ಕಲ್ಯಾಣ ಕರ್ನಾಟಕದ ಜನರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ
ಬೆಂಗಳೂರು, ಸೆಪ್ಟೆಂಬರ್ 20 : ಹೈದ್ರಾಬಾದ್-ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿದೆ. ಐವರು ಸಚಿವರ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ.
ಭಾರತ ಸಂವಿಧಾನದ ಅನುಚ್ಛೇಧ 371 (ಜೆ) ಅಡಿಯಲ್ಲಿ ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ನೀಡಿರುವ ಸ್ಥಾನಮಾನದಡಿಯಲ್ಲಿ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಹಾಗೂ ಪರಾಮರ್ಶೆ ಮಾಡಲು ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ.
ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ನಿಯಮ 13 (5) ಹಾಗೂ ಸುತ್ತೋಲೆ ಪ್ರಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಈ ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡಲು ಸೂಚನೆ ನೀಡಲಾಗಿದೆ.
ಹೈ-ಕ ವಿಶೇಷ ಸ್ಥಾನಮಾನಕ್ಕೆ ಲೋಕಸಭೆ ಅಸ್ತು
ಸಮಿತಿಯಲ್ಲಿರುವವರು : ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಉಳಿದಂತೆ ಸಮಿತಿಯ ಸದಸ್ಯರ ಪಟ್ಟಿ ಕೆಳಗಿನಂತಿದೆ.
ಕಲಬುರಗಿ ಜನರ ಕನಸು ನನಸು; ಒಂದು ತಿಂಗಳಿನಲ್ಲಿ ವಿಮಾನ ಹಾರಾಟ
*
ಆರೋಗ್ಯ
ಮತ್ತು
ಕುಟುಂಬ
ಕಲ್ಯಾಣ
ಸಚಿವ
ಬಿ.
ಶ್ರೀರಾಮುಲು
*
ಕಾನೂನು,
ಸಂಸದೀಯ
ವ್ಯವಹಾರಗಳ
ಸಚಿವ
ಜೆ.
ಸಿ.
ಮಾಧುಸ್ವಾಮಿ
*
ಪಶುಸಂಗೋಪನಾ
ಸಚಿವ
ಪ್ರಭು
ಚೌವ್ಹಾಣ್
*
ಮಹಿಳಾ
ಮತ್ತು
ಮಕ್ಕಳ
ಅಭಿವೃದ್ಧಿ
ಸಚಿವೆ
ಶಶಿಕಲಾ
ಜೊಲ್ಲೆ
ಕಚೇರಿ ಸ್ಥಾಪನೆ : ಬೆಂಗಳೂರಿನಲ್ಲಿರುವ ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಂದು ಭರವಸೆ ನೀಡಿದ್ದಾರೆ.