Ramchandra Rao: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್, ಎಸ್ಐಟಿ ತನಿಖೆಗೆ ಆಗ್ರಹ: ಸಿಎಂಗೆ ಪತ್ರ
ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿ ಮಹಿಳೆಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿದ್ದ ಡಿಜಿಪಿ ರಾಮಚಂದ್ರ ರಾವ್ ಅವರ ವಿಡಿಯೋ ವೈರಲ್ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆಯಸಲಾಗಿದೆ.
ತುಮಕೂರಿನಲ್ಲಿ ಮಾನವ ಹಕ್ಕುಗಳ ಆಯೋಗ ವತಿಯಿಂದ ರಾಮಚಂದ್ರ ರಾವ್ ಅವರ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡುವಂತೆ ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ ಮತ್ತು ರಾಜ್ಯ ಸರ್ಕಾರಕ್ಕೆ ಪತ್ರ ಮುಖೇನ ಆಯೋಗವು ಕೋರಿದೆ. ಸದ್ಯ ಪ್ರಕರಣದ ತನಿಖೆಗೆ ಸಚಿವರು ಶಿಫಾರಸು ಮಾಡಿದ್ದಾರೆ. ಆದರೆ ಎಸ್ಐಟಿಯಿಂದಲೇ ತನಿಖೆ ನಡೆಸುವಂತೆ ಆಯೋಗವು ಮನವಿ ಮಾಡಿದೆ. ಈ ಬಗ್ಗೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

ವಿಡಿಯೋ ವೈರಲ್ ಪ್ರಕರಣಕ್ಕೆ ಬೆಳಗಾವಿ ಲಿಂಕ್
ರಾಮಚಂದ್ರ ರಾವ್ ಅವರು ಬೆಳಗಾವಿಯಲ್ಲಿ ಐಜಿ ಆಗಿದ್ದಾಗ ಮಹಿಳೆಯರ ಜೊತೆ ಕಚೇರಿಯಲ್ಲೇ ಅನುಚಿತವಾಗಿ ವರ್ತಿಸಿದ್ದಾರೆ. ರಾಸಲೀಲೆಯಲ್ಲಿ ತೊಡಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಡಿಯೋ ರೆಕಾರ್ಡ್ ಆಗಿ ಸುಮಾರು ಏಳೆಂಟು ವರ್ಷಗಳ ಕಳೆದಿವೆ ಎನ್ನಲಾಗಿದೆ. ಬೆಳಗಾವಿಗೂ ಈ ಪ್ರಕರಣಕ್ಕೆ ನಂಟಿದೆ. ಬೆಳಗಾವಿಯಲ್ಲಿ ಅಧಿಕಾರದಲ್ಲಿದ್ದಾಗ ಕಚೇರಿಯಲ್ಲಿ ಮಹಿಳೆಯರ ಜೊತೆಗೆ ಈ ಐಪಿಎಸ್ ಅಧಿಕಾರಿ ರಾವ್ ಅವರು ಅಶ್ಲೀಲವಾಗಿ ನಡೆದುಕೊಂಡಿದ್ದರು ಎಂಬುದು ಗೊತ್ತಾಗಿದೆ.
ಕಚೇರಿಯಲ್ಲಿ ಅನುಚಿತವಾಗಿ ವರ್ತಿಸಿದ ಮಹಿಳೆಯರ ಜೊತೆಗೆ ರಾಮಚಂದ್ರ ರಾವ್ ದೂರವಾಣಿಯಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ. ಅದರ ಆಡಿಯೋ ಕರೆಗಳ ಆನ್ಲೈನ್ ನಲ್ಲಿ ಹರಿದಾಡುತ್ತಿವೆ. ಇನ್ನೂ ರಾಸಲೀಲೆ ವಿಡಿಯೋ ಹೊರ ಬಂದ ಬಳಿಕ ಆ ಬಗ್ಗೆ ಸುದ್ದಿಗಾರರ ಮುಂದೆ ರಾಮಚಂದ್ರ ರಾವ್ ಗೊಂದಲ ಹೇಳಿಕೆ ನೀಡಿದ್ದರು. 'ಇದು ಹಳೇಯ ವಿಡಿಯೋ, ಇದು ಬೆಳಗಾವಿಯಲ್ಲಿದ್ದಾಗ ಏಳೆಂಟು ವರ್ಷದ ಹಿಂದಿನದ್ದು' ಎಂದು ಹೇಳಿ ನಂತರ ವರಸೆ ಬದಲಿಸಿದ್ದರು. ಇದರಲ್ಲಿ ನನ್ನ ಸಿಕ್ಕಿಸಿ ಹಾಕಲಾಗುತ್ತದೆ. ಇದೆಲ್ಲ ಪಿತೂರಿ ಎಂದು ಆರೋಪಗಳನ್ನು ನಿರಾಕರಿಸಿದ್ದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications