Get Updates
Get notified of breaking news, exclusive insights, and must-see stories!

ಎಚ್‌.ಡಿ ಕುಮಾರಸ್ವಾಮಿ ಹೇಳಿಕೆ ಸ್ವೀಕಾರ ಮಾಡುತ್ತೇನೆ: ಜಿ. ಪರಮೇಶ್ವರ್

ಬೆಂಗಳೂರು: ಬಳ್ಳಾರಿ ಪ್ರಕರಣ ಹಾಗೂ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಿಯಾಕ್ಟ್‌ ಮಾಡಿದ್ದಾರೆ. ಬಳ್ಳಾರಿ ಘಟನೆಯ ಪ್ರಕರಣದ‌ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮಾರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ‌. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದು ಹೇಳಿದರು‌.

I accept HD Kumaraswamy s statement Says G Parameshwar

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ ಎಂದು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ ಎಂದು ಅವರಿಗೆ ಹೇಳಬಯಸುತ್ತೇನೆ. 38 ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮಾರ್ಥ್ಯ ಮತ್ತು ವ್ಯಕ್ತಿತ್ವನೂ ಅವರಿಗೆ ಗೊತ್ತಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ‌ ಎಂದರು.

ಹುಬ್ಬಳ್ಳಿ ಘಟನೆಯ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ನಾವು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮಹಿಳೆಯೇ ಆ ರೀತಿ ಮಾಡಿಕೊಂಡಿದ್ದಾರೆ ಎನ್ನುವ ಸ್ಪಷ್ಟನೆಯನ್ನು ಕಮಿಷನರ್ ನೀಡಿದ್ದಾರೆ. ಕಮಿಷನರ್ ಸ್ಪಷ್ಟಪಡಿಸಿದ ಮೇಲೆ ಅದಕ್ಕಿಂತ ಇನ್ನೇನು ಬೇಕಾಗಿದೆ. ಎಲ್ಲದರಲ್ಲೂ ರಾಜಕೀಯ ಮಾಡುವುದು ಒಳ್ಳೆಯದಲ್ಲ‌. ಹೆಣ್ಣುಮಗಳ ವಿಚಾರವನ್ನು ಕೈಗೆತ್ತಿಕೊಂಡು ರಾಜಕೀಯ ಮಾಡುವುದು ಸರಿ ಕಾಣುವುದಿಲ್ಲ ಎಂದು ಹೇಳಿದರು.

ಯಾವ ಪಕ್ಷದವನ್ನು ಅವರ ರಾಜಕೀಯ ಪಕ್ಷದ ಹಿನ್ನೆಲೆಯಲ್ಲಿ ಟಾರ್ಗೆಟ್ ಮಾಡುವುದಿಲ್ಲ. ಪೊಲೀಸರು ಆ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ, ಮಾಡಕೂಡದು. ಇದಕ್ಕೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ. ಯಾವುದೇ ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಅಕ್ರಮ ಬಾಂಗ್ಲಾ ವಲಿಸಗರನ್ನು ಹಿಡಿದು, ಗಡಿಪಾರು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಪ್ರಕರಣಗಳನ್ನು ಮಾಡಿದ್ದೇವೆ. ಬಾಂಗ್ಲಾ ದೇಶದವರು ರಾಜ್ಯದಲ್ಲಿ ಅನಧಿಕೃತವಾಗಿ ಎಲ್ಲಿಯೇ ಇದ್ದರು ಪತ್ತೆ ಹಚ್ಚಿ, ಗಡಿಪಾರು ಮಾಡುತ್ತೇವೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+