೈಯಲ್ಲಿ ವಜ್ರ ಖಚಿತ ಊಬ್ಲೋ ವಾಚ್ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ಆರೋಪ ಮಾಡಿದ್ದರು. ನಂತರ ರಾಜ್ಯದಲ್ಲಿ ವಾಚ್ ವಿವಾದದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಮಾರ್ಚ್ 2ರಂದು ಸಿದ್ದರಾಮಯ್ಯ ಅವರು ವಾಚ್ ಅನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು, ಈಗ ವಾಚ್ ಸರ್ಕಾರದ ಆಸ್ತಿ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications