ಲಾಕ್ ಡೌನ್: ಮಹತ್ವದ ಅಭಿಪ್ರಾಯ ವ್ಯಕ್ತ ಪಡಿಸಿದ ಇನ್ಫೋಸಿಸ್ ನಾರಾಯಣಮೂರ್ತಿ
ಬೆಂಗಳೂರು, ಏಪ್ರಿಲ್ 30: ಲಾಕ್ ಡೌನ್ ವಿಸ್ತರಣೆಯಾಗುತ್ತಾ ಹೋದರೆ, ಅದರಿಂದ ಸಾರ್ವಜನಿಕರಿಗೆ ಆಗುವ ತೊಂದರೆಯ ಬಗ್ಗೆ ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಮಾತನಾಡಿದ್ದಾರೆ.
"ಇದೇ ರೀತಿ ಲಾಕ್ ಡೌನ್ ಮುಂದುವರಿದರೆ, ಕೊರೊನಾ ಸಾಂಕ್ರಾಮಿಕ ರೋಗಕ್ಕಿಂತ ಹೆಚ್ಚು ಹಸಿವಿನಿಂದಾಗಿ ಭಾರತದಲ್ಲಿ ಜನ ಸಾವನ್ನಪ್ಪಬಹುದು" ಎನ್ನುವ ಆತಂಕವನ್ನು ನಾರಾಯಣಮೂರ್ತಿ ವ್ಯಕ್ತ ಪಡಿಸಿದ್ದಾರೆ.
"ನಮ್ಮ ದೇಶ ಇಂತಹ ಪರಿಸ್ಥಿತಿಯಲ್ಲಿ (ಲಾಕ್ ಡೌನ್) ತುಂಬಾ ದಿನ ಮುಂದವರಿಯಲು ಸಾಧ್ಯವಿಲ್ಲ ಎನ್ನುವ ಸತ್ಯವನ್ನು ನಾವು ಮೊದಲು ಅರಿತುಕೊಳ್ಲಬೇಕು" ಎಂದು ನಾರಾಯಣಮೂರ್ತಿ, ಉದ್ಯಮಿಗಳ ವೆಬಿನಾರ್ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದರು.

"ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಭಾರತದ ಸಾವಿನ ಪ್ರಮಾಣ 0.25-0.5% ರಷ್ಟು ಮತ್ತು ಪಾಸಿಟೀವ್ ಪ್ರಕರಣಗಳು ತೀರಾ ಕಡಿಮೆ" ಎಂದು ನಾರಾಯಣಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.
"ನಮ್ಮ ದೇಶದಲ್ಲಿ ಸರಾಸರಿ ಒಂಬತ್ತು ಮಿಲಿಯನ್ ಜನರು ವಿವಿಧ ಕಾರಣಗಳಿಂದ ಸಾವನ್ನಪ್ಪುತ್ತಿದ್ದಾರೆ, ಇದರಲ್ಲಿ ಪ್ರಮುಖವಾಗಿ ಮಾಲಿನ್ಯದ ಕಾರಣದಿಂದ. ಕಳೆದ ಎರಡು ತಿಂಗಳಲ್ಲಿ ಕೊರೊನಾ ವೈರಸ್ ನಿಂದ ಸುಮಾರು ಒಂದು ಸಾವಿರ ಜನ ಸಾವನ್ನಪ್ಪಿದ್ದಾರೆ".
"ನಮ್ಮ ದೇಶದ ಒಟ್ಟಾರೆ ಸಾವಿನ ಪ್ರಮಾಣವನ್ನು ನೋಡಿದಾಗ, ಕೊರೊನಾದಿಂದ ಸಾವನ್ನಪ್ಪಿರುವ ಸಂಖ್ಯೆ ನೋಡಿ, ನಾವೆಲ್ಲಾ ದಿಗಿಲು ಪಡಬೇಕಾಗಿಲ್ಲ" ಎಂದು ನಾರಾಯಣಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications