Ramchandra Rao: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್, ಎಸ್ಐಟಿ ತನಿಖೆಗೆ ಆಗ್ರಹ: ಸಿಎಂಗೆ ಪತ್ರ
ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿ ಮಹಿಳೆಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿದ್ದ ಡಿಜಿಪಿ ರಾಮಚಂದ್ರ ರಾವ್ ಅವರ ವಿಡಿಯೋ ವೈರಲ್ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆಯಸಲಾಗಿದೆ.
ತುಮಕೂರಿನಲ್ಲಿ ಮಾನವ ಹಕ್ಕುಗಳ ಆಯೋಗ ವತಿಯಿಂದ ರಾಮಚಂದ್ರ ರಾವ್ ಅವರ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡುವಂತೆ ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ ಮತ್ತು ರಾಜ್ಯ ಸರ್ಕಾರಕ್ಕೆ ಪತ್ರ ಮುಖೇನ ಆಯೋಗವು ಕೋರಿದೆ. ಸದ್ಯ ಪ್ರಕರಣದ ತನಿಖೆಗೆ ಸಚಿವರು ಶಿಫಾರಸು ಮಾಡಿದ್ದಾರೆ. ಆದರೆ ಎಸ್ಐಟಿಯಿಂದಲೇ ತನಿಖೆ ನಡೆಸುವಂತೆ ಆಯೋಗವು ಮನವಿ ಮಾಡಿದೆ. ಈ ಬಗ್ಗೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

ವಿಡಿಯೋ ವೈರಲ್ ಪ್ರಕರಣಕ್ಕೆ ಬೆಳಗಾವಿ ಲಿಂಕ್
ರಾಮಚಂದ್ರ ರಾವ್ ಅವರು ಬೆಳಗಾವಿಯಲ್ಲಿ ಐಜಿ ಆಗಿದ್ದಾಗ ಮಹಿಳೆಯರ ಜೊತೆ ಕಚೇರಿಯಲ್ಲೇ ಅನುಚಿತವಾಗಿ ವರ್ತಿಸಿದ್ದಾರೆ. ರಾಸಲೀಲೆಯಲ್ಲಿ ತೊಡಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಡಿಯೋ ರೆಕಾರ್ಡ್ ಆಗಿ ಸುಮಾರು ಏಳೆಂಟು ವರ್ಷಗಳ ಕಳೆದಿವೆ ಎನ್ನಲಾಗಿದೆ. ಬೆಳಗಾವಿಗೂ ಈ ಪ್ರಕರಣಕ್ಕೆ ನಂಟಿದೆ. ಬೆಳಗಾವಿಯಲ್ಲಿ ಅಧಿಕಾರದಲ್ಲಿದ್ದಾಗ ಕಚೇರಿಯಲ್ಲಿ ಮಹಿಳೆಯರ ಜೊತೆಗೆ ಈ ಐಪಿಎಸ್ ಅಧಿಕಾರಿ ರಾವ್ ಅವರು ಅಶ್ಲೀಲವಾಗಿ ನಡೆದುಕೊಂಡಿದ್ದರು ಎಂಬುದು ಗೊತ್ತಾಗಿದೆ.
ಕಚೇರಿಯಲ್ಲಿ ಅನುಚಿತವಾಗಿ ವರ್ತಿಸಿದ ಮಹಿಳೆಯರ ಜೊತೆಗೆ ರಾಮಚಂದ್ರ ರಾವ್ ದೂರವಾಣಿಯಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ. ಅದರ ಆಡಿಯೋ ಕರೆಗಳ ಆನ್ಲೈನ್ ನಲ್ಲಿ ಹರಿದಾಡುತ್ತಿವೆ. ಇನ್ನೂ ರಾಸಲೀಲೆ ವಿಡಿಯೋ ಹೊರ ಬಂದ ಬಳಿಕ ಆ ಬಗ್ಗೆ ಸುದ್ದಿಗಾರರ ಮುಂದೆ ರಾಮಚಂದ್ರ ರಾವ್ ಗೊಂದಲ ಹೇಳಿಕೆ ನೀಡಿದ್ದರು. 'ಇದು ಹಳೇಯ ವಿಡಿಯೋ, ಇದು ಬೆಳಗಾವಿಯಲ್ಲಿದ್ದಾಗ ಏಳೆಂಟು ವರ್ಷದ ಹಿಂದಿನದ್ದು' ಎಂದು ಹೇಳಿ ನಂತರ ವರಸೆ ಬದಲಿಸಿದ್ದರು. ಇದರಲ್ಲಿ ನನ್ನ ಸಿಕ್ಕಿಸಿ ಹಾಕಲಾಗುತ್ತದೆ. ಇದೆಲ್ಲ ಪಿತೂರಿ ಎಂದು ಆರೋಪಗಳನ್ನು ನಿರಾಕರಿಸಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications