'ಸ್ನೇಹಿತ ಕೊಟ್ಟ ಊಬ್ಲೋ ವಾಚ್ ಅಫಿಡೆವಿಟ್ ಕೊಡಿ'
ಬೆಂಗಳೂರು ಮಾರ್ಚ್ 02 : 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಜ್ರ ಖಚಿತ ಊಬ್ಲೋ ವಾಚ್ ಬಗ್ಗೆ ಕೇಂದ್ರಿಯ ತನಿಖಾ ಸಂಸ್ಥೆಗಳಿಂದ ತನಿಖೆಯಾಗಬೇಕು' ಎಂದು ಕುಮಾರಸ್ವಾಮಿ ಅವರು ಒತ್ತಾಯಿಸಿದರು. 'ವಾಚ್ ವಿವಾದದಲ್ಲಿ ತಾವೇ ತೋಡಿಕೊಂಡ ಗುಂಡಿಗೆ ಸಿಎಂ ಬಿದ್ದಿದ್ದಾರೆ' ಎಂದು ಎಚ್ಡಿಕೆ ವ್ಯಂಗ್ಯವಾಡಿದರು. [ಸಿದ್ದರಾಮಯ್ಯ ವಾಚ್ ಇನ್ನು ಸರ್ಕಾರದ ಆಸ್ತಿ]
ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, 'ವಾಚ್ ವಿವಾದದಲ್ಲಿ ವಿಪಕ್ಷಗಳು ಸಿದ್ದರಾಮಯ್ಯ ಅವರ ತೇಜೋವಧೆ ಮಾಡುತ್ತಿಲ್ಲ. ಸ್ವತಃ ಮುಖ್ಯಮಂತ್ರಿಗಳೇ ಗೊಂದಲದ ಹೇಳಿಕೆಗಳನ್ನು ನೀಡುವ ಮೂಲಕ ತೇಜೋವಧೆ ಮಾಡಿಕೊಳ್ಳುತ್ತಿದ್ದಾರೆ' ಎಂದರು. [ಸದನದಲ್ಲಿ ವಾಚ್ ವಾರ್ : ಯಾರು, ಏನು ಹೇಳಿದರು?]

'ವಾಚ್ ವಿಚಾರದ ಕುರಿತು ಚರ್ಚೆ ಮಾಡಲು ರಾಜ್ಯ ಸರ್ಕಾರ ಸಿದ್ಧವಿಲ್ಲ' ಎಂದು ಹೇಳಿದ ಕುಮಾರಸ್ವಾಮಿ ಅವರು,
'ಮುಖ್ಯಮಂತ್ರಿಗಳು ಹೇಳುವಂತೆ ಡಾ.ಗಿರೀಶ್ ಚಂದ್ರ ವರ್ಮಾ ಅವರೇ ವಾಚ್ ನೀಡಿದ್ದರೆ. ಅದನ್ನು ಮೊದಲೇ ಹೇಳಬಹುದಿತ್ತು. ಸ್ಪಷ್ಟನೆ ನೀಡಲು 23 ದಿನ ತೆಗೆದುಕೊಂಡಿದ್ದು ಏಕೆ?' ಎಂದು ಪ್ರಶ್ನಿಸಿದರು. [ಉಭಯ ಸದನಗಳ ಕಲಾಪ ನುಂಗಿದ ವಜ್ರದ ವಾಚ್]
'ವಾಚ್ ಎಲ್ಲಿಂದ ಬಂತು ಎಂಬ ಬಗ್ಗೆ ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಿಂದ ತನಿಖೆಯಾಗಬೇಕು. ಮೊದಲು ಲಾಯರ್ ಕೊಟ್ಟರು, ನಂತರ ವೈದ್ಯರು ಕೊಟ್ಟರು ಎಂದು ಗೊಂದಲದ ಹೇಳಿಕೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಆದ್ದರಿಂದ ಸಿಬಿಐ ಅಥವ ಬೇರೆ ಯಾವುದೇ ಕೇಂದ್ರಿಯ ಸಂಸ್ಥೆಗಳಿಂದ ವಾಚ್ನ ಮೂಲದ ಬಗ್ಗೆ ತನಿಖೆಯಾಗಬೇಕು' ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications