ಊಬ್ಲೋ ವಾಚ್ ವಿವಾದ : ಎಚ್ಡಿಕೆ ವಿರುದ್ಧ ತನಿಖೆಗೆ ಆದೇಶ!
ಬೆಂಗಳೂರು, ಮಾರ್ಚ್ 05 : ವಜ್ರ ಖಚಿತ ಊಬ್ಲೋ ವಾಚ್ ವಿವಾದಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ತನಿಖೆ ನಡೆಸಲು ಕೋರ್ಟ್ ಆದೇಶ ನೀಡಿದೆ. ಊಬ್ಲೋ ವಾಚನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ಕಾರದ ವಶಕ್ಕೆ ನೀಡಿದ್ದಾರೆ.
ಬೆಂಗಳೂರಿನ 3ನೇ ಜೆಎಂಎಫ್ಸಿ ನ್ಯಾಯಾಲಯ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದೆ. ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಅವರು ಕುಮಾರಸ್ವಾಮಿ ಅವರ ವಿರುದ್ಧ ದೂರು ಕೊಟ್ಟಿದ್ದರು. [ವಜ್ರದ ವಾಚ್ ಕೊಟ್ಟ ಸಿದ್ದರಾಮಯ್ಯ ಹೇಳಿದ್ದೇನು?]

ಸ್ವತಃ ಮುಖ್ಯಮಂತ್ರಿಗಳೇ ಊಬ್ಲೋ ವಾಚ್ ಸ್ನೇಹಿತ ಗಿರೀಶ್ ಚಂದ್ರ ಶರ್ಮಾ ಕೊಟ್ಟಿದ್ದು ಎಂದು ಹೇಳಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ವಾಚ್ ಡಾ.ಸುಧಾಕರ ಶೆಟ್ಟಿ ಅವರಿಗೆ ಸೇರಿದ್ದು ಎಂದು ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಹಗರಣದಲ್ಲಿ ಸಿಲುಕಿಸಲು ಕುಮಾರಸ್ವಾಮಿ ಸಂಚು ರೂಪಿಸಿದ್ದಾರೆ ಎಂದು ದೂರು ನೀಡಿದ್ದರು. [ವಾಚ್ ವಾರ್ : ಎಚ್ಡಿಕೆಯಿಂದ ಕಾಗೋಡು ತಿಮ್ಮಪ್ಪ ತನಕ!]
ಡಾ.ಸುಧಾಕರೆ ಶೆಟ್ಟಿ ಅವರು ವಾಚ್ ನನ್ನದಲ್ಲ ಎಂದು ಹೇಳಿದ್ದಾರೆ. ಆದರೆ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ತನಿಖಾಧಿಕಾರಿ ಜೊತೆ ಸೇರಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರ ವಿರುದ್ಧ ಒಳಸಂಚು ರೂಪಿಸಿದ್ದಾರೆ ಎಂದು ಶಂಕರ ಮುನವಳ್ಳಿ ದೂರು ಕೊಟ್ಟಿದ್ದರು. [ಗಡಿಯಾರದ ಗಲಾಟೆ, ಎಚ್ಡಿಕೆ ಬುಟ್ಟಿಯಲ್ಲಿ ಹೊಸ ಹಾವು!]
ಈ ದೂರಿನಲ್ಲಿ ಕುಮಾರಸ್ವಾಮಿ ಅವರು ಮೊದಲ ಆರೋಪಿಯಾಗಿದ್ದು, ಕಬ್ಬನ್ ಪಾರ್ಕ್ ತನಿಖಾಧಿಕಾರಿ 2ನೇ ಆರೋಪಿಯಾಗಿದ್ದಾರೆ. ಈ ದೂರನ್ನು ಆಧರಿಸಿ ಕುಮಾರಸ್ವಾಮಿ ಅವರ ವಿರುದ್ಧ ತನಿಖೆ ನಡೆಸಲು ಜೆಎಂಎಫ್ಸಿ ಕೋರ್ಟ್ ಆದೇಶ ನೀಡಿದೆ. [ಸಖತ್ ಮಿಂಚುತ್ತಿರುವ ದುಬಾರಿ ಉಬ್ಲೋ ವಾಚುಗಳ ಕಥೆ]
ಏನಿದು ವಾಚ್ ವಿವಾದ? : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಲ್ಲಿ ವಜ್ರ ಖಚಿತ ಊಬ್ಲೋ ವಾಚ್ ಇದೆ ಎಂದು ಕುಮಾರಸ್ವಾಮಿ ಮೊದಲು ಆರೋಪ ಮಾಡಿದ್ದರು. ನಂತರ ರಾಜ್ಯದಲ್ಲಿ ವಾಚ್ ವಿವಾದದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಮಾರ್ಚ್ 2ರ ಬುಧವಾರ ಮಧ್ಯಾಹ್ನ 3.30ಕ್ಕೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ದುಬಾರಿ ಬೆಲೆಯ ಊಬ್ಲೋ ವಾಚ್ ಅನ್ನು ಪ್ರತಿಪಕ್ಷಗಳ ಗದ್ದಲದ ನಡುವೆಯೇ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications